Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಲೇಜು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ...

ಕಾಲೇಜು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ

'ಜುಲೈ 16ರಂದು ತಾತ್ಕಾಲಿಕ ಆದ್ಯತಾ ಪಟ್ಟಿ ಪ್ರಕಟ; 27 ರಿಂದ ಸಾಮಾನ್ಯ ಅಭ್ಯರ್ಥಿಗಳ ಕೌನ್ಸೆಲಿಂಗ್'

ವಾರ್ತಾಭಾರತಿವಾರ್ತಾಭಾರತಿ14 July 2021 9:19 PM IST
share
ಕಾಲೇಜು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಜು. 14: `ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕರ ವರ್ಗಾವಣೆ ಆರಂಭವಾಗಿದ್ದು, ಜು.16ರಂದು ಸಾಮಾನ್ಯ ಆಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದ್ದು, ಜುಲೈ 27ರಿಂದ 3 ದಿನಗಳ ಕಾಲ ಕೌನ್ಸೆಲಿಂಗ್ ನಡೆಯಲಿದೆ' ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದ್ದಾರೆ.

ಬುಧವಾರ ಈ ಬಗ್ಗೆ ಹೇಳಿಕೆ ನೀಡಿರುವ ಅವರು, `ಈ ವರ್ಗಾವಣೆ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿರುತ್ತದೆ. ಯಾವ ಹಸ್ತಕ್ಷೇಪಕ್ಕೂ ಅವಕಾಶ ಇರುವುದಿಲ್ಲ. ಗುಣಮಟ್ಟದ ಶಿಕ್ಷಣ ಕೊಡುವ ಬದ್ಧತೆ ಇಟ್ಟುಕೊಂಡು ಸರಕಾರ ಇಡೀ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಿದೆ. ಬೋಧಕರು ತಮಗೆ ಸೂಕ್ತವೆನಿಸುವ ಸ್ಥಳವನ್ನು ಆಯ್ಕೆ ಮಾಡಿಕೊಳ್ಳುವ ಸಲುವಾಗಿ ಪಾರದರ್ಶಕ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ' ಎಂದು ಮಾಹಿತಿ ನೀಡಿದರು. 

ವರ್ಗಾವಣೆ ವೇಳಾಪಟ್ಟಿ: ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲು ಕೊನೆಯ ದಿನ ಜು.14 ಆಗಿದ್ದು, ಜುಲೈ 16ರಂದು ಆದ್ಯತಾ ಪಟ್ಟಿ ಪ್ರಕಟಿಸಲಾಗುವುದು. ಜು.20ರಂದು ವಿಶೇಷ ಪ್ರಕರಣಗಳ ಆದ್ಯತಾ ಪಟ್ಟಿ ಪ್ರಕಟವಾಗಲಿದೆ. ಜು.22ರಂದು ವಿಶೇಷ ಪ್ರಕರಣಗಳ ವರ್ಗಾವಣೆ ಕೌನ್ಸಿಲಿಂಗ್ ಹಾಗೂ 27 ರಿಂದ 29ರ ವರೆಗೆ ಸಾಮಾನ್ಯ ಅಭ್ಯರ್ಥಿಗಳ ಕೌನ್ಸಿಲಿಂಗ್ ನಡೆಯಲಿದೆ ಎಂದು ಅವರು ವಿವರ ನೀಡಿದರು. 
ಮಾರ್ಗಸೂಚಿಯಲ್ಲಿ ಏನಿದೆ?: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ನಿಯಮ-2021 ಅನ್ನು ರೂಪಿಸಿ ಜಾರಿಗೊಳಿಸಲಾಗುತ್ತಿದೆ. ಪ್ರಸ್ತುತ ರೂಪಿಸಿರುವ ವರ್ಗಾವಣೆ ನಿಯಮಗಳು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಐದು ವಲಯಗಳಲ್ಲಿ ವಿಂಗಡಿಸಿ ವಲಯಮುಕ್ತ ವರ್ಗಾವಣೆಗೆ ಅವಕಾಶ ನೀಡಲಾಗಿದೆ. 
ಬೆಂಗಳೂರು ಮಹಾನಗರ-ವಲಯ `ಎ', ಎಲ್ಲ ಮಹಾನಗರ ಪಾಲಿಕೆಗಳನ್ನು ಹೊಂದಿರುವ ನಗರಗಳು (ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ, ಕಲಬುರಗಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು)-ವಲಯ `ಬಿ', ಜಿಲ್ಲಾ ಕೇಂದ್ರಗಳು ಹಾಗೂ ನಗರಸಭೆಗಳನ್ನು ಹೊಂದಿರುವ ನಗರಗಳು-ವಲಯ `ಸಿ', ಎಲ್ಲ ತಾಲೂಕು ಕೇಂದ್ರಗಳು ಹಾಗೂ ಪುರಸಭೆಗಳನ್ನು ಹೊಂದಿರುವ ಪಟ್ಟಣಗಳು-ವಲಯ `ಡಿ', ಹಾಗೂ ಉಳಿದ ಎಲ್ಲ ಪ್ರದೇಶಗಳು-ವಲಯ `ಇ' ಎಂದು ವಿಂಗಡಿಸಲಾಗಿದೆ. 

ಪ್ರಸ್ತುತ ರೂಪಿಸಿರುವ ನಿಯಮಗಳಲ್ಲಿ ಬೋಧಕರ ಕಡ್ಡಾಯ ವರ್ಗಾವಣೆ ಪ್ರಮುಖ ಅಂಶವಾಗಿದ್ದು, ಒಂದೇ ವಲಯದ ಹಲವು ಕಾಲೇಜುಗಳಲ್ಲಿ ಕರ್ತವ್ಯ ಬೋಧಕರು ವಲಯದ ಜೇಷ್ಠತೆಯಲ್ಲಿ ಪದೇಪದೆ ವರ್ಗಾವಣೆಗೆ ಒಳಪಡುವುದನ್ನು ತಪ್ಪಿಸಲು, ಒಂದು ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿರುವ ಅವಧಿಯನ್ನು ಪರಿಗಣಿಸಿ, ಹೆಚ್ಚಿನ ಸೇವೆಯನ್ನು ಸಲ್ಲಿಸಿರುವ ಬೋಧಕರ ವಲಯವಾರು ಜೇಷ್ಠತಾ ಪಟ್ಟಿಯನ್ನು ಸಿದ್ದಪಡಿಸಿ ವೇಳಾಪಟ್ಟಿಯೊಂದಿಗೆ ವರ್ಗಾವಣೆ ಬಯಸುವ ಬೋಧಕರು ಮಾಹಿತಿಗಾಗಿ ಇಲಾಖೆ ವೆಬ್‍ಸೈಟ್ ನೋಡಬಹುದು. 

ಶೇ.15ರಷ್ಟು ಮಾತ್ರ ವರ್ಗಾವಣೆ: `ವರ್ಗಾವಣೆ ನಿಯಮದ ಮತ್ತೊಂದು ಪ್ರಮುಖ ಅಂಶ ಎಂದರೆ, ಒಟ್ಟು ಬೋಧಕ ಹುದ್ದೆಗಳ ಪೈಕಿ ಶೇ.15ರಷ್ಟು ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಅದರಲ್ಲಿ ಶೇ.9ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ ಹಾಗೂ ಶೇ.6ರಷ್ಟು ವಿಶೇಷ ಪ್ರಕರಣಗಳಿಗೆ ಅಂದರೆ: ವಿಕಲಚೇತನರು, ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವವರು, ವಿಧವೆಯರು, ಏಕ ಪೆÇೀಷಕರು, ವಿಚ್ಛೇಧಿತ ಮಹಿಳೆಯರು, ಪತಿ-ಪತ್ನಿ ಪ್ರಕರಣಗಳಿಗೆ ವಿಶೇಷ ಅವಕಾಶ ನಿಗದಿಪಡಿಸಲಾಗಿದೆ'. ಅಲ್ಲದೆ, ಕೌನ್ಸೆಲಿಂಗ್‍ನಲ್ಲೂ ಇವರಿಗೆ ಆದ್ಯತೆ ನೀಡಲಾಗುವುದು. 

ವಿಶೇಷ ಪ್ರಕರಣಗಳಿಗೆ ಸಂಬಂಧಿಸಿದಂತೆ ಅರ್ಹ ಬೋಧಕರಿಂದ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ನಿಯಮಾನುಸಾರ ದಾಖಲಾತಿಗಳ ಪರಿಶೀಲನೆಯ ನಂತರ ವರ್ಗಾವಣೆಯಲ್ಲಿ ನಿಯಮಗಳಲ್ಲಿ ನಿಬರ್ಂಧಿಸಿರುವ ಶೇ.6 ಮಿತಿಯೊಳಗೆ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು 2 ಹಂತಗಳಲ್ಲಿ ಕೈಗೊಳ್ಳಲಾಗುತ್ತದೆ. ಎಲ್ಲ ವಲಯಗಳ ಬೋಧಕರಿಗೆ ಸಮಾನ ಅವಕಾಶ ನೀಡುವ ಸಲುವಾಗಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಕ್ರಮವಾಗಿ ವಲಯ-`ಬಿ' ಯಿಂದ ಪ್ರಾರಂಭಿಸಿ, ನಂತರದಲ್ಲಿ ವಲಯ-`ಸಿ', ವಲಯ-`ಡಿ', ವಲಯ-`ಇ' ಮತ್ತು ವಲಯ-`ಎ' ಯಿಂದ ನಡೆಸಲಾಗುವುದು ಮತ್ತು ವಲಯ ಮುಕ್ತ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. 

ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದ ಹಾಗೂ ಉಳಿಕೆ ರಾಜ್ಯ ವೃಂದದ ಬೋಧಕರ ಪ್ರತ್ಯೇಕ ವಲಯವಾರು ಪಟ್ಟಿಗಳನ್ನು ಪ್ರಕಟಿಸಿ, ಪಟ್ಟಿಗೆ ಸಂಬಂಧಿಸಿದಂತೆ ಬೋಧಕರಿಂದ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯವಿದ್ದಲ್ಲಿ ಆದ್ಯತಾ ಪಟ್ಟಿಯನ್ನು ಪರಿಷ್ಕರಿಸಿ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X