Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರೀ ಮಳೆಗೆ ಕಾಪು, ಬೈಂದೂರಿನಲ್ಲಿ ಕೃತಕ...

ಭಾರೀ ಮಳೆಗೆ ಕಾಪು, ಬೈಂದೂರಿನಲ್ಲಿ ಕೃತಕ ನೆರೆ: ಮನೆಗಳಿಗೆ ಹಾನಿ, ಹಲವು ಮಂದಿಯ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ18 July 2021 8:34 PM IST
share
ಭಾರೀ ಮಳೆಗೆ ಕಾಪು, ಬೈಂದೂರಿನಲ್ಲಿ ಕೃತಕ ನೆರೆ: ಮನೆಗಳಿಗೆ ಹಾನಿ, ಹಲವು ಮಂದಿಯ ಸ್ಥಳಾಂತರ

ಉಡುಪಿ, ಜು.17: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರವಿವಾರ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ನೆರೆಯ ಭೀತಿ ಆವರಿಸಿದೆ. ಈ ಹಿನ್ನೆಲೆ ಯಲ್ಲಿ ತಗ್ಗು ಪ್ರದೇಶದ ಕೆಲವು ಮನೆಗಳ ಹಲವು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಾಪು ಮತ್ತು ಬೈಂದೂರು ತಾಲೂಕಿನ ಕೆಲವೆಡೆ ನೆರೆಯ ಸೃಷ್ಠಿಯಾಗಿದೆ. ಕೆಲವು ಕಡೆಗಳಲ್ಲಿ ನೀರಿನಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜಲಾವೃತಗೊಂಡ ಮನೆಗಳಿಂದ ಹಲವು ಮಂದಿಯನ್ನು ಸಂಬಂಧಕರ ಮನೆಗೆ ಸ್ಥಳಾಂತರಿಸಲಾಗಿದೆ. ಈಗಾಗಲೇ ಸ್ಥಳೀಯ ಶಾಲೆಗಳಲ್ಲಿ ಪುನರ್ ವಸತಿ ಕೇಂದ್ರಗಳನ್ನು ತೆರೆಯಲಾಗಿದೆ. ಅದೇ ರೀತಿ ಕಡಲು ಕೂಡ ಪ್ರಕ್ಷುಬ್ಧಗೊಂಡಿದ್ದು, ಹಲವು ಕಡೆ ಬೃಹತ್ ಗ್ರಾತ್ರದ ಅಲೆಗಳು ತೀರಕ್ಕೆ ಬಡಿಯುತ್ತಿವೆ.

ಉಡುಪಿ ನಗರದ ಮಠದಬೆಟ್ಟು ಎಂಬಲ್ಲಿ ನೀರು ತುಂಬಿದ ಪರಿಣಾಮ ಹಲವು ಮನೆಗಳು ಜಲಾವೃತಗೊಂಡಿವೆ. ಸುತ್ತಲಿನ ಗದ್ದೆಗಳಲ್ಲಿ ನೀರು ಆವರಿಸಿ ರುವುದರಿಂದ ಕೆಲವು ಮನೆಗಳು ಸಂಪರ್ಕ ಕಡಿದುಕೊಂಡಿದೆ. ಇಲ್ಲಿನ ಇಂದ್ರಾಣಿ ನದಿ ತುಂಬಿ ಹರಿಯುತ್ತಿದ್ದು, ಇತ್ತೀಚೆಗೆ ಮುರಿದ ಕಿರು ಸೇತುವೆ ಅಪಾಯಕಾರಿಯಾಗಿದೆ.

ಮೂಡನಿಡಂಬೂರು ಬ್ರಹ್ಮಬೈದರ್ಕಳ ಗರಡಿಗೂ ನೀರು ನುಗ್ಗಿದೆ. ಒಟ್ಟಾರೆ ಈ ಪ್ರದೇಶದಲ್ಲಿ ನೆರೆಯ ಭೀತಿಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಅದೇ ರೀತಿ ಕಡೆಕಾರು ಹಾಗೂ ಕಿದಿಯೂರು ಪ್ರದೇಶಗಳು ಕೂಡ ಜಲಾವೃತ ಗೊಂಡಿರುವ ಬಗ್ಗೆ ವರದಿಯಾಗಿದೆ.

ಕಳೆದ 24ಗಂಟೆಗಳ ಅವಧಿಯಲ್ಲಿ ಗಾಳಿಮಳೆಗೆ ಉಡುಪಿ ಜಿಲ್ಲೆಯಲ್ಲಿ 13 ವಿದ್ಯುತ್ ಕಂಬಗಳು, ಒಂದು ಟ್ರಾನ್ಸ್‌ಫಾರ್ಮರ್ ಹಾಗೂ 19ಮೀಟರ್ ಉದ್ದದ ವಿದ್ಯುತ್ ತಂತಿಗೆ ಹಾನಿಯಾಗಿದ್ದು, ಒಟ್ಟು 2.39ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಬೈಂದೂರಿನ ಹಲವೆಡೆ ನೆರೆ

ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಹಲವೆಡೆಗಳಲ್ಲಿ ಕೃತಕ ನೆರೆ ಉಂಟಾಗಿದ್ದು, ಗದ್ದೆಗಳು ಜಲಾವೃತಗೊಂಡಿವೆ. ಕೆಲವು ಮನೆಗಳ ಒಳಗೆ ಮತ್ತು ಅಂಗಳಕ್ಕೆ ನೀರು ನುಗ್ಗಿ ಹಾನಿಯುಂಟಾಗಿದೆ.

ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸೌಪರ್ಣಿಕ ನದಿ ತೀರದ ಸಾಲ್ಬುಡಾ, ಕಂಡಿಕೇರಿ ಸಹಿತ ಸುತ್ತಮುತ್ತಲಿನ ಪರಿಸರ ಜಲಾ ವೃತಗೊಂಡಿದೆ. ಗದ್ದೆ, ಕೃಷಿ ಪ್ರದೇಶ ಸಂಪೂರ್ಣ ನೀರಿನಿಂದ ತುಂಬಿರುವುದು ಕಂಡುಬಂದಿದೆ. ಶಿರೂರು ಗ್ರಾಪಂ ವ್ಯಾಪ್ತಿಯ ನಡುಕೋಟೆ ಹಾಗೂ ಕರಾವಳಿ ಎಂಬಲ್ಲಿ ಎರಡು ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಕೆಲವು ಕಡೆ ತೆಂಗಿನ ಮರ ಉರುಳಿ ಬಿದ್ದಿದೆ. ಕಳುಹಿತ್ಲು ಸೇರಿದಂತೆ ಅನೇಕ ಕಡೆ ರಸ್ತೆಗಳಲ್ಲಿ ನೀರು ತುಂಬಿದ ಪರಿಣಾಮ ಸಂಚಾರಕ್ಕೆ ತೊಂದರೆಯಾಗಿದೆ.

ಕುಂದಾಪುರ ತಾಲೂಕಿನ ಗುಜ್ಜಾಡಿ, ಗುಲ್ವಾಡಿ, ಹೊಸಾಡು, ಗೋಪಾಡಿ, ಕಾಳಾವರ, ಸೇರಿದಂತೆ ವಿವಿಧೆಡೆಗಳಲ್ಲಿ ನೆರೆ ಉಂಟಾಗಿ, ಕೃಷಿ ಬೆಳೆಗಳಿಗೆ ಹಾನಿ ಯಾಗಿರುವ ಬಗ್ಗೆ ವರದಿಯಾಗಿದೆ. ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ ತಾಲೂಕಿನ ನೆರೆ ಪೀಡಿತ ಪ್ರದೇಶ ಗಳಾದ ಬಿಜೂರು, ತಗ್ಗರ್ಸೆ, ನಾವುಂದ, ಕಿರಿಮಂಜೇಶ್ವರ, ಪಡುವರಿ, ಯಡ್ತರೆ, ಶಿರೂರು ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕುಂದಾಪುರ ತಾಲೂಕಿನಲ್ಲಿ ನೆರೆಗೆ ತುತ್ತಾಗುವ ಪ್ರದೇಶಗಳಾದ ಹೊಸಾಡು, ಗುಜ್ಜಾಡಿ, ಗುಲ್ವಾಡಿಯಲ್ಲಿ ಈಗಾಗಲೇ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಬೊಟ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ. ಶಾಲೆಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕುಂದಾಪುರ ತಹಶೀಲ್ದಾರ್ ಆನಂದಪ್ಪ ನಾಯಕ್ ತಿಳಿಸಿದ್ದಾರೆ.

‘ಬೈಂದೂರು ತಾಲೂಕಿನ ಹಲವಡೆಗಳಲ್ಲಿ ನೆರೆ ನೀರು ಮನೆಗಳಿಗೆ ನುಗ್ಗಿ ಹಾನಿಯಾಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ತಗ್ಗರ್ಸೆಯಲ್ಲಿ ಒಂದು ಮನೆಗೆ ಸಾಕಷ್ಟು ಹಾನಿಯಾಗಿದ್ದು, ಈ ಮೊದಲೇ ಅವರು ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದರು. ಶಾಲೆಗಳಲ್ಲಿ ಪುನರ್ವಸತಿ ಕೇಂದ್ರ ತೆರೆಯಲಾಗಿದ್ದು, ಈವರೆಗೆ ಯಾವುದೇ ಪ್ರಾಣಹಾನಿ, ಜಾನುವಾರು ಹಾನಿ ಸಂಭವಿಸಿಲ್ಲ’
-ಶೋಭಾಲಕ್ಷ್ಮಿ, ತಹಶೀಲ್ದಾರ್, ಬೈಂದೂರು

8 ಮನೆಗಳಿಗೆ ಹಾನಿ: 3.55ಲಕ್ಷ ರೂ. ನಷ್ಟ

ಕಳೆದ 24ಗಂಟೆಗಳ ಅವಧಿಯಲ್ಲಿ ಉಡುಪಿ ತಾಲೂಕಿನಲ್ಲಿ ಮೂರು ಮನೆ ಗಳಿಗೆ ಹಾನಿಯಾಗಿ ಒಟ್ಟು 1.50ಲಕ್ಷ ರೂ., ಕಾಪು ತಾಲೂಕಿನಲ್ಲಿ ಮೂರು ಮನೆಗಳಿಗೆ ಹಾನಿಯಾಗಿ ಒಟ್ಟು 1.05ಲಕ್ಷ ರೂ., ಬೈಂದೂರು ತಾಲೂಕಿನಲ್ಲಿ ಎರಡು ಮನೆಗಳಿಗೆ ಗಾಳಿಯಿಂದ ಮಳೆಯಿಂದ ಹಾನಿ ಯಾಗಿ ಒಟ್ಟು ಒಂದು ಲಕ್ಷ ರೂ. ನಷ್ಟ ಉಂಟಾಗಿದೆ ಜಿಲ್ಲಾಡಳಿತ ಕಚೇರಿ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X