Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆ...

ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆ ಸಿದ್ಧತೆ: ಕೋವಿಡ್ ಕೇರ್ ಸೆಂಟರ್‌ಗಳಲ್ಲೂ ಪರೀಕ್ಷೆಗೆ ವ್ಯವಸ್ಥೆ

ಕೊರೋನ ಸೋಂಕಿತ 9 ವಿದ್ಯಾರ್ಥಿಗಳ ನೋಂದಣಿ

ವಾರ್ತಾಭಾರತಿವಾರ್ತಾಭಾರತಿ17 July 2021 3:12 PM IST
share
ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆ ಸಿದ್ಧತೆ: ಕೋವಿಡ್ ಕೇರ್ ಸೆಂಟರ್‌ಗಳಲ್ಲೂ ಪರೀಕ್ಷೆಗೆ ವ್ಯವಸ್ಥೆ

ಮಂಗಳೂರು, ಜು. 17: ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಈಗಾಗಲೇ 9 ಮಂದಿ ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಿಗೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಡಿಡಿಪಿಐ ಮಲ್ಲೇಸ್ವಾಮಿ ಈ ಮಾಹಿತಿ ನೀಡಿದರು.

ದ.ಕ. ಜಿಲ್ಲೆಯಲ್ಲಿ ಈ ಬಾರಿ 179 ಪರೀಕ್ಷಾ ಕೇಂದ್ರಗಳಲ್ಲಿ 29351 ರೆಗ್ಯುಲರ್, 694 ಖಾಸಗಿ, 2050 ಶಾಲಾ ಪುನರಾವರ್ತಿತ ಅಭ್ಯರ್ಥಿಗಳು, 538 ಖಾಸಗಿ ಪುನರಾವರ್ತಿತ ಸೇರಿದಂತೆ ಒಟ್ಟು 32636 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ.

ಎಸೆಸೆಲ್ಸಿ ಪರೀಕ್ಷೆ ಬರೆಯಲು ಸಿದ್ಧರಾಗಿರುವ ಮಕ್ಕಳು ಒಂದು ವೇಳೆ ಕೊರೋನ ಸೋಂಕಿಗೆ ಒಳಪಟ್ಟಿದ್ದಲ್ಲಿ ಪೋಷಕರು ಶನಿವಾರದೊಳಗೆ ಮಾಹಿತಿ ನೀಡುವಂತೆ ತಿಳಿಸಲಾಗಿತ್ತು. ಅದರಂತೆ 9 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಕೋವಿಡ್ ಕೇರ್ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಸಹಕಾರದಲ್ಲಿ ಪರೀಕ್ಷೆ ಎದುರಿಸಲು ಕ್ರಮಗಳ್ನು ಕೈಗೊಳ್ಳಲಾಗಿದೆ. ಕೇರಳದ 441 ಮಂದಿ ಎಸೆಸೆಲ್ಸಿ ವಿದ್ಯಾರ್ಥಿಗಳಲ್ಲಿ 121 ಮಕ್ಕಳು ತಲಪಾಡಿ ಮೂಲಕ ಆಗಮಿಸಲಿದ್ದು, ಅವರಿಗೆ ಕೆಎಸ್‌ಆರ್‌ಟಿಸಿ, ಖಾಸಗಿ ಬಸ್ಸುಗಳಲ್ಲಿ ಮಕ್ಕಳ ಪರೀಕ್ಷೆ ಪ್ರವೇಶ ಪತ್ರದ ಆಧಾರದಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿ ಸಲು ಮನವಿ ಮಾಡಲಾಗಿದೆ. ಇದಲ್ಲದೆ ಶಿಕ್ಷಣ ಇಲಾಖೆಯು 4 ಬಸ್ಸುಗಳನ್ನು ತಲಪಾಡಿ ಗಡಿಯಲ್ಲಿ ಇರಿಸಲು ಸೂಚಿಸಿದೆ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ವಾಸವಿ ರುವ ಪ್ರತಿ 4 ಕಿ.ಮೀ. ವ್ಯಾಪ್ತಿಯಲ್ಲೇ ಪರೀಕ್ಷಾ ಕೇಂದ್ರಗಳಿವೆ. ಈಗಾಗಲೇ ಸುಮಾರು 50ರಷ್ಟು ವಿದ್ಯಾರ್ಥಿಗಳು ಬಸ್ಸು ವ್ಯವಸ್ಥೆಗಾಗಿ ಬೇಡಿಕೆ ಸಲ್ಲಿಸಿದ್ದು, ಅವರಿಗೆ ಸೂಕ್ತ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ ಎಂದು ಮಲ್ಲೇ ಸ್ವಾಮಿ ತಿಳಿಸಿದರು.

ಈ ಬಾರಿ ಮಕ್ಕಳ ಜತೆಗೆ ಶಿಕ್ಷಕರಿಗೆ ಎಸೆಸೆಲ್ಸಿ ಪರೀಕ್ಷೆ ಹೊಸತಾಗಿದ್ದು, ಒಎಂಆರ್ ಶೀಟ್ ಆಧಾರದಲ್ಲಿ ಪರೀಕ್ಷೆ ನಡೆಯಲಿದೆ. ಅದಕ್ಕಾಗಿ ಈಗಾಗಲೇ ಮಾದರಿ ಪರೀಕ್ಷೆಯನ್ನು ಕೂಡಾ ನಡೆಸಲಾಗಿದ್ದು, ಮಾದರಿ ಪ್ರಶ್ನೆ ಪತ್ರಿಕೆಗಳೂ ವಿದ್ಯಾಥಿಗರ್ಳಿಗೆ ತಲುಪುವಂತೆ ಮಾಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲ, ಆತಂಕವಿಲ್ಲದೆ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಜಿಲ್ಲೆಯಿಂದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ರಾಜೇಶ್ ನಾಯ್ಕ, ಉಮಾನಾಥ ಕೋಟ್ಯಾನ್, ಡಾ. ಭರತ್ ಶೆಟ್ಟಿ ಹಾಗು ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X