Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ರಾಷ್ಟ್ರೀಯ ತೋಟಗಾರಿಕೆ ಮಿಷನ್...

ಉಡುಪಿ: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನ ಲಭ್ಯ

ವಾರ್ತಾಭಾರತಿವಾರ್ತಾಭಾರತಿ19 July 2021 5:48 PM IST
share

ಉಡುಪಿ, ಜು.19: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಗೆ ಜಿಲ್ಲೆಯಲ್ಲಿ ಲಭ್ಯವಿರುವ ಸಹಾಯಧನದ ವಿವರ ಈ ಕೆಳಗಿನಂತಿದೆ.

ತೋಟಗಾರಿಕಾ ಬೆಳೆಗಳ ಪ್ರದೇಶ ವಿಸ್ತರಣೆಗೆ ಸಹಾಯಧನ: ಯೋಜನೆಯ ಮಾರ್ಗಸೂಚಿಯಂತೆ ನಿಗದಿತ ಬೆಳೆಗಳನ್ನು ನೂತನ ತಾಂತ್ರಿಕತೆಯೊಂದಿಗೆ ಹೊಸದಾಗಿ ಬೆಳೆಯುವ ರೈತರಿಗೆ ಸಹಾಯಧನವನ್ನು ವಿತರಿಸಲಾಗುವುದು. ಪ್ರತಿ ಫಲಾನುಭವಿ ಕನಿಷ್ಟ 0.20 ಹೆಕ್ಟೇರ್ ಹಾಗೂ ಗರಿಷ್ಟ 4.00 ಹೆಕ್ಟೇರ್‌ವರೆಗೆ ಸಹಾಯಧನ ಪಡೆಯಲು ಅವಕಾಶವಿರುತ್ತದೆ. ಸಹಾಯಧನವು ಒಟ್ಟು ವೆಚ್ಚದ ಶೇ.40/50ರಂತೆ ಇದ್ದು, 2020-21ನೇ ಸಾಲಿಗೆ ಸಹಾಯಧನ ಪಡೆಯ ಬಹುದಾದ ಬೆಳೆಗಳು ಹಾಗೂ ಸಹಾಯಧನದ ವಿವರ ಹೀಗಿದೆ.

ಬಾಳೆ (ಕಂದುಗಳು) ಬೆಳೆಗೆ ಪ್ರತಿ ಹೆ.ನ 65,000 ರೂ. ವೆಚ್ಚಕ್ಕೆ ಪ್ರತಿ ಹೆ.ಗೆ 26,000 ರೂ. ಸಹಾಯಧನ, ಬಾಳೆ (ಅಂಗಾಂಶ ಕೃಷಿ) ಬೆಳೆಗೆ ಪ್ರತಿ ಹೆ.ನ1,02,000 ರೂ. ವೆಚ್ಚಕ್ಕೆ ಪ್ರತಿ ಹೆ.ಗೆ 40,800 ರೂ. ಸಹಾಯಧನ.ಅನಾನಸ್ಸು (ಕಂದುಗಳು) ಬೆಳೆಗೆ ಪ್ರತಿ ಹೆ.ನ87,500 ರೂ. ವೆಚ್ಚಕ್ಕೆ ಪ್ರತಿ ಹೆ.ಗೆ 35,000 ರೂ. ಸಹಾಯಧನ, ಹೈಬ್ರಿಡ್ ತರಕಾರಿಗಳ ಬೆಳೆಗೆ ಪ್ರತಿ ಹೆ.ನ 50,000 ರೂ. ವೆಚ್ಚಕ್ಕೆ ಪ್ರತಿ ಹೆ.ಗೆ 20,000 ರೂ. ಸಹಾಯಧನ.

ಬಿಡಿ ಹೂಗಳ ಬೆಳೆಗೆ ಪ್ರತಿ ಹೆ.ನ 40,000 ರೂ. ವೆಚ್ಚಕ್ಕೆ ಪ್ರತಿ ಹೆ.ಗೆ 16,000 ರೂ. ಸಹಾಯಧನ, ಕಾಳುಮೆಣಸು ಬೆಳೆಗೆ ಪ್ರತಿ ಹೆ.ನ 50,000 ರೂ. ವೆಚ್ಚಕ್ಕೆ ಪ್ರತಿ ಹೆ.ಗೆ 20,000 ರೂ. ಸಹಾಯಧನ, ಗೇರು/ಕೊಕ್ಕೊ ಬೆಳೆಗೆ ಪ್ರತಿ ಹೆ.ನ 50,000 ರೂ ವೆಚ್ಚಕ್ಕೆ ಪ್ರತಿ ಹೆ.ಗೆ 20,000 ರೂ. ಸಹಾಯ ಧನ, ಡ್ರ್ಯಾಗನ್ ಪ್ರೂಟ್ ಬೆಳೆಗೆ ಪ್ರತಿ ಹೆ.ನ 1,25,000 ರೂ. ವೆಚ್ಚಕ್ಕೆ ಪ್ರತಿಹೆ.ಗೆ 50,000 ರೂ. ಸಹಾಯಧನ ಹಾಗೂ ಮ್ಯಾಂಗೋಸ್ಟೀನ್/ರಾಮ್ ಬೂತಾನ್/ ಕೋಕಮ್ ಬೆಳೆಗೆ ಪ್ರತಿ ಹೆ.ನ 60,000 ರೂ. ವೆಚ್ಚಕ್ಕೆ ಪ್ರತಿ ಹೆ.ಗೆ 30,000 ರೂ. ಸಹಾಯಧನ ನೀಡಲಾಗುವುದು.

ಅಣಬೆ ಉತ್ಪಾದನಾ ಘಟಕಕ್ಕೆ ಸಹಾಯಧನ: ಬ್ಯಾಂಕ್‌ನಿಂದ ಅವಧಿ ಸಾಲ ಪಡೆದು ಹೊಸದಾಗಿ ನಿರ್ಮಾಣ ಮಾಡುವ ಅಣಬೆ ಉತ್ಪಾದನಾ ಘಟಕಕ್ಕೆ ಒಟ್ಟು ವೆಚ್ಚದ ಶೇ.40ರಂತೆ ಗರಿಷ್ಟ 8ಲಕ್ಷ ರೂ. ಸಹಾಯಧನವನ್ನು ವಿತರಿಸಲಾಗುವುದು.

ಕಾಳು ಮೆಣಸು ಪುನಶ್ಚೇತನಕ್ಕೆ ಸಹಾಯಧನ: ಹಳೆಯ ಅನುತ್ಪಾದಕ ಕಾಳುಮೆಣಸು ತೋಟಗಳನ್ನು ಪುನಃಶ್ಚೇತನ ಕೈಗೊಳ್ಳುವ ರೈತರಿಗೆ ಒಟ್ಟು ವೆಚ್ಚದ ಶೇ.50ರಂತೆ ಪ್ರತಿ ಹೆಕ್ಟೇರ್‌ಗೆ ಗರಿಷ್ಟ 10,000 ರೂ. ಸಹಾಯಧನ ವಿತರಿಸಲಾ ಗುವುದು. ಪ್ರತಿ ಫಲಾನುಭವಿಗೆ ಗರಿಷ್ಟ 2.00 ಹೆ.ವರೆಗೆ ಸಹಾಯಧನ ನೀಡಲು ಅವಕಾಶವಿರುತ್ತದೆ.

ಕೃಷಿ ಹೊಂಡಕ್ಕೆ ಸಹಾಯಧನ: 20ಮೀ.ಉದ್ದ, 20ಮೀ. ಅಗಲ ಹಾಗೂ 3ಮೀ. ಆಳದ ಕೃಷಿ ಹೊಂಡವನ್ನು ನಿರ್ಮಾಣ ಮಾಡುವ ರೈತರಿಗೆ ಒಟ್ಟು ವೆಚ್ಚದ ಶೇ.50ರಂತೆ ಗರಿಷ್ಟ 75,000 ರೂ. ಸಹಾಯಧನ ವಿತರಿಸಲಾಗುವುದು. ಕಾರ್ಯಕ್ರಮಕ್ಕೆ ಸಹಾಯಧನ ಪಡೆಯಲು ರೈತರು 1.00 ಹೆ.ನಷ್ಟು ಜಮೀನು ಹೊಂದಿರಬೇಕು.

ಟ್ರ್ಯಾಕ್ಟರ್ ಖರೀದಿಗೆ ಸಹಾಯಧನ: ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ಖರೀದಿಸುವ 20 ಅಶ್ವಶಕ್ತಿಗಿಂತ ಕಡಿಮೆ ಸಾಮರ್ಥ್ಯದ ಟ್ರ್ಯಾಕ್ಟರ್‌ಗೆ ಸಹಾಯಧನ ನೀಡಲು ಅವಕಾಶವಿದ್ದು, ಸಣ್ಣ, ಅತಿ ಸಣ್ಣ, ಮಹಿಳಾ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರು ಒಟ್ಟು ವೆಚ್ಚದ ಶೇ. 35ರಂತೆ ಗರಿಷ್ಟ 1 ಲಕ್ಷ ರೂ. ಹಾಗೂ ಇತರೆ ರೈತರು ಒಟ್ಟು ವೆಚ್ಚದ ಶೇ. 25ರಂತೆ ಗರಿಷ್ಟ 0.75 ಲಕ್ಷ ರೂ. ಸಹಾಯಧನವನ್ನು ಪ್ರಸಕ್ತ ಸಾಲಿನಲ್ಲಿ ಖರೀದಿಸಿ ನೊಂದಣಿ ಮಾುವ ರೈತರಿಗೆ ವಿತರಿಸಲಾಗುತ್ತದೆ.

ಪ್ಯಾಕ್ ಹೌಸ್‌ಗೆ ಸಹಾಯಧನ: 9ಮೀ. ಉದ್ದ ಹಾಗೂ 6 ಮೀ.ಅಗಲದ ಪ್ಯಾಕ್ ಹೌಸ್ ಅನ್ನು ಇಲಾಖಾ ಮಾರ್ಗಸೂಚಿಯಂತೆ ನಿರ್ಮಾಣ ಮಾಡುವ ರೈತರಿಗೆ ಒಟ್ಟು ವೆಚ್ಚದ ಶೇ.50ರಂತೆ ಗರಿಷ್ಠ 2 ಲಕ್ಷ ರೂ. ಸಹಾಯಧನ ನೀಡಲಾ ಗುತ್ತದೆ. ಯೋಜನೆಯಡಿ ಸಹಾಯಧನ ಪಡೆಯಲು ರೈತರು ಕನಿಷ್ಟ 1.00 ಹೆಕ್ಟೇರ್ ಪ್ರದೇಶದಲ್ಲಿ ವಾರ್ಷಿಕ ಅಥವಾ 2.00 ಹೆಕ್ಟೇರ್‌ನಲ್ಲಿ ಬಹುವಾರ್ಷಿಕ ಬೆಳೆಗಳನ್ನು ಬೆಳೆಸುತ್ತಿರಬೇಕು.
ಸಹಾಯಧನ ಪಡೆಯುವ ವಿಧಾನ: ನಿಗದಿತ ಚಟುವಟಿಕೆಗಳನ್ನು ಕೈಗೊಳ್ಳುವ ರೈತರು ಅರ್ಜಿಗಳನ್ನು ತಾಲೂಕು ತೋಟಗಾರಿಕೆ ಇಲಾಖಾ ಕಛೇರಿಗೆ ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಚಟುವಟಿಕೆ ಕೈಗೊಳ್ಳುವ ರೈತರ ವಿವರದೊಂದಿಗೆ ಹಾಗೂ ಪ್ರಸ್ತಾವನೆ ಆಧಾರಿತ ಕಾರ್ಯಕ್ರಮಗಳಲ್ಲಿ ಪ್ರಸ್ತಾವನೆ ಗಳನ್ನು ಸಲ್ಲಿಸಬೇಕು.

ತಾಲೂಕು ಹಾಗೂ ಜಿಲ್ಲೆಗೆ ನಿಗದಿಪಡಿಸಿದ ಗುರಿಗನುಗುಣವಾಗಿ ಜೇಷ್ಠತೆಯ ಆಧಾರದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿ, ನಿಗದಿತ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ಕಾರ್ಯಾದೇಶ ನೀಡಲಾಗುತ್ತದೆ. ಕಾರ್ಯಾದೇಶ ಪಡೆದ ರೈತರು ನಿಗದಿತ ಚಟುವಟಿಕೆಗಳನ್ನು ಕೈಗೊಂಡು, ಕಾರ್ಯಾದೇಶದಲ್ಲಿ ನಮೂದಿ ಸಿರುವ ದಾಖಲಾತಿಗಳನ್ನು ಸಲ್ಲಿಸಿ, ಮಾರ್ಗಸೂಚಿ ಅನುಸಾರ ಸಹಾಯಧನ ಪಡೆಯಬಹುದುದು.

ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು ಉಡುಪಿ ದೂ.ಸಂ.: 0820-2531950, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಉಡುಪಿ ದೂ.ಸಂ: 0820-2522837, ಕುಂದಾಪುರ:ದೂ.ಸಂ. 08254-230813, ಕಾರ್ಕಳ ದೂ.ಸಂ.:08258-230288ನ್ನು ಸಂಪರ್ಕಿ ಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X