Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತರ ಪ್ರದೇಶ ಮಾದರಿಯಲ್ಲೇ ರಾಜ್ಯದಲ್ಲಿ...

ಉತ್ತರ ಪ್ರದೇಶ ಮಾದರಿಯಲ್ಲೇ ರಾಜ್ಯದಲ್ಲಿ ಜನಸಂಖ್ಯೆ ನಿಯಂತ್ರಣ ಕಾಯ್ದೆ ಜಾರಿ: ಸಿ.ಟಿ.ರವಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ14 July 2021 5:25 PM IST
share
ಉತ್ತರ ಪ್ರದೇಶ ಮಾದರಿಯಲ್ಲೇ ರಾಜ್ಯದಲ್ಲಿ ಜನಸಂಖ್ಯೆ ನಿಯಂತ್ರಣ ಕಾಯ್ದೆ ಜಾರಿ: ಸಿ.ಟಿ.ರವಿ ಸಲಹೆ

ಬೆಂಗಳೂರು, ಜು. 14: `ಉತ್ತರ ಪ್ರದೇಶ, ಅಸ್ಸಾಂ ಮಾದರಿಯಲ್ಲೆ ರಾಜ್ಯದಲ್ಲಿಯೂ `ಜನಸಂಖ್ಯೆ ನಿಯಂತ್ರಣ ಕಾಯ್ದೆ' ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಾಗುವುದು' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಜನಸಂಖ್ಯೆ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಬೇಕೆಂದು ಪಕ್ಷದ ಮುಖಂಡರು ಹಾಗೂ ಸಿಎಂ ಅವರ ಜೊತೆ ಚರ್ಚೆ ಮಾಡುತ್ತೇನೆ. ಸಾಧ್ಯವಾದರೆ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಮಂಡಿಸುವಂತೆ ಮನವಿ ಮಾಡುವುದು’ ಎಂದು ಇದೇ ವೇಳೆ ಹೇಳಿದರು.

`ಇಂದಿನ ಬದಲಾದ ಕಾಲದಲ್ಲಿ ಕಾಯ್ದೆಯನ್ನು ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ. ನಾನು ಇದನ್ನು ಸಾರ್ವಜನಿಕ ಚರ್ಚೆಗೆ ಬಿಟ್ಟಿದ್ದೇನೆ. ಅಂತಿಮವಾಗಿ ಸರಕಾರ ಯಾವುದಾದರೊಂದು ತೀರ್ಮಾನ ಕೈಗೊಳ್ಳಬೇಕು. ಎಲ್ಲರಿಗೂ ಸಮಾನವಾದ ಸವಲತ್ತುಗಳು ಸಿಗಬೇಕೆಂದರೆ ಇಂತಹ ಕಾಯ್ದೆ ಅತ್ಯಗತ್ಯ' ಎಂದು ಸಿ.ಟಿ.ರವಿ ಪ್ರತಿಪಾದಿಸಿದರು.

`ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದಾಗ 30 ಕೋಟಿ ಜನಸಂಖ್ಯೆಯಿತ್ತು. ಇದೀಗ ದೇಶದ ಜನಸಂಖ್ಯೆ 140 ಕೋಟಿ ಇದೆ. ಇಂದು ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿದೆ. ಪ್ರಾಕೃತಿಕ ಸಂಪನ್ಮೂಲ ಹೆಚ್ಚಾಗಲು ಸಾಧ್ಯವಿಲ್ಲ. ಗುಡ್ಡಗಳು ಮಾಯವಾಗಿವೆ, ಅರಣ್ಯ ಮಾಯವಾಗಿವೆ. ಅಂದು 28 ಜನ ಸಾವಿನ ಸರಾಸರಿ ಇತ್ತು. ಇವತ್ತು ಸಾವಿನ ಸರಾಸರಿ ಕೇವಲ 7 ಮಾತ್ರ. ಜನಸಂಖ್ಯೆ ಮಿತಿ ಬಗ್ಗೆ ಚರ್ಚೆ ಹುಟ್ಟುಹಾಕಬೇಕಿದೆ' ಎಂದು ಅವರು ತಿಳಿಸಿದರು.

`ಕಾಂಗ್ರೆಸ್ ಚರ್ಚೆ ಮಾಡದೆ ಆಪರೇಷನ್ ಮಾಡಿದೆ. ಇಂದಿರಾ ಬ್ರಿಗೇಡ್, ಸಂಜಯ್ ಬ್ರಿಗೇಡ್ ಹೆಸರಲ್ಲಿ ನಡೆದಿತ್ತು. ಆದರೆ, ನಾನು ಚರ್ಚೆ ಹುಟ್ಟುಹಾಕಿದ್ದೇನೆ. ಸಾರ್ವಜನಿಕವಾಗಿ ಚರ್ಚೆಯಾಗಲಿ. ಸದನವೇ ಸಾರ್ವಭೌಮವಾದುದು. ಸದನದಲ್ಲೇ ಚರ್ಚೆಯಾಗಲಿ, ಸಾಧಕ-ಬಾಧಕ ಬಗ್ಗೆ ಮಂಥನ ನಡೆಯಲಿ. ಕೆಲವು ಪಕ್ಷಕ್ಕೆ ದೇಶಕ್ಕಿಂತ ರಾಜಕೀಯ ಮುಖ್ಯ. ಆದರೆ ನಮಗೆ ರಾಜಕೀಯ ಮುಖ್ಯವಲ್ಲ, ದೇಶ ಮುಖ್ಯ’ ಎಂದು ರವಿ ತಿಳಿಸಿದರು.

`ನಾನು ಇಷ್ಟು ಹೇಳಿದ್ದಕ್ಕೆ ಕೆಲವರಿಗೆ ಉರಿ ಪ್ರಾರಂಭವಾಗಿದೆ. ಇನ್ನು ದೇಶ ಬಿಟ್ಟು ಕಳಿಸಿ ಎಂದರೆ ಎಷ್ಟಾಗಬೇಡ. ನಾನು ಹೇಳಿದ ತಕ್ಷಣ ಎಲ್ಲವೂ ಆಗಿಬಿಡುತ್ತಾ? ನಾನು ವಿಚಾರವನ್ನ ಸಾರ್ವಜನಿಕವಾಗಿ ಬಿಟ್ಟಿದ್ದೇನೆ. ಪಾರ್ಟಿ ವೇದಿಕೆಯಲ್ಲಿ ಚರ್ಚೆಯಾಗಬೇಕು. ನಂತರ ಸರಕಾರದ ಮಟ್ಟದಲ್ಲಿ, ಸದನದಲ್ಲಿ ಚರ್ಚೆಯಾಗಲಿದೆ. ಆ ನಂತರ ತಾನೇ ಅದು ನಿರ್ಣಯ ಆಗುವುದು’ ಎಂದು ಎಂದು ಹೇಳಿದರು.

`ಜನಸಂಖ್ಯೆ ನಿಯಂತ್ರಣ ಕಾಯ್ದೆ ತರಬೇಕು. ಇದರ ಬಗ್ಗೆ ಸಿಎಂ ಜೊತೆ ಸಮಾಲೋಚನೆ ಮಾಡುತ್ತೇನೆ. ನಮ್ಮ ಅಪ್ಪ-ಅಮ್ಮಗೆ ಐವರು ಮಕ್ಕಳು, ಮಕ್ಕಳಿರಬೇಕು ಮನೆತುಂಬ ಅನ್ನೋದು ಅವತ್ತಿನ ಕಾಲ. ಆದರೆ, ಇವತ್ತಿನ ಕಾಲ ಬದಲಾಗಿದೆ. ಲೀವಿಂಗ್ ಟು ಗೆದರ್ ಇಚ್ಛೆ ಪಡುವವರು ಇದ್ದಾರೆ. ಜಾತಿ ಗಣತಿಯನ್ನ ಹೊರತರಲು ಪ್ರಯತ್ನ ನಡೆದಿದೆ’ ಎಂದು ಸಿ.ಟಿ.ರವಿ ಇದೇ ವೇಳೆ ಹೇಳಿದರು.

`2015 ರಿಂದ 2019ರ ವರೆಗೆ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆದರೂ, ಏಕೆ ಜಾತಿ ಸಮೀಕ್ಷೆ ವರದಿ ಹೊರಗೆ ತರಲಿಲ್ಲ. ಜಾತಿಗಣತಿ ಸರಿಯಿಲ್ಲವೆಂದು ಅವರೇ ತರಲಿಲ್ಲ. ಸಂಪುಟದಲ್ಲೂ ಅದಕ್ಕೆ ಸಹಮತ ಸಿಕ್ಕಿರಲಿಲ್ಲ. ನಾಲ್ಕು ವರ್ಷ ಹಾಗೇ ಇಟ್ಟಿದ್ದರು. ಕಾಂತರಾಜು ಆಯೋಗದ ಅಧ್ಯಕ್ಷರಾಗಿದ್ದರು. ಅವತ್ತೇ ವರದಿಗೆ ಅಂದಿನ ಸರಕಾರ ಅನುಮತಿ ನೀಡಿರಲಿಲ್ಲ. ನಿಜವಾದ ಕಾಳಜಿಯಿದ್ದರೆ ಮಂಡಿಸಬಹುದಿತ್ತು. ಅವರಿಗೆ ನಿಜವಾದ ಕಾಳಜಿಯಿರಲಿಲ್ಲ'

-ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X