Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಲ್ಪಸಂಖ್ಯಾತರ ರಕ್ಷಣೆ ಪ್ರಜಾಪ್ರಭುತ್ವದ...

ಅಲ್ಪಸಂಖ್ಯಾತರ ರಕ್ಷಣೆ ಪ್ರಜಾಪ್ರಭುತ್ವದ ಅರ್ಥ: ಹರಿದ್ವಾರದಲ್ಲಿ ಕಸಾಯಿಖಾನೆಗಳಿಗೆ ನಿಷೇಧವನ್ನು ಪ್ರಶ್ನಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ17 July 2021 9:11 PM IST
share
ಅಲ್ಪಸಂಖ್ಯಾತರ ರಕ್ಷಣೆ ಪ್ರಜಾಪ್ರಭುತ್ವದ ಅರ್ಥ: ಹರಿದ್ವಾರದಲ್ಲಿ ಕಸಾಯಿಖಾನೆಗಳಿಗೆ ನಿಷೇಧವನ್ನು ಪ್ರಶ್ನಿಸಿದ ಹೈಕೋರ್ಟ್

ನೈನಿತಾಲ, ಜು.17: ಹರಿದ್ವಾರ ಜಿಲ್ಲೆಯಲ್ಲಿ ಕಸಾಯಿಖಾನೆಗಳನ್ನು ನಿಷೇಧಿಸಿರುವ ಕ್ರಮದ ಸಾಂವಿಧಾನಿಕತೆಯನ್ನು ಪ್ರಶ್ನಿಸಿರುವ ಉತ್ತರಾಖಂಡ ಉಚ್ಚ ನ್ಯಾಯಾಲಯವು, ನಾಗರಿಕತೆಯು ಅದು ತನ್ನ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುವ ರೀತಿಯಿಂದ ನಿರ್ಧರಿಸಲ್ಪಡುತ್ತದೆ ಎಂದು ಹೇಳಿದೆ.

ಹರಿದ್ವಾರ ಜಿಲ್ಲೆಯಲ್ಲಿ ಕಸಾಯಿಖಾನೆಗಳ ನಿಷೇಧವನ್ನು ಪ್ರಶ್ನಿಸಿ ಮಂಗ್ಲೌರ್ ನಿವಾಸಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡಿದ್ದ ಮುಖ್ಯ ನ್ಯಾಯಾಧೀಶ ಆರ್.ಎಸ್.ಚೌಹಾಣ್ ಮತ್ತು ನ್ಯಾ.ಅಲೋಕ ಕುಮಾರ ವರ್ಮಾ ಅವರ ಪೀಠವು, ಅಲ್ಪಸಂಖ್ಯಾತರ ರಕ್ಷಣೆಯು ಪ್ರಜಾಪ್ರಭುತ್ವದ ಅರ್ಥವಾಗಿದೆ. ನಾಗರಿಕತೆಯೊಂದನ್ನು ಅದು ತನ್ನ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುವ ರೀತಿಯಿಂದ ನಿರ್ಧರಿಸಲಾಗುತ್ತದೆ ಮತ್ತು ಹರಿದ್ವಾರದಂತಹ ನಿಷೇಧವು ತನ್ನ ಪ್ರಜೆಗಳ ಆಯ್ಕೆಗಳನ್ನು ಸರಕಾರವು ಎಷ್ಟರ ಮಟ್ಟಿಗೆ ನಿರ್ಧರಿಸಬಹುದು ಎನ್ನುವುದನ್ನು ಪ್ರಶ್ನಿಸುತ್ತದೆ ಎಂದು ಹೇಳಿತು.

ಹರಿದ್ವಾರ ಜಿಲ್ಲೆಯ ಮಂಗ್ಲೌರ್‌ನಂತಹ ಗಣನೀಯ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಪಟ್ಟಣಗಳಲ್ಲಿ ಕಸಾಯಿಖಾನೆ ನಿಷೇಧವು ಖಾಸಗಿತನದ ಹಕ್ಕು, ಜೀವಿಸುವ ಹಕ್ಕು ಮತ್ತು ಧರ್ಮವನ್ನು ಮುಕ್ತವಾಗಿ ಆಚರಿಸುವ ಹಕ್ಕುಗಳ ವಿರುದ್ಧವಾಗಿದೆ ಮತ್ತು ಮುಸ್ಲಿಮರ ವಿರುದ್ಧ ತಾರತಮ್ಯದ್ದಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ರಾಜ್ಯ ಸರಕಾರವು ಈ ವರ್ಷದ ಮಾರ್ಚ್‌ನಲ್ಲಿ ಹರಿದ್ವಾರದ ಎಲ್ಲ ಪ್ರದೇಶಗಳು ಕಸಾಯಿಖಾನೆಗಳಿಂದ ಮುಕ್ತವಾಗಿವೆ ಎಂದು ಘೋಷಿಸಿತ್ತು ಮತ್ತು ಕಸಾಯಿಖಾನೆಗಳಿಗೆ ನೀಡಿದ್ದ ನಿರಾಕ್ಷೇಪಣಾ ಪ್ರಮಾಣಪತ್ರಗಳನ್ನು ರದ್ದುಗೊಳಿಸಿತ್ತು.

ನಿಷೇಧವು ನಿರಂಕುಶ ಮತ್ತು ಅಸಾಂವಿಧಾನಿಕವಾಗಿದೆ ಎಂದು ಅರ್ಜಿಯು ಪ್ರತಿಪಾದಿಸಿದೆ. ಅರ್ಜಿಯು ಗಂಭೀರ ಮೂಲಭೂತ ಪ್ರಶ್ನೆಗಳನ್ನೆತ್ತಿದೆ ಮತ್ತು ಸಾಂವಿಧಾನಿಕ ವ್ಯಾಖ್ಯಾನದ ಅಗತ್ಯವನ್ನು ಒಳಗೊಂಡಿದೆ ಎಂದು ಉಚ್ಚ ನ್ಯಾಯಾಲಯವು ಹೇಳಿತು.

ಇಂತಹುದೇ ವಿಷಯಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಸರ್ವೋಚ್ಚ ನ್ಯಾಯಾಲಯವು, ಮಾಂಸ ನಿಷೇಧವನ್ನು ಯಾರದೇ ಗಂಟಲಿನೊಳಗೆ ಬಲವಂತದಿಂದ ತುರುಕಲಾಗುವುದಿಲ್ಲ. ನಾಳೆ ನೀವು ಯಾರೂ ಮಾಂಸವನ್ನು ತಿನ್ನಬಾರದು ಎಂದು ಹೇಳಬಹುದು ಎಂಬ ಕಳವಳಗಳನ್ನು ವ್ಯಕ್ತಪಡಿಸಿತ್ತು ಎಂದು ಹೇಳಿದ ಉಚ್ಚ ನ್ಯಾಯಾಲಯವು, ತನ್ನ ಆಹಾರ ಕ್ರಮವನ್ನು ನಿರ್ಧರಿಸುವ ಹಕ್ಕು ಪ್ರಜೆಗಿದೆಯೇ ಅಥವಾ ಅದನ್ನು ಸರಕಾರವು ನಿರ್ಧರಿಸುತ್ತದೆಯೇ ಎನ್ನುವುದು ಪ್ರಶ್ನೆಯಾಗಿದೆ ಎಂದು ತಿಳಿಸಿತು.

ಆದಾಗ್ಯೂ,ಇದು ಹಬ್ಬಗಳಿಂದ ನಿರ್ಬಂಧಿಸಲ್ಪಟ್ಟಿರದ ಸಾಂವಿಧಾನಿಕ ವಿಷಯವಾಗಿದೆ ಮತ್ತು ಪ್ರಕರಣದಲ್ಲಿ ಸೂಕ್ತ ವಿಚಾರಣೆ ಮತ್ತು ಚರ್ಚೆಗಳು ಅಗತ್ಯವಾಗಿವೆ. ಹೀಗಾಗಿ ಜು.21ರ ಬಕ್ರೀದ್‌ಗೆ ಮುನ್ನ ಇದನ್ನು ಇತ್ಯರ್ಥಗೊಳಸಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಾಲಯವು, ಮುಂದಿನ ವಿಚಾರಣೆಯನ್ನು ಜು.23ಕ್ಕೆ ನಿಗದಿಗೊಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X