ರಾಜ್ಯದಲ್ಲಿ ಜನಸಂಖ್ಯಾ ನೀತಿಗೆ ಸೂಕ್ತ ಸಮಯ: ಸಿ.ಟಿ.ರವಿ

ಬೆಂಗಳೂರು, ಜು.13: ದಿನೇ ದಿನೇ ಅಧಿಕಗೊಳ್ಳುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಕರ್ನಾಟಕಕ್ಕೆ ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.
ಮಂಗಳವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ. ಹೀಗಾಗಿ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣ ನೀತಿ ಜಾರಿಗೊಳಿಸಬೇಕು ಎಂದು ನುಡಿದಿದ್ದಾರೆ.
It is high time Karnataka brings in a new population policy on the lines of Assam and Uttar Pradesh to control its growing population.
— C T Ravi ಸಿ ಟಿ ರವಿ (@CTRavi_BJP) July 13, 2021
With the limited natural resources available, it will be difficult to meet the needs of every citizen if there is a population explosion.
Next Story







