Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜು.19 ರಿಂದ ನಂದಿಬೆಟ್ಟದಲ್ಲಿ ಪಾರ್ಕಿಂಗ್...

ಜು.19 ರಿಂದ ನಂದಿಬೆಟ್ಟದಲ್ಲಿ ಪಾರ್ಕಿಂಗ್ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರವಾಸಿಗರಿಗೆ ಅವಕಾಶ: ಜಿಲ್ಲಾಧಿಕಾರಿ ಆರ್.ಲತಾ

ವಾರ್ತಾಭಾರತಿವಾರ್ತಾಭಾರತಿ16 July 2021 5:10 PM IST
share
ಜು.19 ರಿಂದ ನಂದಿಬೆಟ್ಟದಲ್ಲಿ ಪಾರ್ಕಿಂಗ್ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರವಾಸಿಗರಿಗೆ ಅವಕಾಶ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ,ಜು.16: ಪರಿಸರ ಸಂರಕ್ಷಣೆ, ವಾಹನ ದಟ್ಟಣೆ ಹಾಗೂ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಜುಲೈ 19 ರಿಂದ ನಂದಿಬೆಟ್ಟದ ವಾಹನ ನಿಲ್ದಾಣದಲ್ಲಿನ ವಾಹನ ನಿಲುಗಡೆ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗುವುದು. ಸಪ್ತಗಿರಿಗಳ ಧಾಮ, ಸಪ್ತ ನದಿಗಳ ಉಗಮ ಸ್ಥಾನವಾದ ನಂದಿಬೆಟ್ಟವನ್ನು ವೀಕ್ಷಿಸಲು ಜಿಲ್ಲಾಡಳಿತ ರೂಪಿಸಲಿರುವ ನೂತನ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ರವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ -19 ಲಾಕ್ ಡೌನ್ ಪ್ರಯುಕ್ತ ಏಪ್ರಿಲ್ 27 ರಿಂದ ಜಾರಿಯಲ್ಲಿದ್ದ ನಿಬರ್ಂಧವನ್ನು ತೆರೆವುಗೊಳಿಸಿ ಜೂನ್ 21 ರಿಂದ ನಂದಿಬೆಟ್ಟಕ್ಕೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶಕ್ಕೆ ಅನುಮತಿ ನೀಡಿದ್ದರಿಂದ ಜುಲೈ 10 ರಂದು 2858 ಮತ್ತು ಜುಲೈ 11 ರಂಧು 4895 ಪ್ರವಾಸಿಗರು ಭೇಟಿ ನೀಡಿದ್ದರು. ಈ ಹಿನ್ನಲೆಯಲ್ಲಿ ಜನಸಂದಣಿ ದಿನೇ ದಿನೇ ಹೆಚ್ಚಾಗುತ್ತಿರುವುದನ್ನು ಮನಗಂಡ ಜಿಲ್ಲಾಡಳಿತ ಜುಲೈ 7 ರಂದು ವಾರಾಂತ್ಯದ ಪ್ರವಾಸಿಗರ ಭೇಟಿಯನ್ನು ನಿಷೇಧಿಸಿತ್ತು. ಬಡವರ ಊಟಿ ಎಂದೇ ಹೆಸರುವಾಸಿಯಾದ ನಂದಿಬೆಟ್ಟವೂ ಬೆಂಗಳೂರು ರಾಜ್ಯಧಾನಿಗೆ ತುಂಬಾ ಹತ್ತಿರವಿರುದರಿಂದ ಹೆಚ್ಚೆಚ್ಚು ಪ್ರವಾಸಿಗರು ನಂದಿಬೆಟ್ಟಕ್ಕೆ ಭೇಟಿ ನೀಡುವುದನ್ನು ಮನಗಂಡ ಜಿಲ್ಲಾಡಳಿತ ನಂದಿಬೆಟ್ಟದ ಮೇಲೆ ಮುಂದಾಗಬಹುದಾದ ಜನಸಂದಣಿಯನ್ನು ತಡೆಗಟ್ಟಿ ಸುರಕ್ಷಿತವಾಗಿ ಪ್ರವಾಸಿಗರು ಬಂದು ಹೋಗಲು ವೈಜ್ಞಾನಿಕವಾಗಿ ವ್ಯವಸ್ಥಿತ ಯೋಜನೆಯನ್ನು ರೂಪಿಸುವ ಉದ್ದೇಶ ಹೊಂದಿದೆ. ಈ ಹಿನ್ನಲೆಯಲ್ಲಿ ಜುಲೈ 19 ರಿಂದ ವಾಹನ ನಿಲುಗಡೆಗೆ ಅವಕಾಶವಿರುವಷ್ಟು ಮಂದಿಯನ್ನು ಮಾತ್ರ ಪ್ರವೇಶ ಪಾಸ್ ಅನ್ನು ನೀಡಿ ನಂದಿಬೆಟ್ಟಕ್ಕೆ ಭೇಟಿ ನೀಡಲು ಯೋಜಿಸಲಾಗಿದೆ. ಅದಕ್ಕೆ ಪ್ರವಾಸಿಗರು ಸಹಕರಿಸಬೇಕು. ಆರಂಭದಲ್ಲಿ ಈ ಪ್ರಕ್ರಿಯೆಯು ಒಂದೆರಡು ವಾರ ಭೌತಿಕವಾಗಿ ನಡೆಯಲಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಆನ್ ಲೈನ್ ಮೂಲಕ ನಿರ್ವಹಿಸಲಾಗುವುದು ಎಂದರು.

ಶೇಕಡಾ 50 ರಷ್ಟು ಪಾಸ್ ಗಳನ್ನು ಆನ್ ಲೈನ್ ನಲ್ಲಿ ಶೇಕಡಾ 50 ಪಾಸ್ ಗಳನ್ನು ಬೆಟ್ಟಕ್ಕೆ ಪ್ರವೇಶಿಸುವ ಮುಖ್ಯದ್ವಾರದಲ್ಲಿ ನೀಡಲಾಗುತ್ತದೆ. ಸಾರ್ವಜನಿಕರು ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿ ಪಾಸ್ ಪಡೆಯಬೇಕು. ಆರಂಭದಲ್ಲಿ ತುಸು ಗೊಂದಲವಾದರೂ ಸಹ ಮುಂದಿನ ದಿನಗಳಲ್ಲಿ ಈ ರೀತಿಯ ವ್ಯವಸ್ಥಿತ ವೀಕ್ಷಣೆಯಿಂದ ಪ್ರವಾಸಿತಾಣವನ್ನು ವೈಜ್ಞಾನಿಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಅನುಕೂಲವಾಗಲಿದೆ ಎಂದರು.

ಪ್ರಸ್ತುತ ನಂದಿಗಿರಿಧಾಮದ ಮೇಲಿರುವ ವಾಹನ ನಿಲ್ದಾಣದಲ್ಲಿ ಪ್ರಸ್ತುತ 310 ಕಾರು, 550 ದ್ವಿಚಕ್ರ ವಾಹನಗಳ ಪಾಕಿರ್ಂಗ್ ವ್ಯವಸ್ಥೆಯಿದ್ದು, ಬೆಟ್ಟದ ಕೆಳಭಾಗದಲ್ಲಿ 350 ಕಾರು ಹಾಗೂ 200 ದ್ವಿಚಕ್ರ ವಾಹನ ಪಾಕಿರ್ಂಗ್ ಮಾಡಬಹುದಾಗಿದೆ. ಈ ನಿಲುಗಡೆಯಲ್ಲಿ ಪಾರ್ಕ್ ಮಾಡಲು ವ್ಯವಸ್ಥೆ ಇರುವ ವಾಹನಗಳಲ್ಲಿನ ಪ್ರವಾಸಿಗರಿಗೆ ಮಾತ್ರ ಪಾಸ್ ವಿತರಿಸಿ ನಂದಿಬೆಟ್ಟ ವೀಕ್ಷಿಸಲು ಅನುಮತಿ ನೀಡಲಾಗುವುದು. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅವರ ನಿರ್ದೇಶನದಂತೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು. 

ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತರುವ ಮೂಲಕ ನಂದಿ ಪ್ರವಾಸ ತಾಣವನ್ನು ಸಂರಕ್ಷಿಸುವ ಜೊತೆಗೆ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಇದಲ್ಲದೆ ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಹಯೋಗದೊಂದಿಗೆ 7 ಎಕರೆ ಜಮೀನು ವ್ಯಾಪ್ತಿಯಲ್ಲಿ ಪಾಕಿರ್ಂಗ್ ವ್ಯವಸ್ಥೆಯನ್ನು ಅಭಿವೃದ್ಧಿ ಮಾಡಿ ಅಲ್ಲಿಂದ ಬಸ್ಗಳ ಮೂಲಕ ಪ್ರವಾಸಿರನ್ನು ನಂದಿಗಿರಿಧಾಮಕ್ಕೆ ಕರೆದೊಯ್ಯಲು ನೂತನ ವ್ಯವಸ್ಥೆಯನ್ನು ಮಾಡಲಾಗುವುದು. ಇದರಿಂದ ಪರಿಸರ ಸಂರಕ್ಷಣೆ ಮಾಡುವುದರೊಂದಿಗೆ  ವಾಹನ ದಟ್ಟಣೆ ಮತ್ತು ಜನಸಂದಣಿಯನ್ನು ನಿಯಂತ್ರಿಸಲು ಶಾಶ್ವತ ಪರಿಹಾರವಾಗಲಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಜುಲೈ 14 ರಿಂದಲೇ ಹಲವು ನೂತನ ಕ್ರಮಗಳನ್ನು ಕೈಗೊಂಡಿದೆ ಎಂದರು.

ರೋಪ್ ವೇ ನಿರ್ಮಾಣಕ್ಕೆ ಅಗತ್ಯಕ್ರಮ: ನಂದಿಗಿರಿಧಾಮದಲ್ಲಿ ರೋಪ್ ವೇ ನಿರ್ಮಾಣ ಸಂಬಂಧ ಸರ್ಕಾರಿ ಸಂಸ್ಥೆಯಾದ ಮೇ 11 ಐಡೆಕ್ ಸಂಸ್ಥೆ ಹಾಗೂ ಖಾಸಗಿ ಸಂಸ್ಥೆಯಾದ ಬಾಂಬೆ ರೋಪ್ ವೇ ಸಂಸ್ಥೆಯಿಂದ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ. ಈಗಾಗಲೇ ಮಣ್ಣಿನ ಗುಣಮಟ್ಟ ಪರೀಕ್ಷೆ, ಸ್ಥಳೀಯ ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಹಾಗೂ ಡ್ರೋಣ್ ಸರ್ವೆ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರೋಪ್ ವೇ ಆದಂತಹ ಸಂದರ್ಭದಲ್ಲಿಯೂ ಸಹ ಈಗ ನಿರ್ಮಿಸುತ್ತಿರುವ ಪಾಕಿರ್ಂಗ್ ವ್ಯವಸ್ಥೆಯನ್ನು ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

ನಂದಿಗಿರಿ ಪ್ರವಾಸವನ್ನು  ಸ್ವಲ್ಪದಿನ ಮುಂದೂಡಿ: ಜುಲೈ 19 ರಿಂದ ಹೊಸ ನಿಯಮಗಳನ್ನು ಜಾರಿಗೆ ತರುತ್ತಿರುವ ಹಿನ್ನಲೆಯಲ್ಲಿ ಹೊಸ ವ್ಯವಸ್ಥೆ ಸಮರ್ಪಕವಾಗಿ ಜಾರಿಯಾಗುವವರೆಗೆ ಹಾಗೂ ವಾರಾಂತ್ಯದಲ್ಲಿ ಪ್ರವಾಸಿಗರು ನಂದಿಬೆಟ್ಟ ಪ್ರವೇಶವನ್ನು ಸ್ವಲ್ಪದಿನಗಳ ಮಟ್ಟಿಗೆ ಮುಂದೂಡಿ, ಬೆಳಗಿನ ಜಾವ ಕಾಯುವಂತದ್ದು, ಜನಸಂದಣಿ, ವಾಹನದಟ್ಟಣೆ ಮಾಡುವಂತದ್ದನ್ನು ಮಾಡಬೇಡಿ. ಪಾಸ್ ಸಿಕ್ಕಿದವರು ಮಾತ್ರವೇ ನಂದಿಬೆಟ್ಟ ಪ್ರವೇಶ ಮಾಡಿ ಇನ್ನು ಮುಂದೆ ವಾಹನಗಳಿಗೂ ಮತ್ತು ಪ್ರವಾಸಿಗರಿಗೂ ಪ್ರತ್ಯೇಕವಾಗಿ ಪಾಸ್ ನೀಡಲಾಗುವುದು. ಭೇಟಿ ನೀಡಿದ ಪ್ರವಾಸಿಗರು ಪಾಸ್ ಗಳನ್ನು ಹಿಂತಿರುಗಿಸಬೇಕು. ಈ ಪ್ರಕ್ರಿಯೇ ಚಕ್ರದ ರೀತಿಯಲ್ಲಿ ನಿರಂತರವಾಗಿ  ನಡೆಯಲಿದೆ. ಈ ವ್ಯವಸ್ಥೆಯು ಸ್ವಲ್ಪ ದಿನದ ಮಟ್ಟಿಗೆ ಭೌತಿಕವಾಗಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಅಭಿವೃದ್ಧಿಪಡಿಸಿ ಆನ್ ಲೈನ್ ನಲ್ಲಿ ಶೇಕಡಾ 50 ಮತ್ತು ಭೌತಿಕವಾಗಿ ಶೇ.50 ರಷ್ಟು ಪಾಸ್ ಗಳನ್ನು ನೀಡುವ ವ್ಯವಸ್ಥೆ ಮಾಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆಯ ವಿಶೇಷ ಅಧಿಕಾರಿ ಗೋಪಾಲ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಿತೇಂದ್ರನಾಥ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X