ಸಹಕಾರಿ ನೌಕರರ ಆರ್ಥಿಕ ಶಕ್ತಿ 'ಎಸ್ಕೆಸಿಇಸಿಎಸ್': ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರಿ ಸಂಘ (ಎಸ್ಕೆಸಿಇಸಿಎಸ್)ವು ಸಹಕಾರಿ ನೌಕರರ ಆರ್ಥಿಕ ಶಕ್ತಿಯಾಗಿ ಬೆಳೆದು ಮಾದರಿ ಸಂಘವಾಗಿದೆ. ಪ್ರಧಾನ ಕಛೇರಿಯ ಸ್ವಂತ ಕಟ್ಟಡವನ್ನು ಹೊಂದಿರುವ ಈ ಸಂಘವು ಇದೀಗ ತನ್ನ ಸದಸ್ಯರ ಬೇಡಿಕೆಯಂತೆ, ಕೊಡಿಯಾಲ್ಬೈಲ್ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳಿಸಿರುವುದು ಉಪಯುಕ್ತ ಎನಿಸಿದೆ ಎಂದು ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಅವರು ಮಂಗಳವಾರ ಸಹಕಾರಿ ನೌಕರರ ಸಹಕಾರಿ ಸಂಘದ ಕೊಡಿಯಾಲ್ಬೈಲ್ ಶಾಖೆಯ ಸ್ಥಳಾಂತರ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಂಘವು ರೂ.61.17 ಕೋಟಿ ಠೇವಣಿಯನ್ನು ಹೊಂದಿದ್ದು, ರೂ.48.01 ಕೋಟಿ ಸಾಲವನ್ನು ನೀಡಿದೆ. ಸುಮಾರು 1,200 ಸದಸ್ಯರನ್ನು ಹೊಂದಿರುವ ಈ ಬ್ಯಾಂಕ್ ರೂ.34.32 ಲಕ್ಷ ಪಾಲು ಬಂಡವಾಳವನ್ನು ಹೊಂದಿ, ರೂ.65.07 ಲಾಭ ಗಳಿಸಿದೆ. ಸಹಕಾರ ಸಂಘಗಳ ನೌಕರರನ್ನು ಇನ್ನೂ ಹೆಚ್ಚು ಸದಸ್ಯರನ್ನಾಗಿ ಮಾಡಿ, ಸಂಘವನ್ನು ಮತ್ತಷ್ಟು ಸದೃಢಗೊಳಿಸಬೇಕೆಂದು ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ನಾಯಕ್, ಎಸ್ಸಿಡಿಸಿಸಿ ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಮೊಕ್ತೇಸರರಾದ ನಾರಾಯಣ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ, ಸಂಘದ ಮಾಜಿ ಅಧ್ಯಕ್ಷರಾದ ಕೆ. ಅಣ್ಣಯ್ಯ ಶೇರಿಗಾರ್, ಕೆ. ಸುಧಾಕರ ಕರ್ಕೇರ, ಕಾನೂನು ಸಲಹೆಗಾರರಾದ ಪ್ರೇಮಾನಂದ ಕಿಣಿ. ಎಸ್ಸಿಡಿಸಿಸಿ ಬ್ಯಾಂಕಿನ ಮಹಾಪ್ರಬಂಧಕರಾದ ಗೋಪಿನಾಥ್ ಭಟ್ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷರಾದ ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷರಾದ ದಿವಾಕರ ಶೆಟ್ಟಿ, ನಿರ್ದೇಶಕರುಗಳಾದ ಪುಷ್ಪರಾಜ್ ಎಂ.ಎಸ್., ರಾಘವ ಆರ್. ಉಚ್ಚಿಲ್, ಶ್ರೀಮತಿ ಶುಭಲಕ್ಷ್ಮೀ ವಿ. ರೈ, ವಿಶ್ವೇಶ್ವರ ಐತಾಳ್, ಜಯಪ್ರಕಾಶ್ ರೈ ಸಿ., ವಿಶ್ವನಾಥ್ ಕೆ.ಟಿ., ಶಿವಾನಂದ ಪಿ., ಗಿರಿಧರ್, ಅರುಣ್ಕುಮಾರ್, ಮೋಹನ್ ಎಸ್., ಶ್ರೀಮತಿ ಗೀತಾಕ್ಷಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷರಾದ ಜಗದೀಶ್ಚಂದ್ರ ಅಂಚನ್ ವಂದಿಸಿದರು.







