ಬೆಂಗಳೂರು: ಪಾದಚಾರಿ ಮಾರ್ಗ ತೆರವು; ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು, ಜು.11: ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆ ಪಾದಚಾರಿ ಮಾರ್ಗ ತೆರವುಗೊಳಿಸಿ, ಸದ್ಯದಲ್ಲೇ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.
ಸಂಚಾರ ಸಂಪರ್ಕ ದಿವಸ್ ಹಿನ್ನೆಲೆ ಬಸವನಗುಡಿ ಸಂಚಾರ ಠಾಣೆ ವ್ಯಾಪ್ತಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಾದಚಾರಿ ಮಾರ್ಗ ತೆರವುಗೊಳಿಸುವ ಬಗ್ಗೆ ಈಗಾಗಲೇ ಬಿಬಿಎಂಪಿಗೆ ಪತ್ರ ಬರೆಯಲಾಗಿದೆ. ಮುಂದಿನ ದಿನಗಳಲ್ಲಿ ಜಂಟಿಯಾಗಿ ತೆರವು ಕಾರ್ಯ ನಡೆಯಲಿದೆ. ಅಲ್ಲದೆ, ಈ ಬಗ್ಗೆ ಬಿಬಿಎಂಪಿ ಹಾಗೂ ಸಂಬಂಧಿಸಿದ ಇಲಾಖೆಗೆ ಜತೆ ಆಗಾಗ ಚರ್ಚೆ ನಡೆಸಲಾಗುತ್ತಿದ್ದು, ಸದ್ಯದಲ್ಲೇ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
Next Story