Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಕೋಡಾ ಕುಶಾಕ್ ಕಾರು ಮಂಗಳೂರು...

ಸ್ಕೋಡಾ ಕುಶಾಕ್ ಕಾರು ಮಂಗಳೂರು ಮಾರುಕಟ್ಟೆಗೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ12 July 2021 6:45 PM IST
share
ಸ್ಕೋಡಾ ಕುಶಾಕ್ ಕಾರು ಮಂಗಳೂರು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು, ಜು.12: ಸ್ಕೋಡಾ ಅಟೊ ಇಂಡಿಯದ ಪ್ರಾಜೆಕ್ಟ್-2ರ ಅಡಿಯಲ್ಲಿ ಉತ್ಪಾದಿಸಲ್ಪಟ್ಟ ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ ‘ಸ್ಕೋಡಾ ಕುಶಾಕ್’ ಕಾರನ್ನು ನಗರದ ಚಿಲಿಂಬಿ-ಉರ್ವದ ಡಿಯೋ ಗ್ರೆಸಿಯಸ್ ಕಟ್ಟಡದ ಸ್ಕೋಡಾ ಅಟೋ ಇಂಡಿಯ-ಟಫೆ ಆಕ್ಸೆಸ್ ಶೋರೂಂನಲ್ಲಿ ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಮಂಗಳೂರು ಮಾರುಕಟ್ಟೆಗೆ ಸೋಮವಾರ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಕೋಡಾ ಸಂಸ್ಥೆಯ ವಿನೂತನ ಕುಶಾಕ್ ಕಾರು ಮಂಗಳೂರು ಮಾರುಕಟ್ಟೆಗೆ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಕಾರನ್ನು ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ಉತ್ಪಾದನೆಯಾಗಿದೆ. ಇದರಿಂದ ದೇಶದ ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ. ಉತ್ಕೃಷ್ಟ ಗುಣಮಟ್ಟದ ಸ್ಕೊಡಾ ಕಾರುಗಳನ್ನು ಕರಾವಳಿಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸ್ಕೋಡಾ ಮಂಗಳೂರು ಬ್ರಾಂಚ್ ಇನ್‌ಚಾರ್ಜ್ ಹಾಗೂ ಟಫೆ ಆಕ್ಸೆಸ್ ಲಿಮಿಟೆಡ್‌ನ ಸೇಲ್ಸ್ ಮ್ಯಾನೇಜರ್ ಅಬೂಬಕರ್ ಸಿದ್ದೀಕ್ ಮಾತನಾಡಿ, ಸ್ಕೋಡಾ ಅಟೊ ಇಂಡಿಯ ಸಂಸ್ಥೆಯು ಭಾರತದಲ್ಲಿ ಕಳೆದ 20 ವರ್ಷಗಳಿಂದ ಉತ್ತಮ ಗುಣಮಟ್ಟದ ಕಾರುಗಳನ್ನು ಉತ್ಪಾದಿಸುತ್ತಿದೆ. ಅತ್ಯುತ್ತಮ ಜರ್ಮನ್ ಕಾರುಗಳ ಕೆಟಗರಿಯಲ್ಲಿ ಸ್ಕೋಡಾ ಕ್ರಾಂತಿ ಮಾಡಿದೆ ಎಂದರು.

ಭಾರತೀಯ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಕುಶಾಕ್ ಕಾರನ್ನು ವಿನ್ಯಾಸಗೊಳಿಸಲಾಗಿದೆ. ಕೈಗೆಟುಕುವ ದರದಲ್ಲಿ ಖರೀದಿಗೆ ಲಭ್ಯವಿದೆ. ದೇಶದಲ್ಲಿ ‘ಸ್ಕೋಡಾ ಕುಶಾಕ್’ ಬಹುಬೇಡಿಕೆಯ ಕಾರು ಎಂದು ಗುರುತಿಸಿಕೊಂಡಿದೆ. ಕಾರುಗಳ ಗುಣಮಟ್ಟದಲ್ಲಿ ಸಂಸ್ಥೆಯು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಸಂಸ್ಥೆಯು ಮುಖ್ಯವಾಗಿ ಸುರಕ್ಷತೆಗೆ ಆದ್ಯತೆ ನೀಡುತ್ತದೆ. ಮಂಗಳೂರಿನ ಎಕ್ಸ್-ಶೋರೂಂನಲ್ಲಿ ಕಾರಿನ ಬೆಲೆಯು 13 ಲಕ್ಷ ರೂ.ನಿಂದ ಆರಂಭಗೊಂಡು 17 ಲಕ್ಷ ರೂ.ವರೆಗೆ ಇದೆ ಎಂದು ಅವರು ಮಾಹಿತಿ ನೀಡಿದರು.

ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ‘ಸ್ಕೋಡಾ ಕುಶಾಕ್’ ಕಾರಿನ ಕೀಯನ್ನು ಭಂಡಾರಿ ಸ್ಕೂಲ್ ಬುಕ್ ಪ್ರೈ.ಲಿ.ನ ತೇಜಸ್ ಭಂಡಾರಿ-ಐಶ್ವರ್ಯ ಭಂಡಾರಿ ದಂಪತಿಗೆ ಹಸ್ತಾಂತರಿಸಿದ್ದಾರೆ.

ಸಮಾರಂಭದಲ್ಲಿ ಸ್ಕೋಡಾದ ಸರ್ವಿಸ್ ಮ್ಯಾನೇಜರ್ ವಿನೋದ್ ಡಿಸೋಜ, ಸರ್ವಿಸ್ ಇನ್‌ಚಾರ್ಜ್ ವಿದ್ಯಾಧರ್ ಸೆತೂರು ಮತ್ತಿತರರು ಉಪಸ್ಥಿತರಿದ್ದರು.

ವಿಶೇಷತೆ: ‘ಸ್ಕೋಡಾ ಕುಶಾಕ್’ ಕಾರು ಜಾಗತಿಕ ಮೆಚ್ಚುಗೆ ಪಡೆದ ಟಿಎಸ್‌ಐ ತಂತ್ರಜ್ಞಾನ ಹೊಂದಿದೆ. 1 ಲೀ. ಹಾಗೂ 1.5 ಲೀ.ನ ಎರಡು ಇಂಜಿನ್‌ಗಳನ್ನು ಈ ಕಾರು ಒಳಗೊಂಡಿದೆ. ವೈರ್‌ಲೆಸ್ ಆ್ಯಂಡ್ರಾಯ್ಡ್ ಅಟೋ, ಆ್ಯಪಲ್ ಕಾರ್‌ಪ್ಲೇ ಜೊತೆಗೆ 10 ಇಂಚಿನ ಟಚ್‌ಸ್ಕ್ರೀನ್‌ನ ಇನ್ಫೋಟೇನ್‌ಮೆಂಟ್ ಸಿಸ್ಟಮ್ ಇದೆ. ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಎಲ್‌ಇಡಿ ಲೈಟಿಂಗ್, ಕ್ರೂಸ್ ಕಂಟ್ರೋಲ್, ಸನ್‌ರೂಫ್ ಸೌಲಭ್ಯವಿದೆ. ಆರು ಏರ್‌ಬ್ಯಾಗ್ಸ್‌ನೊಂದಿಗೆ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ರಿಯರ್ ಪಾರ್ಕಿಂಗ್ ಕ್ಯಾಮೆರಾ, ಟೈರ್ ಪ್ರೆಶರ್ ಮಾನಿಟರ್ ಸಹಿತ ಹಲವು ವಿಶೇಷತೆಗಳನ್ನು ಒಳಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X