Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರಂಗದಲ್ಲಿ ರೈಲ್ವೆ ಹಳಿ ಮೇಲೆ ಬಿದ್ದ...

ಸುರಂಗದಲ್ಲಿ ರೈಲ್ವೆ ಹಳಿ ಮೇಲೆ ಬಿದ್ದ ಮಣ್ಣು: ಕೊಂಕಣ ರೈಲ್ವೆ ಮಾರ್ಗದ ಸಂಚಾರ ಮತ್ತೆ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ19 July 2021 6:56 PM IST
share
ಸುರಂಗದಲ್ಲಿ ರೈಲ್ವೆ ಹಳಿ ಮೇಲೆ ಬಿದ್ದ ಮಣ್ಣು: ಕೊಂಕಣ ರೈಲ್ವೆ ಮಾರ್ಗದ ಸಂಚಾರ ಮತ್ತೆ ವ್ಯತ್ಯಯ

ಉಡುಪಿ, ಜು.19: ಕೊಂಕಣ ರೈಲು ಮಾರ್ಗದ ಹಳೆ ಗೋವಾ ಸುರಂಗದ ಕರ್ಮಾಲಿ ಹಾಗೂ ಥೀವಿಂ ನಿಲ್ದಾಣಗಳ ನಡುವೆ ಇಂದು ಮುಂಜಾನೆ 5:30ರ ಸುಮಾರಿಗೆ ನಿರಂತರ ಮಳೆಯಿಂದ ಕೆಸರು ಮಣ್ಣು ಹಾಗೂ ನೀರು ರೈಲು ಹಳಿಗಳ ಮೇಲೆ ಬಿದ್ದ ಕಾರಣ, ಹಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿದ್ದು, ಕೆಲವನ್ನು ಭಾಗಶ: ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ರೈಲು ನಂ. 01134 ಮಂಗಳೂರು ಜಂಕ್ಷನ್- ಮುಂಬಯಿ ಸಿಎಸ್‌ಎಂಟಿ ದೈನಂದಿನ ವಿಶೇಷ ರೈಲಿನ ಜು.19ರ ಸಂಚಾರವನ್ನು ಮಡಗಾಂವ್ ಬಳಿಕ ಭಾಗಶ: ರದ್ದುಪಡಿಸಲಾಗಿದೆ. ಮಡಗಾಂವ್ ಜಂಕ್ಷನ್ ಹಾಗೂ ಕರ್ಮಾಲಿ ಯಿಂದ ಪ್ರಯಾಣಿಕರನ್ನು ರಸ್ತೆ ಮೂಲಕ ಥೀವಿಂ ನಿಲ್ದಾಣಕ್ಕೆ ಕರೆದೊಯ್ದು ಅಲ್ಲಿಂದ ರಾತ್ರಿ 11:00ಕ್ಕೆ ರೈಲಿನ ಮೂಲಕ ಮುಂಬಯಿ ಸಿಎಸ್‌ಎಂಟಿಗೆ ಕಳುಹಿಸಿಕೊಡಲಾಗುತ್ತಿದೆ.

ರೈಲು ನಂ.01133 ಮುಂಬಯಿ ಸಿಎಸ್‌ಎಂಟಿ-ಮಂಗಳೂರು ಜಂಕ್ಷನ್ ದೈನಂದಿನ ವಿಶೇಷ ರೈಲು ಹಾಗೂ ನಂ.02619 ಲೋಕಮಾನ್ಯ ಟಿಲಕ್-ತಿಲಕ್ -ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲಿನ ಪ್ರಯಾಣಿಕರನ್ನು ಥೀವಿಂನಿಂದ ರಸ್ತೆ ಮೂಲಕ ಮಡಗಾಂವ್‌ಗೆ ಕರೆದೊಯ್ದು ಅಲ್ಲಿಂದ ಮಡಗಾಂವ್- ಮಂಗಳೂರು ಜಂಕ್ಷನ್/ಮಂಗಳೂರು ಸೆಂಟ್ರಲ್ ರೈಲಿನಲ್ಲಿ ಕಳುಹಿಸಿಕೊಡಲಾಗುತ್ತಿದೆ.

ರೈಲು ನಂ.02620 ಮಂಗಳೂರು ಸೆಂಟ್ರಲ್- ಲೋಕಮಾನ್ಯ ತಿಲಕ್ ದೈನಂದಿನ ವಿಶೇಷ ರೈಲು ಇಂದು ಕರ್ಮಾಲಿವರೆಗೆ ಸಂಚರಿಸಲಿದ್ದು, ಅಲ್ಲಿಂದ ಪ್ರಯಾಣಿಕರನ್ನು ರಸ್ತೆ ಮೂಲಕ ಥೀವಿಂಗೆ ಕರೆದೊಯ್ದು, ಅಲ್ಲಿಂದ ರಾತ್ರಿ 9:00 ಗಂಟೆಗೆ ಲೋಕಮಾನ್ಯ ತಿಲಕ್ ನಿಲ್ದಾಣಕ್ಕೆ ತೆರಳಲಿದೆ.

ರೈಲು ನಂ.06345 ಲೋಕಮಾನ್ಯ ತಿಲಕ್- ತಿರುವನಂತಪುರ ಸೆಂಟ್ರಲ್ ‘ನೇತ್ರಾವತಿ’ ದೈನಂದಿನ ವಿಶೇಷ ರೈಲು ಹಾಗೂ ರೈಲು ನಂ.01150 ಪುಣೆ- ಎರ್ನಾಕುಲಂ ಜಂಕ್ಷನ್ ಸಾಪ್ತಾಹಿಕ ರೈಲುಗಳ ಪ್ರಯಾಣಿಕರನ್ನು ಥೀವಿಂನಿಂದ ಮಡಗಾಂವ್‌ಗೆ ರಸ್ತೆ ಮೂಲಕ ಕರೆದೊಯ್ದು, ಅಲ್ಲಿಂದ ಮಡಗಾಂವ್ ಜಂಕ್ಷನ್- ಎರ್ನಾಕುಲಂ ಜಂಕ್ಷನ್/ ತಿರುವನಂತಪುರಂ ಸೆಂಟ್ರಲ್ ರೈಲಿನಲ್ಲಿ ಕಳುಹಿಸಿ ಕೊಡಲಾಗುವುದು.

ರೈಲು ನಂ.06346 ತಿರುವನಂತಪುರಂ-ಲೋಕಮಾನ್ಯ ತಿಲಕ್ ‘ನೇತ್ರಾವತಿ’ ವಿಶೇಷ ರೈಲು ಜು.19ರ ಸಂಚಾರವನ್ನು ಶೋರನೂರು ಜಂಕ್ಷನ್, ಪಾಲ್ಘಾಟ್ ಜಂಕ್ಷನ್, ಈರೋಡ್ ಜಂಕ್ಷನ್, ಕೃಷ್ಣರಾಜಪುರಂ, ಹುಬ್ಬಳ್ಳಿ, ಮೀರಜ್ ಜಂಕ್ಷನ್, ಪುಣೆ ಜಂಕ್ಷನ್, ಪನ್ವೇಲ್ ಮೂಲಕ ಬದಲಿಸಲಾಗಿದೆ.

ಮುಂಬಯಿ ಸಿಎಸ್‌ಎಂಟಿ-ಮಡಗಾಂವ್ ಜಂಕ್ಷನ್ ನಡುವಿನ ‘ಕೊಂಕಣ ಕನ್ಯಾ’ ಹಾಗೂ ‘ಮಾಂಡೋವಿ’ ದೈನಂದಿನ ರೈಲುಗಳ ಸಂಚಾರವನ್ನು ಜು.19ಹಾಗೂ 20ರಂದು ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್.ಕೆ.ವರ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X