Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಜಿಪಂ ಕ್ಷೇತ್ರಗಳ ಮೀಸಲಾತಿ...

ಶಿವಮೊಗ್ಗ ಜಿಪಂ ಕ್ಷೇತ್ರಗಳ ಮೀಸಲಾತಿ ಬದಲಿಸಿ ಚುನಾವಣೆ: ಘಟಾನುಘಟಿಗಳಿಗೆ ಕೈ ತಪ್ಪಿದ ಕ್ಷೇತ್ರ

ವಾರ್ತಾಭಾರತಿವಾರ್ತಾಭಾರತಿ4 July 2021 10:08 AM IST
share

ಶಿವಮೊಗ್ಗ, ಜು. 3: ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲು ಬದಲಿಸಿ ಚುನಾವಣೆ ಆಯೋಗವು ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ. ಇದರಿಂದಾಗಿ ಶೇ.80-90ರಷ್ಟು ಕ್ಷೇತ್ರಗಳಲ್ಲಿ ಈಗಿರುವ ಸದಸ್ಯರಿಗೆ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ. ಜೊತೆಗೆ ಜಿಪಂನ ಹಲವು ಹಾಲಿ ಸದಸ್ಯರು ಸ್ಪರ್ಧೆಯ ಅವಕಾಶವನ್ನೇ ಕಳೆದುಕೊಳ್ಳಲಿದ್ದಾರೆ.

ಘಟಾನುಘಟಿಗಳ ಕ್ಷೇತ್ರದಲ್ಲೂ ಮೀಸಲಾತಿ ಬದಲಾಗಿದ್ದು, ಅವರು ಬೇರೆಯ ಕ್ಷೇತ್ರದಿಂದ ಸ್ಪರ್ಧಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಜಿಪಂ ನಿಕಟಪೂರ್ವ ಅಧ್ಯಕ್ಷೆ ಜ್ಯೋತಿ ಎಸ್.ಪ್ರಕಾಶ್ ಅವರಿಗೂ ಕ್ಷೇತ್ರ ಕೈ ತಪ್ಪಿದೆ. ಈ ಹಿಂದೆ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಕ್ಷೇತ್ರವು ಎಸ್ಸಿ ಮಹಿಳೆಯ ಪಾಲಾಗಿದೆ. ಹೀಗಾಗಿ, ಜ್ಯೋತಿ ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ಪ್ರತಿನಿಧಿಸುವ ಅವಕಾಶದಿಂದ ವಂಚಿತರಾಗಿದ್ದಾರೆ.

ಅದೇ ರೀತಿ, ನಿಕಟ ಪೂರ್ವ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಅವರು ಪ್ರತಿನಿಧಿಸಿದ್ದ ಹಸೂಡಿ ಕ್ಷೇತ್ರ ಈ ಹಿಂದೆ ಸಾಮಾನ್ಯ ಮಹಿಳೆಗೆ ಮೀಸಲಿತ್ತು. ಈಗ ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ. ಹೀಗಾಗಿ, ಈ ಕ್ಷೇತ್ರದಿಂದ ವಿಜಯ್ ಕುಮಾರ್ (ಧನ್ನಿ) ಅವರು ಸ್ಪರ್ಧಿಸುವ ಸಾಧ್ಯತೆ ಇದೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಈ. ಕಾಂತೇಶ್ ಅವರು ಪ್ರತಿನಿಧಿಸುತ್ತಿದ್ದ ಹೊಳಲೂರು ಕ್ಷೇತ್ರವು ಸಾಮಾನ್ಯ ಮಹಿಳೆಗೆ ಮೀಸಲು ಇಡಲಾಗಿದೆ. ಹೀಗಾಗಿ, ಅವರು ಮತ್ತೊಮ್ಮೆ ಇದೇ ಕ್ಷೇತ್ರದಿಂದ ಕಣಕ್ಕಿಳಿಯುವಂತಿಲ್ಲ. ಬದಲಿಗೆ ಬೇರೆ ಕ್ಷೇತ್ರದ ಕಡೆಗೆ ಮುಖ ಮಾಡುವಂತಾಗಿದೆ. ಕಲಗೋಡು ರತ್ನಾಕರ್ ಅವರಿಗೂ ಕ್ಷೇತ್ರ ಇಲ್ಲವಾಗಿದೆ. ಆದರೆ, ಈ ಹಿಂದೆ ಪ್ರತಿನಿಧಿಸಿದ್ದ ರಿಪ್ಪನ್‌ಪೇಟೆ ಕ್ಷೇತ್ರ ಸಾಮಾನ್ಯ ವರ್ಗದ ಪಾಲಾಗಿರುವುದರಿಂದ ಬಂಡಿರಾಮಚಂದ್ರ ಹಾಗೂ ರತ್ನಾಕರ್ ನಡುವೆ ಟಿಕೆಟ್ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ.

ಹುಂಚ ಕ್ಷೇತ್ರವು ಬಿಸಿಎಂ-ಎ ಮಹಿಳೆಗೆ ಮೀಸಲಿಟ್ಟಿದ್ದು, ಶ್ವೇತಾ ಬಂಡಿ ಅವರಿಗೆ ಸ್ಪರ್ಧೆಯ ಅವಕಾಶ ಇದೆ. ನಗರ ಕ್ಷೇತ್ರವನ್ನು ಎಸ್ಸಿ ಮಹಿಳೆಗೆ ಮೀಸಲು ಇಟ್ಟಿದ್ದು, ಸುರೇಶ್ ಸ್ವಾಮಿರಾವ್ ಅವರಿಗೆ ಕ್ಷೇತ್ರವೇ ಇಲ್ಲದಂತಾಗಿದೆ. ಬಿಜೆಪಿ ನಾಯಕ ಭಾನುಪ್ರಕಾಶ್ ಅವರ ಪುತ್ರ ಕಣ್ಣು ಇಟ್ಟಿದ್ದರೆನ್ನಲಾದ ಗಾಜನೂರು ಕ್ಷೇತ್ರ ಎಸ್ಸಿ ಮಹಿಳೆಯ ಪಾಲಾಗಿದ್ದು, ಅವರಿಗೂ ನಿರಾಸೆಯಾಗಿದೆ.ಅದೇ ರೀತಿ, ಹಾರನಹಳ್ಳಿಯಲ್ಲೂ ಅಭ್ಯರ್ಥಿಗಳಿಗೆ ಇದೇ ರೀತಿಯ ಸಮಸ್ಯೆಯಾಗಿದ್ದು, ಅವರು ಬೇರೆಯ ಕ್ಷೇತ್ರಕ್ಕೆ ವಲಸೆ ಹೋಗುವಂತಾಗಿದೆ.

ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಹೊಸನಗರ ಕ್ಷೇತ್ರವು ವಿಲೀನಗೊಂಡ ಪರಿಣಾಮ ಕಲಗೋಡು ರತ್ನಾಕರ್ ಅವರಿಗೆ ಕ್ಷೇತ್ರ ಬದಲಿಸುವ ಸವಾಲು ಎದುರಾಗಿದೆ. ಆನವೇರಿ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಕಾರಣ ವೀರಭದ್ರ ಪೂಜಾರಿ ಅವರು ಅದೇ ಕ್ಷೇತ್ರದಿಂದ ಪುನರ್ ಸ್ಪರ್ಧಿಸುವ ಅವಕಾಶವಿದೆ.

ಲಿಂಗಾಪುರ ಕ್ಷೇತ್ರವು ಬಿಸಿಎಂ-ಎ ಮಹಿಳೆಗೆ ಮೀಸಲಾಗಿರುವ ಕಾರಣ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಕಾಸರವಳ್ಳಿ ಶ್ರೀನಿವಾಸ್ ಅವರಿಗೆ ಅವಕಾಶ ಕೈತಪ್ಪಿದೆ. ಜಿಪಂ ಹಿಂದೆ ಕೂಡ್ಲಿಗೆರೆಯಿಂದ ಪ್ರತಿನಿಧಿಸಿದ ಮಣಿಶೇಖರ್, ಸಿಂಗನಮನೆ ಕ್ಷೇತ್ರ ಜೆ.ಪಿ.ಯೋಗೇಶ್ ಅವರು ಕ್ಷೇತ್ರದಿಂದ ಸ್ಪರ್ಧಿಸುವ ಅವಕಾಶ ಕಳೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X