Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾಮಳೆಗೆ ಮುಂಬೈ ತತ್ತರ: ಕಟ್ಟಡ, ಜೋಪಡಿ...

ಮಹಾಮಳೆಗೆ ಮುಂಬೈ ತತ್ತರ: ಕಟ್ಟಡ, ಜೋಪಡಿ ಕುಸಿದು ಕನಿಷ್ಠ 20 ಮಂದಿ ಸಾವು

ನಗರದ ಹಲವು ಪ್ರದೇಶಗಳು ಜಲಾವೃತ, ರೈಲ್ವೆ ಸಂಚಾರ ಅಸ್ತವ್ಯಸ್ಥ: ರೆಡ್ ಅಲರ್ಟ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ18 July 2021 10:31 AM IST
share
ಮಹಾಮಳೆಗೆ ಮುಂಬೈ ತತ್ತರ: ಕಟ್ಟಡ, ಜೋಪಡಿ ಕುಸಿದು ಕನಿಷ್ಠ 20 ಮಂದಿ ಸಾವು

ಮುಂಬೈ,ಜು.18: ಶನಿವಾರ ತಡರಾತ್ರಿಯಿಂದ ಸುರಿದ ಭಾರೀ ಮಳೆಗೆ ದೇಶದ ವಾಣಿಜ್ಯರಾಜಧಾನಿ ಮುಂಬೈ ಮಹಾನಗರ ಅಕ್ಷರಶಃ ತತ್ತರಿಸಿ ಹೋಗಿದೆ. ಚೆಂಬೂರು ಹಾಗೂ ವಿಕ್ರೋಲಿ ಪ್ರದೇಶಗಳಲ್ಲಿ ಮಹಾಮಳೆಯಿಂದಾಗಿ ಮನೆಗಳು ಕುಸಿದುಬಿದ್ದು ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ. ರವಿವಾರವೂ ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಆಲರ್ಟ್ ಘೋಷಿಸಲಾಗಿದೆ ಹಾಗೂ ನಾಗರಿಕರು ಮನೆಯಿಂದ ಹೊರಬಾರದಂತೆ ಎಚ್ಚರಿಕೆ ನೀಡಲಾಗಿದೆ.

ವಿಕ್ರೋಲಿ ಪ್ರದೇಶದಲ್ಲಿ ರವಿವಾರ ನಸುಕಿನಲ್ಲಿ ತಳಅಂತಸ್ತಿನ ವಸತಿಕಟ್ಟಡವೊಂದು ಕುಸಿದು, ಮೂವರು ಸಾವನ್ನಪ್ಪಿದ್ದಾರೆ ಹಾಗೂ 15 ಮಂದಿಯನ್ನು ರಕ್ಷಿಸಲಾಗಿದೆ. ಚೆಂಬೂರಿನ ಭರತ್ನಗರದಲ್ಲಿ ಜೋಪಡಿ ಮನೆಗಳ ಮೇಲೆ ಗೋಡೆಯೊಂದು ಕುಸಿದುಬಿದ್ದುದರಿಂದ ಆರು ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಅವಶೇಷಗಳಡಿಯಲ್ಲಿ ಸಿಲುಕಿದ್ದ 9 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದುರಂತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅರು ಹೇಳಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ ಹಲವಾರು ಮಂದಿ ಸಿಲುಕಿರುವ ಸಾಧ್ಯತೆಯಿರುವುದರಿಂದ ಎರಡೂ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.

ಮುಂಬೈಯಲ್ಲಿ ಮಳೆಯಿಂದಾಗಿ ಸಂಭವಿಸಿದ ದುರಂತಗಳಲ್ಲಿ ಸಂಭವಿಸಿರುವ ಪ್ರಾಣ ಹಾನಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಕೂಡಾ ಪ್ರಧಾನಿ ಪ್ರಕಟಿಸಿದ್ದಾರೆ.

ಮಹಾನಗರದ ತಗ್ಗುಪ್ರದೇಶಗಳಾದ ಚುನ್ನಾಭಟ್ಟಿ, ಸಿಯಾನ್, ದಾದರ್, ಗಾಂಧಿ ಮಾರ್ಕೆಟ್, ಚೆಂಬೂರು ಹಾಗೂ ಕುರ್ಲಾ ಎಲ್ಬಿಎಸ್ ರೋಡ್ ಸಂಪೂರ್ಣವಾಗಿ ಜಲಾವೃತಗೊಂಡಿವೆ. ಬೊರಿವಿಲಿಯಲ್ಲಿ ಹಲವಾರು ಕರೆಗಳು ನೆರೆನೀರಿನ ಪ್ರವಾಹಕ್ಕೆ ಕೊಚ್ಚಿಹೋಗಿವೆ. ರೈಲ್ವೆ ಹಳಿಗಳು ಸಂಪೂರ್ಣವಾಗಿ ನೆರೆ ನೀರಿನಲ್ಲಿ ಮುಳುಗಿದ್ದರಿಂದ ಉಪನಗರ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ದಾದರ್,ಪರೇಲ್, ಮಾತುಂಗ,ಕುರ್ಲಾ,ಸಯಾನ್,ಭಾಂಡುಪ್ ಮತ್ತಿತರೆಡೆಗಲ್ಲೂ ರೈಲು ಹಳಿಗಳು ಜಲಾವೃತಗೊಂಡಿದ್ದರಿಂದ ಸಿಎಸ್ಎಂಟಿ ಹಾಗೂ ಥಾಣೆ ನಡುವಿನ ರೈಲು ಸಂಚಾರವನ್ನು ಕೂಡಾ ಸ್ಥಗಿತಗೊಳಿಸಲಾಗಿದೆ. ಕೇಂದ್ರ ರೈಲ್ವೆ ವಲಯ ಹಾಗೂ ಪಶ್ಚಿಮ ರೈಲ್ವೆ ವಲಯದ ಹಲವಾರು ದೂರಸಂಚಾರದ ರೈಲುಗಳ ಸೇವೆಗಳೂ ಕೂಡಾ ಬಾಧಿತವಾಗಿವೆಯೆಂದು ವರದಿಗಳು ತಿಳಿಸಿವೆ.

ಶನಿವಾರ ಸಂಜೆ 8:00 ಗಂಟೆಯಿಂದ ರವಿವಾರ ಬೆಳಗ್ಗೆ 8:00 ಗಂಟೆಯ ನಡುವೆ ಮುಂಬೈಯಲ್ಲಿ 176.96 ಮಿ.ಮೀ. ಮಳೆಯಾಗಿದೆ. ನಗರದ ಪೂರ್ವಭಾಗದ ಉಪನಗರಗಳಲ್ಲಿ 204.07 ಹಾಗೂ ಪಶ್ಚಿಮದ ಉಪನಗರಗಳಲ್ಲಿ 195.48 ಮಿ.ಮೀ. ಮಳೆಯಾಗಿದೆಯೆಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಐದು ದಿನಗಳ ವರೆಗೆ ಮುಂಬೈನಲ್ಲಿ ಭಾರೀ ಮಳೆ ಮುಂದುವರಿಯಲಿದೆೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ. 2019ರಲ್ಲಿ ನಗರದಲ್ಲಿ 375.2 ಮಿ.ಮೀ. ಮಳೆಯಾಗಿದ್ದು 2010ರಿಂದೀಚೆಗೆ 24 ತಾಸುಗಳ ಅವಧಿಯಲ್ಲಿ ದಾಖಲಾಗಿರುವ ಗರಿಷ್ಠ ಪ್ರಮಾಣದ ಮಳೆಯಾಗಿದೆ.

#WATCH | Maharashtra: Rainwater entered Mumbai's Borivali east area following a heavy downpour this morning pic.twitter.com/7295IL0K5K

— ANI (@ANI) July 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X