ಜು.14 : ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

ಮಂಗಳೂರು: ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಸಾಗರದ ಇದಿನಬ್ಬ ಫೌಂಡೇಶನ್'ನ ಸಹಯೋಗದೊಂದಿಗೆ ಹಮ್ಮಿ ಕೊಂಡಿರುವ 'ಕರ್ನಾಟಕ ಕರಿಯರ್ ಯಾತ್ರಾ'ದ ಅಂಗವಾಗಿ ದ.ಕ. ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗೆ 'ಪಿಯುಸಿ ನಂತರ ಮುಂದೇನು' ಕರಿಯರ್ ಮಾರ್ಗದರ್ಶನ ಶಿಬಿರವನ್ನು ಮಂಗಳೂರಿನ ಟೀಂ ಬಿ-ಹ್ಯೂಮನ್ ಸಂಸ್ಥೆ ಆಯೋಜಿಸಿದೆ.
ಜು. 14ರಂದು ಬೆಳಗ್ಗೆ 10ಕ್ಕೆ ಝೂಮ್ (ಮೀಟಿಂಗ್ ಐಡಿ: 85029107730 ಪಾಸ್ಕೋಡ್: 687283) ಮೂಲಕ ನಡೆಯಲಿರುವ ಶಿಬಿರದಲ್ಲಿ ಕರಿಯರ್ ಪ್ಲಾನಿಂಗ್ ಮಾಡುವುದು ಯಾಕೆ ? ಮತ್ತು ಹೇಗೆ ? ಅತ್ತ್ಯುತ್ತಮ ಕೋರ್ಸ್ ಆಯ್ಕೆ ಮಾಡುವುದು ಹೇಗೆ ? ಪಿಯುಸಿ ಬಳಿಕ ಲಭ್ಯವಿರುವ ಕೋರ್ಸುಗಳೇನು? ಸರಕಾರದ ವಿವಿಧ ಇಲಾಖೆಗಳಲ್ಲಿ ವಿದ್ಯಾರ್ಥಿಗಳಿಗಿರುವ ಯೋಜನೆಗಳೇನು ? ಮತ್ತಿತರ ವಿಷಯಗಳ ಕುರಿತಂತೆ ಮಾಹಿತಿ, ಮಾರ್ಗದರ್ಶನ ನೀಡಲಾಗುವುದು.
ಪ್ರವೇಶ ಉಚಿತವಾಗಿರುವ ಶಿಬಿರದಲ್ಲಿ ರಾಜ್ಯದ ಖ್ಯಾತ ಕರಿಯರ್ ಕೌನ್ಸಿಲರ್ ಮಂಗಳೂರಿನ ಉಮರ್ ಯು.ಎಚ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ಹೆಚ್ಚಿನ ಮಾಹಿತಿಗಳಿಗಾಗಿ ಮೊ. ಸಂ. 9845054191ಗೆ ಕರೆ ಮಾಡಬಹುದು ಎಂದು ಟೀಂ ಬಿ-ಹ್ಯೂಮನ್'ನ ಸ್ಥಾಪಕಾಧ್ಯಕ್ಷ ಕೆ.ಎಂ. ಆಸಿಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





