Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಜಾತ್ಯತೀತ ಪಠ್ಯಗಳನ್ನು ಕೈಬಿಟ್ಟ...

"ಜಾತ್ಯತೀತ ಪಠ್ಯಗಳನ್ನು ಕೈಬಿಟ್ಟ ಬಿಜೆಪಿಯಿಂದ ಶಿಕ್ಷಣದ ಕೇಸರೀಕರಣ": ಬಂಗಾಳ ಶಿಕ್ಷಣ ಸಚಿವರ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ17 July 2021 6:13 PM IST
share
ಜಾತ್ಯತೀತ ಪಠ್ಯಗಳನ್ನು ಕೈಬಿಟ್ಟ ಬಿಜೆಪಿಯಿಂದ ಶಿಕ್ಷಣದ ಕೇಸರೀಕರಣ: ಬಂಗಾಳ ಶಿಕ್ಷಣ ಸಚಿವರ ಆಕ್ಷೇಪ

ಕೊಲ್ಕತ್ತಾ: ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಶಾಲಾ ಪಠ್ಯಗಳಿಂದ ಜಾತ್ಯತೀತತೆಯ ಕುರಿತಾದ ಪಠ್ಯಗಳನ್ನು ಕೈಬಿಟ್ಟು ಬಿಜೆಪಿ ಶಿಕ್ಷಣವನ್ನು ಕೇಸರೀಕರಣಗೊಳಿಸಲು ಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಬೃತ್ಯ ಬಸು ಆರೋಪಿಸಿದ್ದಾರೆ.

ಉತ್ತರ ಪ್ರದೇಶ ಸರಕಾರವು ಶಾಲಾ ಪಠ್ಯದಿಂದ ರವೀಂದ್ರನಾಥ್ ಠಾಗೋರ್ ಅವರ ಕಥೆಯೊಂದನ್ನು ಪಠ್ಯದಿಂದ ಕೈಬಿಟ್ಟಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಬಸು ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

"ಅವರು ಠಾಗೋರ್ ಅವರು ಬರೆದಿರುವ ಕಥೆಯನ್ನು ಪಠ್ಯದಿಂದ ಹೊರಗಿಡಬಹುದಾದರೆ ಇದು ಅವರ ಆಕ್ರಮಣಕಾರಿ ಮನೋವೃತ್ತಿಯನ್ನು ಸೂಚಿಸುತ್ತದೆ. ಠಾಗೋರ್ ಅವರ ಬರಹಗಳಲ್ಲಿ ಗಮನಿಸಿದಂತೆ ಅವರೊಬ್ಬ ಜಾತ್ಯತೀತ ವ್ಯಕ್ತಿತ್ವ. ಸಹಜವಾಗಿ ಬಿಜೆಪಿಗೆ ಇಂತಹ ಸಿದ್ಧಾಂತಗಳು ಖುಷಿ ನೀಡುವುದಿಲ್ಲ. ಇದೇ ಕಾರಣಕ್ಕೆ ಅವರು ಠಾಗೋರ್, ಡಾ ರಾಧಾಕೃಷ್ಣನ್ ಕುರಿತಾದ ವಿಷಯಗಳನ್ನು ಶಾಲಾ ಪಠ್ಯಗಳಿಂದ ಹೊರಗಿಡುತ್ತಿದ್ದಾರೆ,'' ಎಂದು ಬಸು ಹೇಳಿದರು.

ಉತ್ತರ ಪ್ರದೇಶದಲ್ಲಿ ಎನ್‍ಸಿಇಆರ್‍ಟಿ ಪಠ್ಯ ಇಂಗ್ಲಿಷ್‍ಗೆ ಜಾರಿಗೊಳಿಸಲಾಗುತ್ತಿರುವುದರಿಂದ 10ನೇ ಮತ್ತು 12ನೇ ತರಗತಿಗಳ ಪಠ್ಯದಿಂದ ಠಾಗೋರ್ ಮತ್ತು ಎಸ್ ರಾಧಾಕೃಷ್ಣನ್ ಅವರ ಕಥೆಗಳನ್ನು ಉತ್ತರ ಪ್ರದೇಶ ಶಿಕ್ಷಣ ಮಂಡಳಿ ಕೈಬಿಟ್ಟಿತ್ತೆಂದು ಈ ಹಿಂದೆ ವರದಿಯಾಗಿದೆ.

ಠಾಗೋರ್ ಅವರ ಸಣ್ಣ ಕಥೆ `ದಿ ಹೋಮ್ ಕಮಿಂಗ್' ಹಾಗೂ ರಾಧಾಕೃಷ್ಣನ್ ಅವರ ಪ್ರಬಂಧ ʼದಿ ವಿಮೆನ್ಸ್ ಎಜುಕೇಶನ್' 12ನೇ ತರಗತಿಯ ಪಠ್ಯದ ಭಾಗವಾಗಿದ್ದವು. ಜತೆಗೆ ಸರೋಜಿನಿ ನಾಯ್ಡು ಅವರ ಕವನ ʼದಿ ವಿಲೇಜ್ ಸಾಂಗ್' ಮುಲ್ಕ್ ರಾಜ್ ಆನಂದ್ ಅವರ ʼದಿ ಲಾಸ್ಟ್ ಚೈಲ್ಡ್' ಮತ್ತು ಆರ್ ಕೆ ನಾರಾಯಣ್ ಅವರ `ಆ್ಯನ್ ಎಸ್ಟ್ರಾಲಜರ್ಸ್ ಡೇ' ಹಾಗೂ  ಎ ಎಲ್ ಬಾಷಮ್ ಅವರ ʼದಿ ಹೆರಿಟೇಜ್ ಆಫ್ ಇಂಡಿಯಾ' ಕೂಡ ಕೈಬಿಡಲಾಗಿದೆ. ಸಿ ರಾಜಗೋಪಾಲಾಚಾರಿ, ಜಾನ್ ಮಿಲ್ಟನ್ ಮತ್ತು ಪಿ ಬಿ ಶೆಲ್ಲಿ ಅವರು ಬರೆದ ಪ್ರಬಂಧ, ಕವನಗಳನ್ನೂ ಕೈಬಿಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X