Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೆರಂ ಆಸ್ಟ್ರಝೆನೆಕಾ ಲಸಿಕೆ ಪಡೆದವರು...

ಸೆರಂ ಆಸ್ಟ್ರಝೆನೆಕಾ ಲಸಿಕೆ ಪಡೆದವರು ಫ್ರಾನ್ಸ್ ಭೇಟಿಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ17 July 2021 10:47 PM IST
share

ಪ್ಯಾರಿಸ್, ಜು.17: ಭಾರತದಲ್ಲಿ ಅಭಿವೃದ್ಧಿಪಡಿಸಿದ ಆಸ್ಟ್ರಝೆನೆಕಾದ ಲಸಿಕೆಯನ್ನು ಪಡೆದಿರುವವರು ಫ್ರಾನ್ಸ್ ಗೆ ಭೇಟಿ ನೀಡಲು ಅಲ್ಲಿನ ಸರಕಾರ ಅವಕಾಶ ನೀಡಿದೆ. ಈ ಆದೇಶ ರವಿವಾರದಿಂದ ಜಾರಿಗೆ ಬರಲಿದೆ ಎಂದು ಮೂಲಗಳು ಹೇಳಿವೆ. ಇದೇ ವೇಳೆ, ಡೆಲ್ಟಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಗಡಿ ತಪಾಸಣಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಅಧ್ಯಕ್ಷರ ಕಚೇರಿಯ ಹೇಳಿಕೆ ತಿಳಿಸಿದೆ. 

ರವಿವಾರದಿಂದ ಬ್ರಿಟನ್, ಸ್ಪೇನ್, ಪೋರ್ಚುಗಲ್, ನೆದರ್ಲ್ಯಾಂಡ್, ಗ್ರೀಸ್‌ ನಿಂದ ಫ್ರಾನ್ಸ್ ಗೆ ಆಗಮಿಸುವವರು, ಫ್ರಾನ್ಸ್ ಗಡಿ ಪ್ರವೇಶಕ್ಕೂ 24 ಗಂಟೆ ಮೊದಲಿನ ನೆಗೆಟಿವ್ ವರದಿಯನ್ನು ಹೊಂದಿರಬೇಕು. ಸೋಂಕಿನ ಅಧಿಕ ಅಪಾಯವಿರುವ ರಾಷ್ಟ್ರಗಳ ಪಟ್ಟಿಗೆ ಶನಿವಾರ ಟ್ಯುನೀಷಿಯಾ, ಇಂಡೋನೇಶಿಯಾ, ಕ್ಯೂಬಾ ಮತ್ತು ಮೊಝಾಂಬಿಕ್ ದೇಶಗಳನ್ನು ಸೇರಿಸಲಾಗಿದೆ. ಈ ಪಟ್ಟಿಯಲ್ಲಿರುವ ದೇಶಗಳಿಂದ ಆಗಮಿಸುವವರು ಎರಡೂ ಡೋಸ್ ಲಸಿಕೆ ಪಡೆದಿದ್ದರೆ ಅವರಿಗೆ ನಿರ್ಬಂಧ ಅನ್ವಯಿಸುವುದಿಲ್ಲ ಎಂದು ಮೂಲಗಳು ಹೇಳಿವೆ. 

ಯುರೋಪಿಯನ್ ಯೂನಿಯನ್ ನ ಕೋವಿಡ್-19 ಪ್ರಮಾಣಪತ್ರವು ಯುರೋಪ್ನಲ್ಲಿ ತಯಾರಿಸಲಾದ ಆಸ್ಟ್ರಝೆನೆಕಾದ ಲಸಿಕೆಗೆ ಮಾತ್ರ ಮಾನ್ಯತೆ ನೀಡಿರುವುದರ ವಿರುದ್ಧ ಕೇಳಿಬಂದ ಜಾಗತಿಕ ಆಕ್ರೋಶದ ಬಳಿಕ, ಭಾರತದಲ್ಲಿ ಸೆರಂ ಸಂಸ್ಥೆ ಉತ್ಪಾದಿಸುವ ಆಸ್ಟ್ರಝೆನೆಕಾದ ಲಸಿಕೆ ಪಡೆದ ಪ್ರವಾಸಿಗರಿಗೆ ಅವಕಾಶ ನೀಡುವ ನಿರ್ಧಾರಕ್ಕೆ ಬರಲಾಗಿದೆ. 

ಯುರೋಪಿಯನ್ ಯೂನಿಯನ್ನ ಇತರ ಹಲವು ದೇಶಗಳು ಈಗಾಗಲೇ ಸೆರಂನ ಆಸ್ಟ್ರಝೆನೆಕಾ ಲಸಿಕೆಗೆ ಅನುಮೋದನೆ ನೀಡಿದೆ. ರಶ್ಯಾ ಅಥವಾ ಚೀನೀ ಸಂಸ್ಥೆ ಉತ್ಪಾದಿಸಿದ ಲಸಿಕೆಗಳಿಗೆ ಇದುವರೆಗೆ ಫ್ರಾನ್ಸ್ ಅನುಮೋದನೆ ನೀಡಿಲ್ಲ. ಯುರೋಪಿಯನ್ ಯೂನಿಯನ್ ಔಷದ ನಿಯಂತ್ರಕರು ದೃಢೀಕರಿಸಿದ ಫೈಝರ್, ಮೊಡೆರ್ನಾ, ಜಾನ್ಸನ್ ಆ್ಯಂಡ್ ಜಾನ್ಸನ್ ಮತ್ತು ಆಸ್ಟ್ರಝೆನೆಕಾ ಲಸಿಕೆಗಳಿಗೆ ಮಾತ್ರ ಅನುಮೋದನೆ ಲಭಿಸಿದೆ. ಈ ಮಧ್ಯೆ, ಫ್ರಾನ್ಸ್ನಲ್ಲಿ 2 ಲಸಿಕೆಗಳ ನಡುವಿನ ಅಂತರವನ್ನು 2 ವಾರದಿಂದ 1 ವಾರಕ್ಕೆ ಇಳಿಸಿದ್ದು, ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಸೆಪ್ಟಂಬರ್ 15ರೊಳಗೆ ಲಸಿಕೆ ನೀಡುವಂತೆ ಅಧ್ಯಕ್ಷ ಇಮ್ಯಾನುವೆಲ್ ಮಾಕ್ರನ್ ಆದೇಶಿಸಿದ್ದಾರೆ.

 ಆರೋಗ್ಯ ಕಾರ್ಯಕರ್ತರಿಗೆ ಮೊದಲು ಲಸಿಕೆ ನೀಡಬೇಕು ಮತ್ತು ಸಾರ್ವಜನಿಕ ಪ್ರದೇಶಗಳಿಗೆ ತೆರಳಲು ಲಸಿಕೆ ಆರೋಗ್ಯ ಕಾರ್ಡ್ ಹೊಂದಿರಬೇಕು ಎಂಬ ಕಾನೂನನ್ನು ಜನತೆ ವಿರೋಧಿಸಿದ್ದಾರೆ. ಒಂದು ವೇಳೆ ಲಸಿಕೆ ಪಡೆಯದಿದ್ದರೆ, ನೆಗೆಟಿವ್ ವರದಿಯ ಪ್ರಮಾಣಪತ್ರ ಹೊಂದಿರಬೇಕು ಎಂದು ಸೂಚಿಸಲಾಗಿದೆ. ಈ ಸೂಚನೆ ಹೊರಬೀಳುತ್ತಿದ್ದಂತೆಯೇ ದಾಖಲೆ ಸಂಖ್ಯೆಯಲ್ಲಿ ಜನತೆ ಲಸಿಕೆ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X