Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನರ ಹೊರತು ಬೇರೆ ಯಾರಿಗೂ ನನ್ನ...

ಜನರ ಹೊರತು ಬೇರೆ ಯಾರಿಗೂ ನನ್ನ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ: ಜೆಡಿಎಸ್ ಮುಖಂಡರ ವಿರುದ್ಧ ಸುಮಲತಾ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ13 July 2021 8:09 PM IST
share
ಜನರ ಹೊರತು ಬೇರೆ ಯಾರಿಗೂ ನನ್ನ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ: ಜೆಡಿಎಸ್ ಮುಖಂಡರ ವಿರುದ್ಧ ಸುಮಲತಾ ವಾಗ್ದಾಳಿ

ಮಂಡ್ಯ, ಜು.12: ನಾನು ಈ ಮಣ್ಣಿನ ಸೊಸೆ. ಜನರ ಹೊರತು ಬೇರೆ ಯಾರೂ ನಾನು ಮಾತನಾಡುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಮತ್ತೆ ಜೆಡಿಎಸ್ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೆಜ್ಜಲಗೆರೆ ಮನ್‍ಮುಲ್ ಬಳಿ ನಡೆದ ರೈತರ ಪ್ರತಿಭಟನೆಗೆ ಬೆಂಬಲ ನೀಡಿ ಮಾತನಾಡಿದ ಅವರು, ನನ್ನಲ್ಲಿ ತಪ್ಪು ಇದ್ದರೆ ಮುಲಾಜಿಲ್ಲದೆ ಹೇಳಿ, ತಿದ್ದುಕೊಳ್ಳುತ್ತೇನೆ. ನಿಮ್ಮಗಳಿಂದ ರಾಜಕೀಯಕ್ಕೆ ಬಂದಿದ್ದೇನೆ. ನೀವು ಬೇಡ ಅಂದರೆ ಬರುವುದಿಲ್ಲ. ನಾನು ಈ ಮಣ್ಣಿನ ಸೊಸೆ, ಮಾತಾಡೋಕ್ಕೆ ತಡೆಯಲು ಬೇರೆ ಯಾರಿಂದಲೂ ಆಗಲ್ಲ ಎಂದು ಗುಡುಗಿದರು.

ರೈತರ ಆತ್ಮಹತ್ಯೆ ಆತ್ಮಹತ್ಯೆ ಅಲ್ಲ, ಅದು ಹತ್ಯೆ. ಆದ್ದರಿಂದ ರೈತರು ಏನೇ ಕಷ್ಟಬಂದರೂ ಆತ್ಮಹತ್ಯೆ ಹಾದಿ ಹಿಡಿಯಬೇಡಿ, ಧೈರ್ಯದಿಂದ ಹೋರಾಡಿ ನ್ಯಾಯ ಪಡೆಯೋಣ. ರೈತರ ಸಾವಿನ ಮನೆಗೆ ಹೋಗಿ ಒಂದಷ್ಟು ಚಿಲ್ರೆ ಕಾಸು ಕೊಟ್ಟು ಸಾಂತ್ವನ ಹೇಳಿ ಪಬ್ಲಿಸಿಟಿ ತೆಗೆದುಕೊಳ್ಳುವುದು ಮುಖ್ಯವಲ್ಲ, ಅದನ್ನು ತಡೆಯಲು ಏನು ಮಾಡಬೇಕು ಎನ್ನುವುದು ಮುಖ್ಯ ಎಂದು ಅವರು ಹೇಳಿದರು.
ಅಕ್ರಮ ಗಣಿಗಾರಿಕೆ ವಿಚಾರ ಎತ್ತಿರುವುದು ದುಡ್ಡು ಮಾಡಕ್ಕಲ್ಲ. ಕೆಆರ್ಎಸ್ ಡ್ಯಾಂ ಬಿರುಕುಬಿಟ್ಟಿದೆ ಎಂದೂ  ನಾನು ಹೇಳಿಲ್ಲ. ಅಕ್ರಮ ಗಣಿಗಾರಿಕೆಯಲ್ಲಿನ ಸ್ಫೋಟಕದಿಂದ ಡ್ಯಾಂಗೆ ತೊಂದರೆ ಇದೆ ಎಂದು ಹೇಳಿದ್ದೇನೆ. ಈ ಸಂಬಂಧ ರೈತ ನಾಯಕ ಪುಟ್ಟಣ್ಣಯ್ಯ ಅವರೂ ಹೋರಾಡಿದ್ದಾರೆ ಎಂದು ಅವರು ತನ್ನ ಹೋರಾಟ ಸಮರ್ಥಿಸಿಕೊಂಡರು.

ನಾನೇ ಏನೇ ಮಾತಾಡಿದರೂ ಅದಕ್ಕೆ ರಾಜಕೀಯ ಬಣ್ಣ ಬಳಿಯುವ ಯತ್ನ ನಡೆಯುತ್ತೆ. ಇದು ನಾನು ಚುನಾವಣೆಗೆ ನಿಂತಲ್ಲಿದಲೂ ನಡೆದುಕೊಂಡು ಬರುತ್ತಿದೆ ಬಿಡಿ. ಸುಮಲತಾಗೆ ರಾಜಕಾರಣ ಹೊಸತು ಇರಬಹುದು, ಹಂತಹಂತವಾಗಿ ಕಲಿಯುತ್ತೇನೆ. ಆದರೆ, ಭ್ರಷ್ಟಾಚಾರ ಹೊಸತು ಎಂದು ಅವರು ಪರೋಕ್ಷವಾಗಿ ದಳಪತಿಗಳಿಗೆ ತಿರುಗೇಟು ನೀಡಿದರು.

ಅಕ್ರಮ ಗಣಿಗಾರಿಕೆ, ಕಾವೇರಿ ನೀರು, ಕಬ್ಬು ಬೆಳೆಗಾರರ ಸಮಸ್ಯೆ ಕುರಿತಂತೆ ಸಂಸತ್‍ ನಲ್ಲಿ ಹಲವಾರು ಬಾರಿ ಮಾತನಾಡಿದ್ದೇನೆ. ಮುಂದೆಯೂ ಮಾತನಾಡುತ್ತೇನೆ. ನನ್ನ ಗೆಲುವಿನಲ್ಲಿ ರೈತಸಂಘದ ಪಾತ್ರ ಮರೆಯಲು ಸಾಧ್ಯವಿಲ್ಲ. ಸದಾ ನಿಮ್ಮಗಳ ಹೋರಾಟದಲ್ಲಿ ಇರುತ್ತೇನೆ ಎಂದು ಅವರು ಭರವಸೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X