Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಕ್ಸಿಜನ್ ದುರಂತ ಬೇರೆ ಜಿಲ್ಲೆಯಲ್ಲಿ...

ಆಕ್ಸಿಜನ್ ದುರಂತ ಬೇರೆ ಜಿಲ್ಲೆಯಲ್ಲಿ ನಡೆದಿದ್ದರೆ ಸರಕಾರವೇ ಉರುಳುತ್ತಿತ್ತು: ಮಾಜಿ ಸಚಿವ ಚೆಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ8 July 2021 10:54 PM IST
share
ಆಕ್ಸಿಜನ್ ದುರಂತ ಬೇರೆ ಜಿಲ್ಲೆಯಲ್ಲಿ ನಡೆದಿದ್ದರೆ ಸರಕಾರವೇ ಉರುಳುತ್ತಿತ್ತು: ಮಾಜಿ ಸಚಿವ ಚೆಲುವರಾಯಸ್ವಾಮಿ

ಚಾಮರಾಜನಗರ, ಜು.8: ಅಂತರ್ ರಾಜ್ಯಗಳ ಗಡಿ ಚಾಮರಾಜನಗರದಲ್ಲಿ ಮೇ ತಿಂಗಳ 2 ರಂದು ರಾತ್ರಿ ನಡೆದ ಕೋವಿಡ್ ಆಸ್ಪತ್ರೆಯ ಆಕ್ಸಿಜನ್ ದುರಂತವೇನಾದರೂ ಬೇರೆ ಜಿಲ್ಲೆಯಲ್ಲಿ ಸಂಭವಿಸಿದ್ದರೆ ರಾಜ್ಯ ಸರಕಾರ ಪತನವಾಗುತ್ತಿತ್ತು. ಆಕ್ಸಿಜನ್ ದುರಂತದಲ್ಲಿ ಮಡಿದ 36 ಮಂದಿಯ ಕುಟುಂಬಕ್ಕೆ ಸರಕಾರ ಸಾಂತ್ವನ ಹೇಳಲಿಲ್ಲ. ದುರ್ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದರೂ ಸರಕಾರ ಪತನವಾದ ಉದಾಹರಣೆ ಇದೆ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.

ಚಾಮರಾಜನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಆಯೋಜಿಸಲಾಗಿದ್ದ ಸೈಕಲ್ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಕ್ಸಿಜನ್ ದುರಂತ ಏನಾದರೂ ಚಾಮರಾಜನಗರ ಬಿಟ್ಟು ಬೇರೆ ಜಿಲ್ಲೆಯಲ್ಲಿ ಆಗಿದ್ದರೆ ಸರಕಾರವೇ ಉರುಳುತ್ತಿತ್ತು. ಓರ್ವ ಸತ್ತಾಗಲೇ ಸರಕಾರಗಳು ಬಿದ್ದ ಉದಾಹರಣೆ ಇದೆ. 36 ಮಂದಿ ಸತ್ತರೂ ಸರಕಾರ ಸಾಂತ್ವನ ಹೇಳಿಲ್ಲವಲ್ಲ. ನಾವು ಹೋರಾಟ ಮಾಡಿದ ಬಳಿಕ ಕೋವಿಡ್ ನಿಂದ ಮೃತಪಟ್ಟವರಿಗೆ ಒಂದು ಲಕ್ಷ ರೂ. ಪರಿಹಾರ ಕೊಡಲು ಸರಕಾರ ಘೋಷಿಸಿತು ಎಂದರು.

ಒಂದೆಡೆ ಕೊರೋನದಿಂದ ಆರ್ಥಿಕ ಸಂಕಷ್ಟ, ಬೀದಿಗೆ ಬಿದ್ದ ಜೀವನದ ನಡುವೆ ಬೆಲೆ ಏರಿಕೆಯು ಜನ ಸಾಮಾನ್ಯನನ್ನು ಹೈರಣಾಗಿಸಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳೆರಡಕ್ಕೂ ಆಡಳಿತ ನಡೆಸಲು ನೈತಿಕತೆಯೇ ಇಲ್ಲ. ದರ ಏರಿಕೆಯ ಬಗ್ಗೆ ಇದುವರೆಗೂ ಪ್ರಧಾನಿ ಮಾತನಾಡಿಲ್ಲ. ಇದು ಅವರಿಗೆ ವಿಚಾರವೇ ಅಲ್ಲದಾಗಿದೆ. ಜನರು ಎಚ್ಚರಗೊಳ್ಳುವ ತನಕ ಈ ಸಮಸ್ಯೆಗಳಿಗೆ ಮುಕ್ತಿ ಇಲ್ಲ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಮಾತನಾಡಿ, ಯುಪಿಎ ಸರಕಾರದ ಅಧಿಕಾರದ ಅವಧಿಗಿಂತ ಈಗಲೇ ಪ್ರತಿ ಬ್ಯಾರೆಲ್ ಗೆ ಕಡಿಮೆ ಬೆಲೆ ಇದ್ದರೂ ಹತ್ತಾರು ಪಟ್ಟು ಹೆಚ್ಚು ದುಡ್ಡು ಕೊಟ್ಟು ಇಂಧನ ಖರೀದಿಸಬೇಕಿದೆ ಎಂದು ಕಿಡಿಕಾರಿದರು.

ಇಂಧನ ಬೆಲೆ ಹಾಗೂ ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಇಂದು ಹಮ್ಮಿಕೊಂಡಿದ್ದ ಸೈಕಲ್ ಜಾಥಾದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ಹೊರಹಾಕಿದರು.

ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಡಳಿತ ಭವನದರೆಗೆ ಸೈಕಲ್ ಜಾಥಾ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X