ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ನರ್ಸಿಂಗ್ ಕಾಲೇಜು ಉಪನ್ಯಾಸಕಿ ಮೃತ್ಯು

ಮಂಗಳೂರು, ಜು.12: ನಗರದ ಯೆಯ್ಯಾಡಿ ಹರಿಪದವಿನಲ್ಲಿ ಸ್ಕೂಟಿಗೆ ಆಲ್ಟೋ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡ ಉಪನ್ಯಾಸಕಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ವಾಮಂಜೂರು ನಿವಾಸಿ ಪ್ರಿಯಾಂಕ (31) ಮೃತಪಟ್ಟ ಉಪನ್ಯಾಸಕಿ ಎಂದು ಗುರುತಿಸಲಾಗಿದೆ.
ಜು.10ರಂದು ಸಂಜೆ ಪ್ರಿಯಾಂಕ ಅವರು ಹರಿಪದವು ಮೂಲಕ ವಾಮಂಜೂರಿನತ್ತ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿಯಾಗಿದೆ. ಇದರಿಂದ ಅವರು ಮಗುಚಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಂಗಳೂರು ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಕೋಟೆಕಾರು ನಿವಾಸಿಯಾದ ಪ್ರಿಯಾಂಕ ಅವರು ಉಳ್ಳಾಲದ ನರ್ಸಿಂಗ್ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದರು ಎಂದು ತಿಳಿದುಬಂದಿದೆ.
Next Story





