Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ, ಚೀನದೊಂದಿಗಿನ ಸಂಬಂಧ...

ಭಾರತ, ಚೀನದೊಂದಿಗಿನ ಸಂಬಂಧ ಸಮತೋಲನಗೊಳಿಸುವ ಗುರಿ: ನೂತನ ರಾಷ್ಟ್ರೀಯ ಭದ್ರತಾ ಯೋಜನೆ ಪ್ರಕಟಿಸಿದ ರಶ್ಯಾ

ವಾರ್ತಾಭಾರತಿವಾರ್ತಾಭಾರತಿ4 July 2021 11:25 PM IST
share

ಮಾಸ್ಕೋ, ಜು.4: ಅಮೆರಿಕನ್ ಡಾಲರ್ ಆಧಾರಿತ ವ್ಯವಹಾರಗಳನ್ನು ತ್ಯಜಿಸುವ ಮತ್ತು ಭಾರತ, ಚೀನಾದೊಂದಿಗಿನ ಸಂಬಂಧವನ್ನು ಸಮತೋಲನಗೊಳಿಸುವ ಉದ್ದೇಶ ಹೊಂದಿರುವ ನೂತನ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರವನ್ನು ರಶ್ಯಾ ಪ್ರಕಟಿಸಿದೆ.

ಭಾರತ-ಚೀನಾ ನಡುವಿನ ಬಿಕ್ಕಟ್ಟು ಕಳೆದ ಒಂದು ವರ್ಷದಿಂದಲೂ ಮುಂದುವರಿದಿರುವ ಮಧ್ಯೆಯೇ ರಶ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಶನಿವಾರ ನೂತನ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರವನ್ನು ಪ್ರಕಟಿಸಿದ್ದಾರೆ ಎಂದು ವರದಿಯಾಗಿದೆ.

ಭಾರತದೊಂದಿಗಿನ ವ್ಯೂಹಾತ್ಮಕ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ಚೀನಾದೊಂದಿಗಿನ ಸಮಗ್ರ ಪಾಲುದಾರಿಕೆಯನ್ನು ಅಭಿವೃದ್ಧಿಗೊಳಿಸುವ ಉದ್ದೇಶವನ್ನು ಹೊಂದಲಾಗಿದೆ. ಏಶ್ಯಾ - ಪೆಸಿಫಿಕ್ ವಲಯದಲ್ಲಿ ಪ್ರಾದೇಶಿಕ ಸ್ಥಿರತೆ ಮತ್ತು ಭದ್ರತೆಯನ್ನು ಖಾತರಿಗೊಳಿಸುವ ಪ್ರಕ್ರಿಯೆಯನ್ನು ಆರಂಭಿಸುವ ಉದ್ದೇಶವಿದೆ ಎಂದು ರಶ್ಯಾದ ‘ಸ್ಪುಟ್ನಿಕ್’ ಸುದ್ಧಿಸಂಸ್ಥೆ ವರದಿ ಮಾಡಿದೆ.

ವಿಶ್ವದ ಅಣ್ವಸ್ತ್ರ ರಾಷ್ಟ್ರಗಳನ್ನು ಒಳಗೊಂಡ ಸ್ಥಳೀಯ ಶಸಸ್ತ್ರ ಸಂಘರ್ಷ ಪ್ರಾದೇಶಿಕ ಸಂಘರ್ಷವಾಗಿ ರೂಪುಗೊಳ್ಳುವ ಅಪಾಯವಿದೆ ಎಂದು ಭಾರತ-ಚೀನಾ ನಡುವಿನ ಬಿಕ್ಕಟ್ಟನ್ನು ನೂತನ ಕಾರ್ಯತಂತ್ರದಲ್ಲಿ ಪರೋಕ್ಷವಾಗಿ ಉಲ್ಲೇಖಿಸಲಾಗಿದೆ. ಅಂತರಾಷ್ಟ್ರೀಯ ವ್ಯವಹಾರದಲ್ಲಿ ಅಮೆರಿಕದ ಡಾಲರ್ ಬಳಕೆ ಕಡಿಮೆಗೊಳಿಸಿದರೆ ರಶ್ಯಾದ ಆರ್ಥಿಕ ಭದ್ರತೆಗೆ ಉತ್ತೇಜನ ದೊರಕುತ್ತದೆ ಎಂದು ಹೇಳಿದೆ. ವಿದೇಶದ ನಿರ್ಬಂಧ ಹಾಗೂ ಒತ್ತಡವನ್ನು ತಾಳಿಕೊಳ್ಳುವ ಸಾಮರ್ಥ್ಯ ತನಗಿರುವುದನ್ನು ರಶ್ಯಾ ಹಲವು ಬಾರಿ ಪ್ರದರ್ಶಿಸಿದೆ. ವಿದೇಶದ ಗುಪ್ತಚರ ಪಡೆಗಳ ನೆರವಿನಿಂದ ಕೆಲವು ದೇಶಗಳ ಸೇನೆಗಳು ರಶ್ಯಾದ ಪ್ರಮುಖ ಮೂಲಸೌಕರ್ಯವನ್ನು , ಮುಖ್ಯವಾಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ , ಹಾಳುಗೆಡವಲು ಪ್ರಯತ್ನಿಸಿದೆ. ಕೆಲವರ ಸ್ನೇಹಪರವಲ್ಲದ ಕ್ರಿಯೆಗಳು ರಶ್ಯದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಬೆದರಿಕೆಯೊಡ್ಡುವಂತಿದ್ದರೆ ಅವನ್ನು ಸೂಕ್ತ ವಿಧಾನಗಳಿಂದ ಪ್ರತಿಬಂಧಿಸಬೇಕು ಎಂದು ರಾಷ್ಟ್ರೀಯ ಕಾರ್ಯನೀತಿಯಲ್ಲಿ ವಿವರಿಸಲಾಗಿದೆ

ಅಮೆರಿಕಾ ವಿರುದ್ಧ ವಾಗ್ಬಾಣ:

‘ಜಾಗತಿಕ ಅಭಿವೃದ್ಧಿ ಸಾಮರ್ಥ್ಯದ ಮರುಹಂಚಿಕೆ ಭೌಗೋಳಿಕ ರಾಜಕೀಯ ಅಸ್ಥಿರತೆ ಮತ್ತು ಬಿಕ್ಕಟ್ಟು ಹೆಚ್ಚಲು ಕಾರಣವಾಗಿದೆ. ತಮ್ಮ ನಿರ್ಬಂಧವಿಲ್ಲದ ನಾಯಕತ್ವವನ್ನು ಕಳೆದುಕೊಳ್ಳುತ್ತಿರುವ ದೇಶಗಳು ಇದನ್ನು ತಡೆಯುವ ನೆಪದಲ್ಲಿ ನ್ಯಾಯಸಮ್ಮತವಲ್ಲದ ಸ್ಪರ್ಧೆ, ಏಕಪಕ್ಷೀಯ ನಿರ್ಬಂಧ ವಿಧಿಸುವುದು ಅಥವಾ ಇತರ ದೇಶಗಳ ಆಂತರಿಕ ವಿಷಯದಲ್ಲಿ ಬಹಿರಂಗ ಹಸ್ತಕ್ಷೇಪದ ಮೂಲಕ ತಮ್ಮದೇ ನಿರಂಕುಶ ನಿಯಮ ಮತ್ತು ಅಧಿಪತ್ಯ ಸ್ಥಾಪಿಸಲು ಪ್ರಯತ್ನಿಸುತ್ತಿವೆ’ ಎಂದು ರಶ್ಯಾದ ನೂತನ ರಾಷ್ಟ್ರೀಯ ನೀತಿಯಲ್ಲಿ ಅಮೆರಿಕ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X