ರಾಜ್ಯದಲ್ಲಿ ಸೋಮವಾರ 1,291 ಮಂದಿಗೆ ಕೊರೋನ ದೃಢ, 40 ಮಂದಿ ಸಾವು

ಬೆಂಗಳೂರು, ಜು.19: ರಾಜ್ಯದಲ್ಲಿ ಸೋಮವಾರ 1,291 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 40 ಜನರು ಸೋಂಕಿಗೆ ಬಲಿಯಾಗಿದ್ದು, 3,015 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 28,85,238ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 36,197ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 27,527ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
40 ಸೋಂಕಿತರು ಬಲಿ: ಬಾಗಲಕೋಟೆ 1, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 6, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿತ್ರದುರ್ಗ 1, ದಕ್ಷಿಣ ಕನ್ನಡ 4, ಹಾಸನ 4, ಹಾವೇರಿ 1, ಕೊಡಗು 3, ಕೋಲಾರ 2, ಮಂಡ್ಯ 1, ಮೈಸೂರು 4, ಶಿವಮೊಗ್ಗ 2, ತುಮಕೂರು 2, ಉಡುಪಿ 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,291 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 38, ಬೆಂಗಳೂರು ಗ್ರಾಮಾಂತರ 34, ಬೆಂಗಳೂರು ನಗರ 266, ಬೀದರ್ 1, ಚಾಮರಾಜನಗರ 27, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 100, ಚಿತ್ರದುರ್ಗ 14, ದಕ್ಷಿಣ ಕನ್ನಡ 126, ದಾವಣಗೆರೆ 8, ಧಾರವಾಡ 13, ಗದಗ 1, ಹಾಸನ 125, ಹಾವೇರಿ 1, ಕಲಬುರಗಿ 8, ಕೊಡಗು 60, ಕೋಲಾರ 25, ಮಂಡ್ಯ 42, ಮೈಸೂರು 125, ರಾಯಚೂರು 6, ರಾಮನಗರ 5, ಶಿವಮೊಗ್ಗ 51, ತುಮಕೂರು 70, ಉಡುಪಿ 85, ಉತ್ತರ ಕನ್ನಡ 38, ವಿಜಯಪುರ 7, ಯಾದಗಿರಿ ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿವೆ.
ರಾಜಧಾನಿಯಲ್ಲಿ 266 ಕೊರೋನ ಪ್ರಕರಣ ದೃಢ
ರಾಜಧಾನಿಯಲ್ಲಿ ಸೋಮವಾರದಂದು 266 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 6 ಜನರು ಮೃತಪಟ್ಟಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,22,455 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 15,802 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 11,95,843 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
(ವರದಿ ಅವರಡ್ಡಿ)







