Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲಾದ್ಯಂತ ಮುಂದುವರಿದ ಮಳೆ : 31...

ದ.ಕ. ಜಿಲ್ಲಾದ್ಯಂತ ಮುಂದುವರಿದ ಮಳೆ : 31 ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ16 July 2021 10:20 PM IST
share
ದ.ಕ. ಜಿಲ್ಲಾದ್ಯಂತ ಮುಂದುವರಿದ ಮಳೆ : 31 ಮನೆಗಳಿಗೆ ಹಾನಿ

ಮಂಗಳೂರು, ಜು.16: ದ.ಕ. ಜಿಲ್ಲಾದ್ಯಂತ ಶುಕ್ರವಾರವೂ ಉತ್ತಮ ಮಳೆಯಾಗಿದ್ದು, ಹಾನಿಯ ಪ್ರಮಾಣವೂ ಹೆಚ್ಚಾಗಿವೆ. ಗುರುವಾರ ರಾತ್ರಿ ಹಗಲೆನ್ನದೆ ಸುರಿದ ಮಳೆಯಿಂದ ಶುಕ್ರವಾರ ಮತ್ತೆ ಕೆಲವು ಕಡೆಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಉರುಳಿವೆ, ಕಾಂಪೌಂಡ್ ಕುಸಿದಿದೆ, ಗುಡ್ಡ ಜರಿದಿವೆ. ಇದರಿಂದ 4 ಮನೆಗಳು ಸಂಪೂರ್ಣ ಮತ್ತು 27 ಭಾಗಶಃ ಸಹಿತ ಜಿಲ್ಲೆಯಲ್ಲಿ ಶುಕ್ರವಾರ 31 ಮನೆಗಳಿಗೆ ಹಾನಿಯಾಗಿವೆ. ಇದರೊಂದಿಗೆ 2021ರ ಎಪ್ರಿಲ್ 1ರಿಂದ ಈವರೆಗೆ ಭಾಗಶಃ 410 ಮನೆಗಳಿಗೆ ಮತ್ತು 73 ಮನೆಗಳು ಸಂಪೂರ್ಣ ಹಾನಿಯಾಗಿದೆ.

ಶುಕ್ರವಾರ ಮುಂಜಾನೆ ಮತ್ತು ಮಧ್ಯಾಹ್ನ ಉತ್ತಮ ಮಳೆಯಾಗಿತ್ತು. ಉಳಿದಂತೆ ಮಳೆಯು ಬಿಡುವು ಪಡೆದುಕೊಂಡಿತ್ತು. ಆದರೆ ಮೋಡ ಕವಿದ ವಾತಾವರಣವಿತ್ತು. ಪಶ್ಚಿಮ ಘಟ್ಟ ಹಾಗೂ ತಪ್ಪಲು ಪ್ರದೇಶದಲ್ಲಿ ನಿರಂತರ ಮಳೆಯಾದ ಕಾರಣ ಶುಕ್ರವಾರವೂ ಜಿಲ್ಲೆಯ ಫಲ್ಗುಣಿ ಮತ್ತು ನೇತ್ರಾವತಿ ನದಿಗಳು ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿ ತಟದ ಹಲವು ಕಡೆ ನೆರೆಭೀತಿ ಆವರಿಸಿದೆ.

ಶುಕ್ರವಾರ ಪಂಜಿಮೊಗರಿನ ಲಿಸನ್ ಡಿಸೋಜ ಅವರ ಮನೆಗೆ, ಇಡ್ಯ ಗ್ರಾಮದ ಪುಷ್ಪಾ ಎಂಬವರ ಮನೆಗೆ, ಉಳ್ಳಾಲ ಗ್ರಾಮದ ಉಳ್ಳಾಲ ಹೊಯಿಗೆ ಎಂಬಲ್ಲಿ ಫೆಲಿಕ್ಸ್ ಡಿಸೋಜರ ಮನೆಗೆ ಭಾಗಶಃ ಹಾನಿಯಾಗಿದೆ. ಉಳ್ಳಾಲ ಗ್ರಾಮದ ಉಳಿಯ ಎಂಬಲ್ಲಿ ಶೈನಿ ಡಿಸೋಜರ ಮನೆಗೆ ತೀವ್ರ ಹಾನಿಯಾಗಿದೆ. ಅರ್ಕುಳದ ಕೋಟೆಯ ನೌಶಾದ್ ಎಂಬವರ ಮನೆ ಸಮೀಪದ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಬಡಗ ಎಕ್ಕಾರು ಗ್ರಾಮದ ದೇವರಗುಡ್ಡ ಜರಿದಿದ್ದು, ರಸ್ತೆಗೆ ಹಾನಿಯಾಗಿದೆ. ಇದರಿಂದ ಕೆಲಕಾಲ ಸಂಚಾರಕ್ಕೆ ತೊಡಕುಂಟಾಗಿತ್ತು.

ಮಂಗಳೂರಿನ ಡಿಸಿ ಕಚೇರಿಯ ಸುತ್ತಮುತ್ತ 123.0 ಮಿ.ಮೀ., ಮಂಗಳೂರು ರೈಲ್ವೆ ನಿಲ್ದಾಣದಲ್ಲಿ 122.8 ಮಿ.ಮೀ., ಮುಲ್ಕಿಯಲ್ಲಿ 196.0ಮಿ.ಮೀ., ಉಳ್ಳಾಲದಲ್ಲಿ 128.3 ಮಿ.ಮೀ, ಬಜ್ಪೆಯಲ್ಲಿ 126.8 ಮಿ.ಮೀ., ಪಣಂಬೂರಿನಲ್ಲಿ 150.0 ಮಿ.ಮೀ., ಸುರತ್ಕಲ್‌ನಲ್ಲಿ 158.0 ಮಿ.ಮೀ. ಮಳೆಯಾಗಿದೆ. ಬಂಟ್ವಾಳ ತಾಲೂಕಿನ ಪುದುವಿನಲ್ಲಿ 120.4 ಮಿ.ಮೀ., ಮಾಣಿಯಲ್ಲಿ 145. 4 ಮಿ.ಮೀ. ವಿಟ್ಲದಲ್ಲಿ 103.4 ಮಿ.ಮೀ., ಬೆಳ್ತಂಗಡಿಯ ಐಬಿಯಲ್ಲಿ 103.4 ಮಿ.ಮೀ., ವೇಣೂರಿನಲ್ಲಿ 139.8 ಮಿ.ಮೀ. ಪುತ್ತೂರಿನಲ್ಲಿ 123.6 ಮಿ.ಮೀ., ಸುಳ್ಯದ ಜಾಲ್ಸೂರಿನಲ್ಲಿ 138. 2 ಮಿ.ಮೀ. ಮಳೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X