Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಡಬಲ್ ಇಂಜಿನ್ ಸರಕಾರ ಮೇಕೆದಾಟು...

ಬಿಜೆಪಿ ಡಬಲ್ ಇಂಜಿನ್ ಸರಕಾರ ಮೇಕೆದಾಟು ಯೋಜನೆ ಭೂಮಿಪೂಜೆ ನೆರವೇರಿಸಲಿ: ಡಿ.ಕೆ. ಶಿವಕುಮಾರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 July 2021 9:19 PM IST
share
ಬಿಜೆಪಿ ಡಬಲ್ ಇಂಜಿನ್ ಸರಕಾರ ಮೇಕೆದಾಟು ಯೋಜನೆ ಭೂಮಿಪೂಜೆ ನೆರವೇರಿಸಲಿ: ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು, ಜು.13: ‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಡಬಲ್ ಇಂಜಿನ್ ಸರಕಾರ ಇದೆ ಅಂತಾರೆ. ಹೀಗಾಗಿ ಮೇಕೆದಾಟು ಯೋಜನೆಗೆ ಬೇಕಾದ ಎಲ್ಲ ಅನುಮತಿಗಳನ್ನು ಪಡೆದು ಶೀಘ್ರವೇ ಯೋಜನೆ ಭೂಮಿಪೂಜೆ ನೆರವೇರಿಸಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಮಂಗಳವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜ್ಯಕ್ಕೆ ಭೇಟಿ ನೀಡಿದ್ದು, ಮೇಕೆದಾಟು ವಿಚಾರವಾಗಿ ಮುಖ್ಯಮಂತ್ರಿ ಜತೆ ಚರ್ಚೆ ಮಾಡಿದ್ದಾರೆ. ಈ ಶುಭಗಳಿಗೆಯಲ್ಲಿ ಸರಕಾರ ಮೇಕೆದಾಟು ಯೋಜನೆ ಭೂಮಿ ಪೂಜೆಗೆ ಸಮಯ ನಿಗದಿ ಮಾಡಿದೆ ಎಂದು ನಾನು ನಂಬಿದ್ದೇನೆ ಎಂದರು.

ಬೇರೆ ಯೋಜನೆಗಳಲ್ಲಿ ಸರಕಾರ ಟೆಂಡರ್ ಕರೆಯದೇ ಭೂಮಿ ಪೂಜೆ ಮಾಡುತ್ತದೆ. ಈ ಯೋಜನೆಯಲ್ಲಿ ಸರಕಾರ ಟೆಂಡರ್ ಕರೆದು ಭೂಮಿಪೂಜೆ ಮಾಡಿ ಕೆಲಸ ಆರಂಭಿಸಲಿ. ಕೇಂದ್ರದಲ್ಲಿ ಅವರದೇ ಸರಕಾರ ಇರುವ ಕಾರಣ, ಯೋಜನೆಗೆ ಬೇಕಾದ ಎಲ್ಲ ಅನುಮತಿಗಳನ್ನು ಪಡೆದು ಆದಷ್ಟು ಬೇಗ ನಮ್ಮ ನಾಡಿಗೆ ಒಳ್ಳೆಯ ಕೆಲಸ ಮಾಡಲಿ ಎಂದು ಶಿವಕುಮಾರ್ ಹೇಳಿದರು.

ಬಿಜೆಪಿಯವರು ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಡಬಲ್ ಇಂಜಿನ್ ಸರಕಾರ ಇರುತ್ತದೆ. ರಾಜ್ಯದ ಎಲ್ಲ ಕೆಲಸಗಳನ್ನು ಸುಲಭವಾಗಿ ಮಾಡುತ್ತೇವೆ ಎಂದಿದ್ದರು. ಆ ಕೆಲಸವನ್ನು ಅವರೀಗ ಮಾಡಲಿ. ಪಕ್ಷ ಬೇರೆ, ಸರಕಾರ ಬೇರೆ ಎನ್ನುವುದಾದರೆ, ಅವರು ಪಕ್ಷದಿಂದಲೇ ಸರಕಾರ ನಡೆಸುತ್ತಿದ್ದಾರೆ ಅಲ್ಲವೇ? ಇದು ಬಿಜೆಪಿ ಸರಕಾರವೇ ಅಥವಾ ಪ್ರತ್ಯೇಕ ಸರಕಾರವೇ? ಎಂದು ಅವರು ಪ್ರಶ್ನಿಸಿದರು.

ಶೇಖಾವತ್ ಅವರು ನೀರಾವರಿ ಸಚಿವರಾಗಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದಾರೆ. ಬೇರೆ ರಾಜ್ಯಗಳಿಗೆ ಸಾಕಷ್ಟು ಒಳ್ಳೆಯ ಕೆಲಸ ಮಾಡಿಕೊಟ್ಟಿದ್ದಾರೆ. ಅದೇ ರೀತಿ ನಮ್ಮ ರಾಜ್ಯಕ್ಕೂ ಹೆಚ್ಚಿನ ಅನುಕೂಲ ಮಾಡಿಕೊಡಲಿ. ಯಾವ ಬಿಜೆಪಿ ಸಂಸದರೂ ಬಾಯಿ ತೆಗೆಯುತ್ತಿಲ್ಲ. ಎಲ್ಲರೂ ಬೀಗ ಹಾಕಿಕೊಂಡಿದ್ದಾರೆ.  ಅವರು ರಾಜ್ಯದ ಹಿತಕ್ಕೆ ಬೀಗ ಹಾಕಿದ್ದು, ನೀವೆಲ್ಲ ಸೇರಿ ಅವರಿಗೆ ಉತ್ತಮ ಬೀಗವನ್ನು ಉಡುಗೊರೆಯಾಗಿ ನೀಡಬೇಕು ಎಂದು ಶಿವಕುಮಾರ್ ಹೇಳಿದರು.

ಟೆಂಡರ್ ಅಕ್ರಮದ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ: ಸರಕಾರ ಕರೆದಿರುವ ಟೆಂಡರ್ ಗಳ ಬಗ್ಗೆ  ಮಾಹಿತಿ ಕೇಳಿದ್ದು, ಅದನ್ನು ಪಡೆದು ವಿಧಾನಸಭೆಯಲ್ಲಿ ಮಾತನಾಡುತ್ತೇನೆ. ಕೇವಲ ನೀರಾವರಿ ಟೆಂಡರ್ ಮಾತ್ರವಲ್ಲ, ಎಲ್ಲದೂ ಇದೆ. ಯಾವ ಟೆಂಡರ್ ಕರೆದಿದ್ದಾರೆ, ಅದರ ಮೊತ್ತ ಎಷ್ಟಿತ್ತು, ಈಗ ಎಷ್ಟು ಹೆಚ್ಚಾಗಿದೆ ಎಂಬುದನ್ನು ಅಲ್ಲಿ ಮಾತಾಡುತ್ತೇನೆ. ಈಗ ಆ ಬಗ್ಗೆ ಮಾತನಾಡುವುದಿಲ್ಲ ಎಂದು ಅವರು ತಿಳಿಸಿದರು.

ಮೊದಲು ಜನಸಂಖ್ಯೆ ನಿಯಂತ್ರಣ ವಿಧೇಯಕ ಮಂಡನೆಯಾಗಲಿ: ಉತ್ತರ ಪ್ರದೇಶ ಮಾದರಿಯಲ್ಲಿ ಜನಸಂಖ್ಯೆ ನಿಯಂತ್ರಣ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿ ತರುವ ಬಗ್ಗೆ ಸಿ.ಟಿ.ರವಿ ಅವರ ಹೇಳಿಕೆ ಕುರಿತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಿ.ಟಿ.ರವಿ ಅವರು ಬಹಳ ದೊಡ್ಡ ನಾಯಕರು, ರಾಷ್ಟ್ರೀಯ ನಾಯಕರು. ರಾಷ್ಟ್ರದ ಬಗ್ಗೆ ಚಿಂತನೆ ನಡೆಸುತ್ತಾ ಬಹಳ ದೊಡ್ಡ ಹೇಳಿಕೆ ನೀಡುತ್ತಿರುತ್ತಾರೆ. ಅವರ ಮಾತು ಇಲ್ಲಿ ಬೇಡ. ಜನಸಂಖ್ಯೆ ನಿಯಂತ್ರಣ ಮಸೂದೆ ವಿಧಾನಭೆಯಲ್ಲಿ ಮಂಡನೆಯಾಗಲಿ. ಅವರು ರಾಷ್ಟ್ರ ನಾಯಕರಾದರೆ, ನಾನು ಕೇವಲ ರಾಜ್ಯ ನಾಯಕ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X