Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಡಿಟಿಪಿ ಪ್ರಥಮ ಡೋಸ್ ಲಸಿಕೆ...

ಭಾರತದಲ್ಲಿ ಡಿಟಿಪಿ ಪ್ರಥಮ ಡೋಸ್ ಲಸಿಕೆ ವಂಚಿತ ಮಕ್ಕಳ ಸಂಖ್ಯೆ 3 ಮಿಲಿಯನ್ ಗೂ ಅಧಿಕ: ವಿಶ್ವ ಆರೋಗ್ಯ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ16 July 2021 11:19 PM IST
share
ಭಾರತದಲ್ಲಿ ಡಿಟಿಪಿ ಪ್ರಥಮ ಡೋಸ್ ಲಸಿಕೆ ವಂಚಿತ ಮಕ್ಕಳ ಸಂಖ್ಯೆ 3 ಮಿಲಿಯನ್ ಗೂ ಅಧಿಕ: ವಿಶ್ವ ಆರೋಗ್ಯ ಸಂಸ್ಥೆ

ವಿಶ್ವಸಂಸ್ಥೆ, ಜು.16: ಭಾರತದಲ್ಲಿ 2020ರಲ್ಲಿ 3 ಮಿಲಿಯನ್ಗೂ ಅಧಿಕ ಮಕ್ಕಳು ಡಿಟಿಪಿ ಮೊದಲ ಡೋಸ್ ಲಸಿಕೆ ಪಡೆಯುವುದರಿಂದ ವಂಚಿತರಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಮಾರಕ ಸೋಂಕು ರೋಗಗಳಾದ ಡಿಫ್ತೀರಿಯಾ- ಟಿಟನಸ್-ಪೆರ್ಟುಸಿಸ್(ಗಂಟಲು ಮಾರಿ-ಧನುರ್ವಾತ-ನಾಯಿಕೆಮ್ಮು ರೋಗ)ದ ವಿರುದ್ಧ ವಿಶ್ವದಾದ್ಯಂತ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ‌

2019ರಲ್ಲಿ ಜಾಗತಿಕವಾಗಿ ಲಸಿಕೆಯ ಪ್ರಥಮ ಡೋಸ್ ಪಡೆಯುವುದರಿಂದ ವಂಚಿತರಾದ ಮಕ್ಕಳ ಸಂಖ್ಯೆ 3.5 ಮಿಲಿಯ ಹೆಚ್ಚಿದ್ದರೆ ದಡಾರ ರೋಗದ ವಿರುದ್ಧದ ಪ್ರಥಮ ಡೋಸ್ ಲಸಿಕೆ ವಂಚಿತ ಮಕ್ಕಳ ಸಂಖ್ಯೆ 3 ಮಿಲಿಯ ಹೆಚ್ಚಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. 2019ರಲ್ಲಿ ಭಾರತದ 1,403,000 ಮಕ್ಕಳು ಡಿಟಿಪಿ ಪ್ರಥಮ ಡೋಸ್ ಲಸಿಕೆ ಪಡೆದಿಲ್ಲ, ಆದರೆ ಈ ಸಂಖ್ಯೆ 2020ರಲ್ಲಿ 3,038,000ಗೆ ಏರಿಕೆಯಾಗಿದೆ. ಮಧ್ಯಮ ಆದಾಯದ ದೇಶಗಳಲ್ಲಿ ಅಸುರಕ್ಷಿತ ಮಕ್ಕಳ ಪ್ರಮಾಣ ಹೆಚ್ಚುತ್ತಿರುವುದು ಈ ಅಂಕಿಅಂಶದಲ್ಲಿ ವ್ಯಕ್ತವಾಗುತ್ತದೆ. 

ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಈ ಪ್ರಮಾಣ ಹೆಚ್ಚುತ್ತಿದ್ದು ಡಿಟಿಪಿ 3 ಡೋಸ್ ಪಡೆದ ಮಕ್ಕಳ ಪ್ರಮಾಣ 91%ದಿಂದ 85%ಕ್ಕೆ ಇಳಿದಿದೆ. ವಿಶ್ವದಾದ್ಯಂತ ಕೊರೋನ ಸೋಂಕಿನ ಸಮಸ್ಯೆ ಮಕ್ಕಳಿಗೆ ಪ್ರತಿರೋಧಕ ಶಕ್ತಿ ನೀಡುವ ಲಸಿಕೀಕರಣ ಪ್ರಕ್ರಿಯೆಗೆ ತೀವ್ರ ತೊಡಕಾಗಿದ್ದು 2020ರಲ್ಲಿ ವಿಶ್ವದಾದ್ಯಂತ ಸುಮಾರು 23 ಮಿಲಿಯನ್ ಮಕ್ಕಳು ಪ್ರಾಥಮಿಕ ಲಸಿಕೀಕರಣದಿಂದ ವಂಚಿತರಾಗಿದ್ದಾರೆ. ಇದರಲ್ಲಿ ಸುಮಾರು 17 ಮಿಲಿಯ ಮಕ್ಕಳು ಒಂದೂ ಡೋಸ್ ಲಸಿಕೆ ಪಡೆದಿಲ್ಲ. 

ಹಲವು ದೇಶಗಳು ಲಭ್ಯ ಸಂಪನ್ಮೂಲವನ್ನು ಕೊರೋನ ಸೋಂಕಿಗೆ ಸಂಬಂಧಿಸಿದ ಚಿಕಿತ್ಸೆಗೆ ಬಳಸಿರುವುದರಿಂದ ಮಕ್ಕಳ ಲಸಿಕೀಕರಣ ಪ್ರಕ್ರಿಯೆಗೆ ಗಮನಾರ್ಹ ತಡೆಯಾಗಿದೆ. ಇನ್ನು ಕೆಲ ದೇಶಗಳಲ್ಲಿ ವೈದ್ಯಕೀಯ ಕೇಂದ್ರಗಳನ್ನು ಮುಚ್ಚಲಾಗಿದೆ ಅಥವಾ ಕಾರ್ಯಾವಧಿ ಕಡಿಮೆಗೊಳಿಸಿರುವುದು ಸಮಸ್ಯೆಯಾಗಿದೆ. ಲಾಕ್ಡೌನ್ ನಿರ್ಬಂಧದಿಂದ ಜನತೆ ಆರೋಗ್ಯ ಕೇಂದ್ರ ತಲುಪಲು ಅಡ್ಡಿಯಾಗಿರುವುದು ಅಥವಾ ಸೋಂಕು ಹರಡುವ ಭೀತಿಯಿಂದ ಆರೋಗ್ಯ ಕೇಂದ್ರದತ್ತ ಹೋಗಲೂ ಹಿಂಜರಿಯುವುದು ಸಮಸ್ಯೆಯ ಇನ್ನೊಂದು ಮುಖವಾಗಿದೆ. 

ಸಂಘರ್ಷದಿಂದ ಪರಿಣಾಮಕ್ಕೆ ಒಳಗಾಗಿರುವ ಸಮುದಾಯದವರ ಮಕ್ಕಳು ಅಥವಾ ಕುಗ್ರಾಮಗಳಲ್ಲಿ ನೆಲೆಸಿರುವ ಮಕ್ಕಳು, ಕೊಳೆಗೇರಿ ನಿವಾಸಿಗಳ ಮಕ್ಕಳಿಗೆ ಆರೋಗ್ಯ ಮತ್ತು ಸಾಮಾಜಿಕ ಸೌಲಭ್ಯಗಳ ಪ್ರಯೋಜನ ಕನಿಷ್ಟ ಮಟ್ಟದಲ್ಲಿ ದೊರಕುತ್ತದೆ. ಕೋವಿಡ್-19 ಲಸಿಕೀಕರಣದಲ್ಲಿ ಉತ್ತಮ ಸಾಧನೆ ತೋರಿರುವ ದೇಶಗಳಲ್ಲೂ, ಮಕ್ಕಳ ಲಸಿಕೀಕರಣ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿರುವುದರಿಂದ ಮಕ್ಕಳು ದಡಾರ, ಪೋಲಿಯೊ, ಮಿದುಳಿನ ರೋಗ ಮುಂತಾದ ಮಾರಕ, ಆದರೆ ತಡೆಯಬಹುದಾದ ರೋಗಗಳಿಗೆ ಬಲಿಯಾಗುವ ಅಪಾಯ ಹೆಚ್ಚಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಡಾ. ಟೆಡ್ರೋಸ್ ಅಧ್ನಾಮ್ ಘೆಬ್ರೆಯೆಸುಸ್ ಹೇಳಿದ್ದಾರೆ. 

ಹಲವು ರೋಗಗಳು ಉಲ್ಬಣಗೊಳ್ಳುವುದು, ಕೊರೋನ ಸೋಂಕಿನ ವಿರುದ್ಧದ ಹೋರಾಟದಲ್ಲಿ ಇನ್ನೂ ನಿರತರಾಗಿರುವ ಸಮುದಾಯ ಮತ್ತು ಆರೋಗ್ಯವ್ಯವಸ್ಥೆಗೆ ಮಾರಕವಾಗಬಲ್ಲದು. ಆದ್ದರಿಂದ ಮಕ್ಕಳ ಲಸಿಕೀಕರಣ ವ್ಯವಸ್ಥೆಗೆ ಹೆಚ್ಚುವರಿ ಅನುದಾನ ವಿನಿಯೋಗಿಸಿ ಮಕ್ಕಳನ್ನು ರಕ್ಷಿಸಬೇಕಾಗಿದೆ ಎಂದವರು ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X