Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡೀಮ್ಡ್ ಅರಣ್ಯದಿಂದ ಕೈಬಿಡಬೇಕಾದ ಭೂಮಿಯ...

ಡೀಮ್ಡ್ ಅರಣ್ಯದಿಂದ ಕೈಬಿಡಬೇಕಾದ ಭೂಮಿಯ ಪಟ್ಟಿ ಸಲ್ಲಿಸಲು ಸಚಿವ ಅರವಿಂದ ಲಿಂಬಾವಳಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 July 2021 9:19 PM IST
share

ಉಡುಪಿ, ಜು.11: ರಾಜ್ಯದಲ್ಲಿ ಒಟ್ಟು 9,91,000 ಹೆಕ್ಟೇರ್ ಡೀಮ್ಡ್ ಅರಣ್ಯ ಪ್ರದೇಶವಿದ್ದು, ಉಡುಪಿ ಜಿಲ್ಲೆಯಲ್ಲಿ 62,000 ಹೆಕ್ಟೇರ್ ಭೂಮಿ ಡೀಮ್ಡ್ ವ್ಯಾಪ್ತಿಗೆ ಸೇರಿದೆ. ಮುಂದಿನ ಮೂರು ಅಥವಾ ನಾಲ್ಕು ತಿಂಗಳೊಳಗೆ ರಾಜ್ಯದ ಡೀಮ್ಡ್ ಅರಣ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ರಾಜ್ಯ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಅವರು ಕಾರ್ಕಳ ಮಂಜುನಾಥ ಪೈ ಸಬಾಂಗಣದಲ್ಲಿ ಡೀವ್ಡ್ ಅರಣ್ಯ ಸಮಸ್ಯೆಯ ಕುರಿತಂತೆ ರವಿವಾರ ನಡೆದ ಸಾರ್ವಜನಿಕ ಸಂವಾದ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಜನ ವಾಸ್ತವ್ಯದ ಪ್ರದೇಶ ಹಾಗೂ ಕೃಷಿ ಚಟುವಟಿಕೆಯಿಂದ ಕೂಡಿದ ಪ್ರದೇಶವನ್ನು ಕೈಬಿಡುವಂತೆ ಸುಪ್ರೀಂಕೋರ್ಟ್‌ಗೆ ಅಪಿಧಾವಿತ್ ಸಲ್ಲಿಸಲಾಗುವುದು. ಅದಕ್ಕೆ ಪೂರ್ವಭಾವೀಯಾಗಿ ಪ್ರತಿ ಗ್ರಾಮಗಳಲ್ಲೂ ಅರಣ್ಯಕ್ಕೆ ಪೂರಕವಾಗುವ ಭೂಮಿಯನ್ನು ಗುರುತಿಸಿ, ಡೀಮ್ಡ್ ಅರಣ್ಯ ದಿಂದ ಕೈ ಬಿಡಬೇಕಾದ ಭೂಮಿಯ ಕುರಿತು ಪಟ್ಟಿ ಸಲ್ಲಿಸುವಂತೆ ಶಾಸಕರಿಗೆ ಸೂಚಿಸಲಾಗುವುದು. ನಮ್ಮ ಸರಕಾರದ ಅವಧಿಯಲ್ಲೇ ಈ ಸಮಸ್ಯೆಗೆ ಪರಿಹಾರ ಸೂಚಿಸುವಲ್ಲಿ ಪ್ರಯತ್ನ ನಡೆಸಲಾಗುವುದು ಎಂದರು.

ಇದರೊಂದಿಗೆ ಪ್ರಾಣಿಗಳ ಸಂರಕ್ಷಣೆಯೂ ಆಗಬೇಕಾಗಿದೆ. ಕಾಡುಗಳಲ್ಲಿ ಫಲಭರಿತ ವೃಕ್ಷಗಳನ್ನು ನೆಡುವ ಕಾರ್ಯಕ್ರಮಕ್ಕೂ ಚಾಲನೆ ನೀಡಲಾ ಗಿದೆ. ಪರಿಸರಕ್ಕೆ ಮಾರಕವಾಗಿರುವ ಅಕೇಶಿಯಾ ಹಾಗೂ ನೀಲಗಿರಿ ಮರಗಳ ನಿರ್ಮೂಲನೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸರಕಾರದ ಮುಖ್ಯ ಸಚೇತಕ ಹಾಗೂ ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ, ಈ ಹಿಂದೆ ಅವೈಜ್ಞಾನಿಕ ಸರ್ವೇಯ ಮೂಲಕ ಡೀಮ್ಡ್ ಪಟ್ಟಿಗೆ ಸರ್ವೇ ನಂಬರ್‌ಗಳನ್ನು ಸೇರ್ಪಡೆಗೊಳಿಸಲಾಗಿತ್ತು. ಇದರ ಪರಿಣಾಮ ಕಾರ್ಕಳ ದಲ್ಲಿ 3595 ಅರ್ಜಿ 94ಸಿ ಅಡಿಯಲ್ಲಿ, 1177 ಅರ್ಜಿ 94ಸಿಸಿ ಅಡಿಯಲ್ಲಿ, ನಮೂನೆ-53ರಡಿಯಲ್ಲಿ 2608 ಅರ್ಜಿಗಳು ವಿಲೇವಾಗದೆ ಬಾಕಿ ಉಳಿದಿವೆ. ಒಟ್ಟು 6,616 ಫಲಾನುಭವಿಗಳು ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದು, ಡೀಮ್ಡ್ ಅಡ್ಡಿಯಿಂದ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ. ಜೊತೆ ಅಭಿವೃದ್ದಿ ಚಟುವಟಿಕೆ ಗಳಿಗೂ ತೊಂದರೆ ಯಾಗುತ್ತಿದ್ದು, ಒಟ್ಟು 42 ಯೋಜನೆಗಳು ಸೂಕ್ತ ಜಾಗವಿಲ್ಲದೆ ಬಾಕಿ ಉಳಿದಿವೆ ಎಂದರು.

ಇದೇ ವೇಳೆ ಸಾರ್ವಜನಿಕರು ಡೀಮ್ಡ್ ಸಮಸ್ಯೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ಸಚಿವರ ಮುಂದೆ ಹೇಳಿಕೊಂಡರು. ಇದೇ ಸಂದರ್ಭದಲ್ಲಿ ಪುನರ್ವಸತಿ ಯೋಜನೆಯಡಿ ಪರಿಹಾರಧನ ವಿತರಣೆ ಹಾಗೂ ಇನ್ನಿತರ ಸವಲತ್ತುಗಳನ್ನು ಸಚಿವರು ಫಲಾನುಭವಿಗಳಿಗೆ ವಿತರಿಸಿದರು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಅರಣ್ಯ, ಪರಿಸರ ಜೀವಿಶಾಸ್ತ್ರ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿಜೂರು, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಿಲ್ಲೋ ಟ್ಯಾಗೊ, ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್.ನೆಟಾಲ್ಕರ್‌ಮ ಕುಂದಾಪುರ ವಿಱಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ಕಾರ್ಕಳ ವನ್ಯಜೀವಿ ವಿಭಾಗದ ರುಥ್ರೇನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹಿರಿಯ ನ್ಯಾಯವಾದಿ ಎಂ.ಕೆ.ವಿಜಯಕುಮಾರ್, ಪುರಸಭೆ ಅಧ್ಯಕ್ಷೆ ಸುಮಾ ಕೇಶ್ ಉಪಸ್ಥಿತರಿದ್ದರು.

ಉದಯ ಎಸ್.ಕೋಟ್ಯಾನ್ ಸ್ವಾಗತಿಸಿದರು. ರೇಷ್ಮಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನವೀನ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X