Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಕ್ರಿಯಾ...

ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ12 July 2021 5:58 PM IST
share
ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಅನುಮೋದನೆ

ಬೆಂಗಳೂರು, ಜು.12: ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ 2021-22 ನೇ ಸಾಲಿನ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯ ಸಭೆ ಇಂದು ಅನುಮೋದನೆ ನೀಡಿತು.

ಮಂಡಳಿ ವತಿಯಿಂದ ಕೈಗೊಳ್ಳಲಾಗಿರುವ 134 ಕಾಮಗಾರಿಗಳ ಪೈಕಿ ಈವರೆಗೆ 76 ಕಾಮಗಾರಿಗಳು ಪೂರ್ಣಗೊಂಡಿದ್ದು, 58 ಕಾಮಗಾರಿಗಳು ಬಾಕಿ ಇರುತ್ತವೆ.

ಒಟ್ಟು 500 ಕೋಟಿ ರೂ ವೆಚ್ಚದ ಅನುಭವ ಮಂಟಪ ಯೋಜನೆಗೆ ಸರ್ಕಾರ 200 ಕೋಟಿ ರೂ ಹಂಚಿಕೆ ಮಾಡಿದೆ. 101 ಎಕರೆ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಹನ್ನೊಂದು ಎಕರೆ 25 ಗುಂಟೆ ಉಚಿತವಾಗಿ ಲಭ್ಯವಿದ್ದು, 69 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಈ ಭೂಮಿಯ ಮಾಲಕರು ಹೆಚ್ಚು ಪರಿಹಾರ ಬಯಸಿದ್ದು, ಮಾರುಕಟ್ಟೆ ದರದಲ್ಲಿ ಪರಿಹಾರ ಕೇಳುತ್ತಿದ್ದಾರೆ. ಆದುದರಿಂದ ಭೂಸ್ವಾಧೀನ ಪ್ರಕ್ರಿಯೆಗೆ ತೊಂದರೆಯಾಗಿದೆ. ಪರಸ್ಪರ ಸಂದಾನ ನಡೆಸಿ ರೈತರ ಸಮ್ಮತಿ ಪಡೆದು ಭೂ ಸ್ವಾಧೀನ ಪ್ರಕ್ರಿಯೆ ಜರುಗಿಸುವಂತೆ ಮಾನ್ಯ ಮುಖ್ಯಮಂತ್ರಿಗಳು ಸಲಹೆ ಮಾಡಿದರು.  ಈ ವರ್ಷ ಬಜೆಟ್ ನಲ್ಲಿ ಲಭ್ಯವಿರುವ 10 ಕೋಟಿ ರೂ ಸೇರಿಸಿ ಕ್ರಿಯಾ ಯೋಜನೆ ಸಿದ್ದಪಡಿಸುವಂತೆ ಸೂಚಿಸಲಾಯಿತು.

ಪ್ರಸ್ತುತ ಲಭ್ಯವಿರುವ ಭೂಮಿಯಲ್ಲಿ ಮಣ್ಣಿನ ಪರೀಕ್ಷೆ ಮತ್ತು ಇತರ ಕಾಮಗಾರಿಗಳು ನಡೆದಿವೆ. ಭೂಸ್ವಾಧೀನ ಪ್ರಕ್ರಿಯೆ ಜೊತೆಗೆ ಡಿಪಿಆರ್ ಹಾಗೂ ಇತರೆ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು.

ಇನ್ನು ಮುಂದೆ ಬಸವಕಲ್ಯಾಣ ಸಭೆಗೆ ಬೀದರ್ ಜಿಲ್ಲೆಯ ಜಿಲ್ಲಾ ಶಾಸಕರನ್ನು ಆಹ್ವಾನಿಸುವಂತೆ ಭಾಲ್ಕಿ ಶಾಸಕ ಶ್ರೀ ಈಶ್ವರ ಖಂಡ್ರೆ ಅವರು ನೀಡಿದ ಸಲಹೆಗೆ ಮುಖ್ಯಮಂತ್ರಿಗಳು ಸಮ್ಮತಿ ವ್ಯಕ್ತಪಡಿಸಿದರು.

ರೈತರ ಒಪ್ಪಿಗೆ ಮೇರೆಗೆ ಭೂಸ್ವಾಧೀನಪಡಿಸಿಕೊಳ್ಳವ ಸಂಬಂಧ  ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದಲ್ಲಿ ಸಭೆಯೊಂದನ್ನು ಆಯೋಜಿಸಲು ತೀರ್ಮಾನಿಸಲಾಯಿತು.

ಕಾಗಿನೆಲೆ ಪ್ರಾಧಿಕಾರದ ಸಭೆ

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ ಕೂಡ ಇಂದು ಜರುಗಿತು. ಪ್ರಸಕ್ತ ಆರ್ಥಿಕ ವರ್ಷದಲ್ಲಿ 14 ಕೋಟಿ ರೂ.ಗಳನ್ನು ವೆಚ್ಚ ಮಾಡಲು ಸಭೆ ಅನುಮೋದನೆ ನೀಡಿತು.  ಕಾಗಿನೆಲೆಯಲ್ಲಿ ನಿರ್ಮಾಣ ಪೂರ್ಣಗೊಳಿಸಿರುವ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಶೀಘ್ರ ಉದ್ಘಾಟಿಸಲು ನಿರ್ಧರಿಸಲಾಯಿತು.

ರಾಯಣ್ಣ ಪ್ರಾಧಿಕಾರ

ಸಂಗೊಳ್ಳಿ ರಾಯಣ್ಣ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ಇಂದು ಜರುಗಿ 21-22ನೇ ಸಾಲಿನ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.  ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳಗೆ ಸಂಬಂಧಿಸಿದ ಬಾಕಿ ಇರುವ ಬಿಲ್ಲುಗಳ 22 ಕೋಟಿ ರೂ ವೆಚ್ಚ ಪಾವತಿ ಮಾಡಲು ಅನುಮೋದನೆ ನೀಡಲಾಯಿತು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ  ಬಜೆಟ್ ನಲ್ಲಿ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರಕ್ಕೆ 62 ಕೋಟಿ ರೂ ಗಳನ್ನು ಒದಗಿಸಿದೆ. 279 ಕೋಟಿ ರೂ ವೆಚ್ಚದ ಕ್ರಿಯಾ ಯೋಜನೆಯನ್ನು ಪ್ರಾಧಿಕಾರ ರೂಪಿಸಿದ್ದು 2017 ರಿಂದ ಈವರೆಗೆ 159 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ರಾಯಣ್ಣನ ಜನಸ್ಥಳದಲ್ಲಿ ಸೈನಿಕ ಶಾಲೆ ಪೂರ್ಣಗೊಂಡಿದೆ. ಕೇಂದ್ರ ರಕ್ಷಣಾ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡು ಶಾಲೆಯ ಆರಂಭಕ್ಕೆ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದರು.  ಸೈನಿಕ ಶಾಲೆ ಅರಂಭಕ್ಕೆ ಅನುಮೋದನೆ ಹುದ್ದೆಗಳ ಮುಂಜೂರಾತಿ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆ ಚರ್ಚಿಸಿ ಒಪ್ಪಿಗೆ ಪಡೆಯಲಾಗುವುದು ಎಂದು  ಮುಖ್ಯಮಂತ್ರಿಗಳು ತಿಳಿಸಿದರು
ನಂದಘಡದಲ್ಲಿ ಅಂತರಾಷ್ಟ್ರೀಯ ಮಟ್ಟದ  ವಸ್ತು ಸಂಗ್ರಹಾಲಯ ಮತ್ತು ರಾಕ್ ಗಾರ್ಡನ್ ನಿರ್ಮಾಣ ಕಾಮಗಾರಿಗಳು ಜರುಗಿದ್ದು ಈ ವರ್ಷವೇ ಅವುಗಳನ್ನು ಪೂರ್ಣಗೊಳಿಸುವತೆ ಸೂಚಿಸಲಾಯಿತು.

ಕಳೆದ ವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ, ಕಿತ್ತೂರು ಪ್ರಾಧಿಕಾರ ಹಾಗೂ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಸಭೆ ಜರುಗಿದ್ದವು. ಮುಂದುವರಿಕೆ ಭಾಗವಾಗಿ ಇಂದು ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆಗಳು ಜರುಗಿ ಈ ಎಲ್ಲಾ ಪ್ರಾಧಿಕಾರಗಳ ವಾರ್ಷಿಯ ಕ್ರಿಯಾ ಯೋಜನೆಗಳಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ  ಅನುಮೋದನೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X