Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ...

ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರಕಾರದ ಆದ್ಯತೆ: ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ10 July 2021 10:13 PM IST
share
ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರಕಾರದ ಆದ್ಯತೆ: ಯಡಿಯೂರಪ್ಪ

ಕಲಬುರಗಿ, ಜು. 10: `ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಸರಕಾರದ ಮೊದಲ ಆದ್ಯತೆಯಾಗಿದೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶನಿವಾರ ನಗರದ ಎಂಎಸ್‍ಕೆ ಮಿಲ್ ವಾಣಿಜ್ಯ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ಅನುದಾನದಡಿಯಲ್ಲಿ 2 ಎಕರೆ ಪ್ರದೇಶದಲ್ಲಿ ಸುಮಾರು 26.30 ಕೋಟಿ ರೂ. ವೆಚ್ಚದಲ್ಲಿ ನೂತನ ಮಾದರಿಯ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, `ಅನ್ನದಾತ ಬೆಳೆದ ಬೆಳೆ ಸೂಕ್ತ ಮಾರುಕಟ್ಟೆ ದೊರಕಬೇಕು ಎಂಬ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಲಾಗುತ್ತಿದೆ.

ಕೋವಿಡ್ ಸಂದರ್ಭದಲ್ಲಿ ಹೂವು ಬೆಳೆಗಾರರಿಗೆ ಹಾಗೂ ತರಕಾರಿ ಮಾರಾಟಗಾರರು ಸೂಕ್ತ ಮಾರುಕಟ್ಟೆ ಸಿಗದೆ ಕಷ್ಟ ಅನುಭವಿಸಿದ್ದರು. ಇದನ್ನರಿತ ಕೇಂದ್ರ ಸರಕಾರ ದೂರದ ಪ್ರದೇಶದಲ್ಲಿಯೂ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡಲು ಸಾಗಾಣಿಕೆಗೆ `ಕಿಸಾನ್ ರೈಲು' ಯೋಜನೆ ಜಾರಿಗೆ ತಂದಿದ್ದು, ರೈತರಿಗೆ ತುಂಬಾ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ರೈತರ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸುವುದು' ಎಂದು ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 20 ಕೊಟಿ ರೂ.ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರದಿಂದ 6.30 ಕೋಟಿ ರೂ. ಹೀಗೆ ಒಟ್ಟು 26.30ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣ ರಾಜ್ಯದ ಇತಿಹಾಸದಲ್ಲೇ ಮೊದಲ ಕಟ್ಟಡವಾಗಿದ್ದು, ತುಂಬಾ ಸಂತೋಷದಿಂದ ಅಡಿಗಲ್ಲು ನೆರವೇರಿಸಿದ್ದೇನೆ. ಈ ತರಹದ ಮಾದರಿ ತರಕಾರಿ ಮಾರುಕಟ್ಟೆ ನಿರ್ಮಾಣದ ಕುರಿತು ಪ್ರಧಾನಿ ಮೋದಿ ಗಮನಕ್ಕೂ ತರಲಾಗುವುದು' ಎಂದರು.

ಕಲಬುರಗಿ ನಗರದ ಕಣ್ಣಿ ಮಾರುಕಟ್ಟೆಯಲ್ಲಿ ಸಿದ್ದಗೊಳ್ಳಲಿರುವ ನೂತನ ಕಾಯಿಪಲ್ಲೆ ಮಾರುಕಟ್ಟೆಯಿಂದ ಈ ಭಾಗದ ರೈತರ ಹಾಗೂ ಜನರ ಬಹುದಿನಗಳ ಕನಸು ನನಸಾಗಲಿದ್ದು, ರಸ್ತೆ ಬದಿಯಲ್ಲಿ ತರಕಾರಿ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದ ಮತ್ತು ಮಳೆಗಾಲದಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದ ರೈತಾಪಿ ವರ್ಗಕ್ಕೆ ಇದರಿಂದ ನೆಮ್ಮದಿ ಸಿಕ್ಕಿದೆ. ರಸ್ತೆಯುದ್ದಕ್ಕೂ ಜನ ಗುಂಪಾಗಿ ಸೇರುವ ಕಾರಣ ಅಪಘಾತವಾಗುವ ಸಾಧ್ಯತೆಗಳನ್ನು ಮನಗಂಡು ತರಕಾರಿ ಮಾರುಕಟ್ಟೆ ಸ್ಥಾಪಿಸಲಾಗುತ್ತಿದೆ. ಇದರಿಂದ ಪ್ರದೇಶದಲ್ಲಿನ ಮುಕ್ತ ಸಂಚಾರಕ್ಕೂ ಅನುವಾಗಲಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ರೈತ ಬೆಳೆದ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ದೊರಕಿಸುವಲ್ಲಿ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕೃಷಿ ನಮ್ಮ ಆದ್ಯತಾ ವಲಯವಾಗಿದ್ದು, ಕೃಷಿಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಿದೆ. ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ ತಲಾ 10 ಸಾವಿರ ರೂ.ಗಳಂತೆ 20 ಸಾವಿರ ರೈತರಿಗೆ ಪರಿಹಾರ ನೀಡಲಾಗಿದೆ. ಅದೆ ರೀತಿ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಗರಿಷ್ಠ 1 ಹೆಕ್ಟೇರ್ ಗೆ ತಲಾ 10 ಸಾವಿರ ರೂ.ಗಳಂತೆ 69 ಸಾವಿರ ಸಾವಿರ ರೈತರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದರು.

ನೂತನ ತರಕಾರಿ ಮಾರುಕಟ್ಟೆ ಕಾಂಪ್ಲೆಕ್ಸ್ ಬೇಸ್‍ಮೆಂಟ್ ಮಹಡಿ, ನೆಲ ಮಹಡಿ ಹಾಗೂ ಮೊದಲನೆ ಮಹಡಿ ಒಳಗೊಂಡಿದೆ. ಬೇಸ್‍ಮೆಂಟ್‍ನಲ್ಲಿ ವಾಹನ ನಿಲುಗಡೆ, ಲಿಫ್ಟ್, ಸ್ಟೇರ್‍ಕೇಸ್, ಸಂಪ್ ಟ್ಯಾಂಕ್, ಎಲೆಕ್ಟ್ರಿಕಲ್ ಕೋಣೆ ಇರಲಿದೆ. ನೆಲ ಮಹಡಿಯಲ್ಲಿ 62 ಅಂಗಡಿಗಳು, ತರಕಾರಿ ಮಾರಾಟಕ್ಕೆ 192 ಮಳಿಗೆ, ಸಗಟು ವ್ಯಾಪಾರ ಹರಾಜು ಪ್ರಕ್ರಿಯೆಗೆ ಪ್ಲಾಜಾಫಾರ್ಮ್, ಘನತ್ಯಾಜ್ಯ ಸಂಗ್ರಹಣೆಗೆ ಸ್ಥಳ, ಕೋಲ್ಟ್ ಸ್ಟೋರೇಜ್ ಕೋಣೆ ಹಾಗೂ ಶೌಚಾಲಯ ಇರಲಿವೆ. ಮೊದಲನೆ ಮಹಡಿಯಲ್ಲಿ 47 ಅಂಗಡಿಗಳು, ಇತರೆ ಕಾರ್ಯಾಲಯ, ಬ್ಯಾಂಕ್ ಇರಲಿದ್ದು ಒಟ್ಟಾರೆ ಸಂಕೀರ್ಣದಲ್ಲಿ 301 ಅಂಗಡಿಗಳಿರಲಿವೆ ಎಂದು ಯಡಿಯೂರಪ್ಪ ವಿವರಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ಆರ್. ನಿರಾಣಿ, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸಂಸದ ಡಾ.ಉಮೇಶ್ ಜಾಧವ್ ಸೇರಿದಂತೆ ಸ್ಥಳೀಯ ಶಾಸಕರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 600 ಕೋಟಿ ರೂ.ಗಳ ವೆಚ್ಚದಲ್ಲಿ ದಿನದ 24 ಗಂಟೆಯು ಕುಡಿಯುವ ನೀರಿನ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ. ಇದಲ್ಲದೆ ಕಲಬುರಗಿ ಮಹಾನಗರ ಪ್ರದೇಶದಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣೆಗಾಗಿ ಇಂದು 41 ವಾಹನಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಈ ನಗರದ ಅಭಿವೃದ್ಧಿ ನಮ್ಮ ಸರಕಾರ ವಿಶೇಷ ಆಸ್ಥೆ ವಹಿಸಿದೆ

-ಭೈರತಿ ಬಸವರಾಜ್, ನಗರಾಭಿವೃದ್ಧಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X