Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಳಿ-ಮಳೆಗೆ ಅಂಪಾರು, ಇಡೂರು...

ಗಾಳಿ-ಮಳೆಗೆ ಅಂಪಾರು, ಇಡೂರು ಗ್ರಾಮಗಳಲ್ಲಿ ಅಡಿಕೆ ತೋಟಕ್ಕೆ ಹಾನಿ

ವಾರ್ತಾಭಾರತಿವಾರ್ತಾಭಾರತಿ16 July 2021 7:40 PM IST
share
ಗಾಳಿ-ಮಳೆಗೆ ಅಂಪಾರು, ಇಡೂರು ಗ್ರಾಮಗಳಲ್ಲಿ ಅಡಿಕೆ ತೋಟಕ್ಕೆ ಹಾನಿ

ಉಡುಪಿ, ಜು.16: ಕುಂದಾಪುರ ತಾಲೂಕಿನಲ್ಲಿ ಗುರುವಾರ ಬೀಸಿದ ಗಾಳಿ- ಮಳೆಗೆ ಅಂಪಾರು ಹಾಗೂ ಇಡೂರು ಗ್ರಾಮಗಳಲ್ಲಿ ಅಡಿಕೆ ತೋಟ ಗಳಿಗೆ ಅಪಾರ ಹಾನಿ ಸಂಭವಿಸಿದೆ. ಅಲ್ಲದೇ ಜಿಲ್ಲೆಯಾದ್ಯಂತ ದಿನದಲ್ಲಿ 20ಕ್ಕೂ ಅಧಿಕ ಮನೆಗಳಿಗೆ ಭಾಗಶ: ಹಾನಿಯಾಗಿರುವ ವರದಿಗಳು ಇಲ್ಲಿಗೆ ಬಂದಿವೆ.

ಬಸ್ರೂರು ಸಮೀಪದ ಅಂಪಾರು ಗ್ರಾಮದ ಗಿರಿಜಮ್ಮ ಶೆಡ್ತಿ ಎಂಬವರಿಗೆ ಸೇರಿದ ತೋಟದ ಅಡಿಕೆ ಮರಗಳು ಧರಾಶಾಹಿಯಾಗಿವೆ. ಇದರಿಂದ 40,000 ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ. ಅದೇ ರೀತಿ ಇಡೂರು ಗ್ರಾಮದ ಸುಲೋಚನಾ ಶೆಡ್ಡಿ ಅವರ ಮನೆಯ ತೋಟದ ಅಡಿಕೆ ಮರಗಳು ಗಾಳಿಯ ಹೊಡೆತಕ್ಕೆ ಮುರಿದು ಬಿದ್ದಿದ್ದು ಸುಮಾರು 20ಸಾವಿರ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ.

ಬಸ್ರೂರು ಗ್ರಾಮದ ಅಕ್ಕಯ್ಯ ಪೂಜಾರ್ತಿ ಅವರ ಪಕ್ಕಾ ಮನೆ ಹಾಗೂ ಅಂಪಾರು ಗ್ರಾಮದ ಬಾಡು ಮಡಿವಾಳರ ವಾಸ್ತವ್ಯದ ಪಕ್ಕಾ ಮನೆ ಮಳೆಯಿಂದ ಭಾಗಶ: ಹಾನಿಗೊಂಡಿದ್ದು ತಲಾ 25,000ರೂ.ನಷ್ಟ ಉಂಟಾಗಿದೆ. ತ್ರಾಸಿ ಗ್ರಾಮದ ರಿಚರ್ಡ್ ಮನೆಯ ಜಾನುವಾರು ಕೊಟ್ಟಿಗೆ ಗಾಳಿಯಿಂದ ಭಾಗಶ: ಹಾನಿಯಾಗಿ 35,000ರೂ. ಕುಳಂಜೆ ಗ್ರಾಮದ ಶೇಖರ ಮೊಗವೀರರ ಜಾನುವಾರು ಕೊಟ್ಟಿಗೆಗೆ 20ಸಾವಿರ ಹಾಗೂ ಬೆಳ್ಳಾಲ ಗ್ರಾಮದ ಗಿರಿಜ ಪೂಜಾರ್ತಿ ಮನೆಯ ಜಾನುವಾರು ಕೊಟ್ಟಿಗೆಗೆ 30ಸಾವಿರ ರೂ.ನಷ್ಟದ ಅಂದಾಜು ಮಾಡಲಾಗಿದೆ.

ಬೈಂದೂರು ತಾಲೂಕಿನ ಹೆರಂಜಾಲು ಗ್ರಾಮದ ಸವಿತಾ ಎಂಬವರ ಜಾನುವಾರ ಕೊಟ್ಟಿಗೆಗೆ 20,000, ಉಪ್ಪುಂದ ಗ್ರಾಮದ ಗೋವಿಂದ ಖಾರ್ವಿ ಇವರ ಮನೆ ಮೇಲೆ ಮರಬಿದ್ದು 40ಸಾವಿರ ರೂ.ನಷ್ಟವಾಗಿದೆ. ಉಡುಪಿ ತಾಲೂಕು ಉದ್ಯಾವರ ಗ್ರಾಮದ ಸಂಜೀವ ಹಾಗೂ ಎಂ.ಕೆ.ಶಾಂತರಾಜ ಕೋಟ್ಯಾನ್ ಎಂಬವರ ಮನೆಯ ಹೆಂಚು ಗಾಳಿಗೆ ಹಾರಿಹೋಗಿ 20,000ರೂ. ನಷ್ಟ ಉಂಟಾಗಿದೆ.

ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಮುತ್ತು ಪೂಜಾರ್ತಿ, ವಡ್ಡರ್ಸೆ ಗ್ರಾಮದ ಶಿವಕುಮಾರ್, ಬೈಕಾಡಿ ಗ್ರಾಮದ ರಾಜೀವ ಶೆಟ್ಟಿ ಹಾಗೂ ಚೇರ್ಕಾಡಿ ಗ್ರಾಮದ ರಾಮ ಹಾಂಡರ ವಾಸ್ತವ್ಯದ ಪಕ್ಕಾ ಮನೆಗಳು ಗಾಳಿ-ಮಳೆಗೆ ಹಾಗೂ ಮರಬಿದ್ದು ಭಾಗಶ: ಹಾನಿಯಾಗಿದ್ದು 15,000ರೂ.ಗಳಿಂದ 70,000ರೂ.ವರೆಗೆ ನಷ್ಟದ ಅಂದಾಜು ಮಾಡಲಾಗಿದೆ.

ಕಾಪು ತಾಲೂಕು ತೆಂಕಗ್ರಾಮದ ಅಕ್ಕಣಿ ಇವರ ಮನೆಗೆ 60,000ರೂ., ಹೆಬ್ರಿ ತಾಲೂಕು ವರಂಗ ಗ್ರಾಮದ ಅಣ್ಣಯ್ಯ ಶೆಟ್ಟಿ ಮನೆಗೆ ಹತ್ತು ಸಾವಿರ ಹಾಗೂ ಕಾರ್ಕಳ ತಾಲೂಕು ಬೋಳ ಗ್ರಾಮದ ಸುಂದರ ಪೂಜಾರಿ, ಮಾಳ ಗ್ರಾಮದ ಗೋವಿಂದ ಗೌಡ, ಮರ್ಣೆ ಗ್ರಾಮದ ವೀರಪ್ಪ ನಾಯ್ಕರ ಮನೆಗೆ 4000ರೂ.ನಿಂದ 40,000ರೂ.ವರೆಗೆ ನಷ್ಟ ಉಂಟಾಗಿರುವುದಾಗಿ ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X