Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೀನುಗಾರರ ದೋಣಿ ತೆರವಿಗೆ ಹುನ್ನಾರ:...

ಮೀನುಗಾರರ ದೋಣಿ ತೆರವಿಗೆ ಹುನ್ನಾರ: ಮೀನುಗಾರರ ಸಂಘ ಆರೋಪ

ವಾರ್ತಾಭಾರತಿವಾರ್ತಾಭಾರತಿ13 July 2021 11:03 PM IST
share

ಮಂಗಳೂರು, ಜು.13: ಸಾಗರ ಮಾಲಾ ಯೋಜನೆಯ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿಯು ಬೆಂಗರೆ ನದಿ ದಂಡೆಯಲ್ಲಿ ಗ್ರಾಮಸ್ಥರ ವಿರೋಧದ ನಡುವೆಯೂ ಮುಂದುವರಿದಿದೆ. ಈಗ ಮೀನುಗಾರರ ದೋಣಿಗಳನ್ನು ಬಲವಂತವಾಗಿ ತೆರವುಗೊಳಿಸುವ ಹುನ್ನಾರದಲ್ಲಿ ಜಿಲ್ಲಾಡಳಿತ ತೊಡಗಿಕೊಂಡಿದೆ ಎಂದು ಪಲ್ಗುಣಿ ನಾಡದೋಣಿ ಮೀನುಗಾರರ ಸಂಘ ಆರೋಪಿಸಿದೆ.

ಸಾಂಪ್ರದಾಯಿಕ ಮೀನುಗಾರರು ತಲೆಮಾರುಗಳಿಂದ ಇದೇ ತಂಗುದಾಣಗಳಲ್ಲಿ ದೋಣಿ ನಿಲ್ಲಿಸುತ್ತಾ ಬಂದಿದ್ದಾರೆ. ಪರ್ಯಾಯ ವ್ಯವಸ್ಥೆ, ಮಾತುಕತೆಗಳಿಲ್ಲದೆ ಜಿಲ್ಲಾಡಳಿತ ಈ ಜಾಗವನ್ನು ಆಕ್ರಮಿಸಲು ಮುಂದಾಗಿದೆ. ಅಲ್ಲಿ ತಂಗಿರುವ ಮೀನುಗಾರರ ನಾಡದೋಣಿಗಳನ್ನು ಒತ್ತಡ ಹೇರಿ ಬಲವಂತವಾಗಿ ತೆರವುಗೊಳಿಸಲು ಯತ್ನಿಸಲಾಗುತ್ತಿದೆ. ಇಂತಹ ಸರ್ವಾಧಿಕಾರಿ ಧೋರಣೆಯನ್ನು ಕೈ ಬಿಟ್ಟು ಕಾಮಗಾರಿಯಿಂದ ಮೀನುಗಾರರಿಗೆ ಆಗುವ ಸಮಸ್ಯೆಗಳನ್ನು ನ್ಯಾಯಯುತ ವಿಧಾನದಲ್ಲಿ ಪರಿಹರಿಸುವಂತೆ ಸಂಘ ಆಗ್ರಹಿಸಿದೆ.

ದಟ್ಟ ಜನ ವಸತಿಯುಳ್ಳ ಕಸಬಾ ಬೆಂಗರೆ ಪ್ರದೇಶ ಕೋಸ್ಟಲ್ ಬರ್ತ್‌ಗೆ ಯೋಗ್ಯ ಸ್ಥಳ ಅಲ್ಲದಿದ್ದರೂ ಏಕಪಕ್ಷೀಯವಾಗಿ ಯೋಜನೆಗೆ ಅನುಮೋದನೆ ಪಡೆಯಲಾಯಿತು. ಯೋಜನೆಯಿಂದ ಮನೆ, ಶೆಡ್‌ಗಳನ್ನು ಕಳೆದುಕೊಳ್ಳುವ ಸಂತ್ರಸ್ತ ಮೀನುಗಾರ ಕುಟುಂಬಗಳ ಜೊತೆಗೆ ಈವರಗೆ ಯಾವ ಮಾತುಕತೆಯನ್ನೂ ನಡೆಸಿಲ್ಲ. ಸಾಂಪ್ರದಾಯಿಕ ಮೀನುಗಾರರ ದೋಣಿಗಳು ತಲೆ ತಲಾಂತರದಿಂದ ತಂಗುವ ನದಿ ದಂಡೆಗಳು ಯೋಜನೆಯ ಪ್ರದೇಶದ ಒಳಗಡೆ ಬರುತ್ತದೆ. ಆದರೆ, ಈವರೆಗೂ ಮೀನುಗಾರರ ಜೊತೆಗೆ ಯಾವ ಮಾತುಕತೆ ನಡೆಸಿಲ್ಲ. ಈಗ ದೋಣಿಗಳು ತಂಗಲು ಸಮರ್ಪಕ ವ್ಯವಸ್ಥೆ ಮಾಡದೆ ಏಕಾಏಕಿ ಅಲ್ಲಿಂದ ದೋಣಿಗಳನ್ನು ತೆರವುಗೊಳಿಸುವಂತೆ ಬಲವಂತ ಪಡಿಸಲಾಗುತ್ತಿದೆ. ಪೊಲೀಸ್ ಮಧ್ಯಪ್ರವೇಶದ ಬೆದರಿಕೆ ಹಾಕಲಾಗುತ್ತಿದೆ. ಇದರಿಂದ ಸಾಂಪ್ರದಾಯಿಕ ಮೀನುಗಾರಿಕೆಯಿಂದ ಬದುಕು ಕಟ್ಟಿಕೊಂಡಿರುವ ನೂರಾರು ಮೀನುಗಾರ ಕುಟುಂಬಗಳು ತಮ್ಮ ದುಡಿಮೆಯನ್ನು ಕಳೆದು ಕೊಳ್ಳುವ ಭೀತಿ ಎದುರಾಗಿದೆ.

ಬಂದರು, ಮೀನುಗಾರಿಕೆ ಇಲಾಖೆ, ಜಿಲ್ಲಾಡಳಿತ ಬೆಂಗರೆ ನಿವಾಸಿಗಳು ಹಾಗೂ ಸ್ಥಳೀಯ ಮೀನುಗಾರರ ಮೇಲೆ ನಡೆಸುವ ಅತಿರೇಕದ ಕ್ರಮಗಳನ್ನು ಕೈ ಬಿಡಬೇಕು. ಮೀನುಗಾರರ ದೋಣಿ ತಂಗುದಾಣಗಳನ್ನು ಉಳಿಸುವ, ಮನೆ, ಶೆಡ್‌ಗಳನ್ನು ಕಳೆದುಕೊಳ್ಳವ ಸಂತ್ರಸ್ತರಿಗೆ ನ್ಯಾಯಯುತ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಮುಂದುವರಿಯಬೇಕು. ಆ ನಿಟ್ಟಿನಲ್ಲಿ ಮೀನುಗಾರರು, ಸಂತ್ರಸ್ತರೊಂದಿಗೆ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೀನುಗಾರರ ಸಭೆ ನಡೆಸಬೇಕು. ಇದರ ಹೊರತಾಗಿ ಬಲವಂತದ ಕ್ರಮಗಳಿಗೆ ಮುಂದಾದರೆ ತೀವ್ರ ಪ್ರತಿಭಟನೆಗಳನ್ನು ನಡೆಸಲಾಗುತ್ತದೆ ಎಂದು ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ, ಅಧ್ಯಕ್ಷ ಅಬ್ದುಲ್ ತಯ್ಯೂಬ್ ಬೆಂಗರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X