Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ಬಕ್ರೀದ್ ಗಾಗಿ ಕೋವಿಡ್ ನಿರ್ಬಂಧ...

ಕೇರಳ: ಬಕ್ರೀದ್ ಗಾಗಿ ಕೋವಿಡ್ ನಿರ್ಬಂಧ ಸಡಿಲಿಕೆ; ಅರ್ಜಿಗೆ ತಕ್ಷಣ ಉತ್ತರಿಸುವಂತೆ ಸರಕಾರಕ್ಕೆ ಸುಪ್ರೀಂ ಆದೇಶ

ವಾರ್ತಾಭಾರತಿವಾರ್ತಾಭಾರತಿ19 July 2021 10:01 PM IST
share
ಕೇರಳ: ಬಕ್ರೀದ್ ಗಾಗಿ ಕೋವಿಡ್ ನಿರ್ಬಂಧ ಸಡಿಲಿಕೆ; ಅರ್ಜಿಗೆ ತಕ್ಷಣ ಉತ್ತರಿಸುವಂತೆ ಸರಕಾರಕ್ಕೆ ಸುಪ್ರೀಂ ಆದೇಶ

ಹೊಸದಿಲ್ಲಿ,ಜು.19: ಕೇರಳದಲ್ಲಿ ಬಕ್ರೀದ್ ಹಬ್ಬಕ್ಕಾಗಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ತಕ್ಷಣ ಉತ್ತರಿಸುವಂತೆ ಸೋಮವಾರ ರಾಜ್ಯ ಸರಕಾರಕ್ಕೆ ನಿರ್ದೇಶ ನೀಡಿದ ಸರ್ವೋಚ್ಚ ನ್ಯಾಯಾಲಯವು,ಮಂಗಳವಾರ ಮೊದಲ ವಿಚಾರಣೆಯಲ್ಲಿಯೇ ಈ ವಿಷಯವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.

ಕನ್ವರ್ ಯಾತ್ರೆಗೆ ಅವಕಾಶ ನೀಡುವ ಉತ್ತರ ಪ್ರದೇಶ ಸರಕಾರದ ನಿರ್ಧಾರದ ಕುರಿತು ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದ ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್ ಮತ್ತು ಬಿ.ಆರ್.ಗವಾಯಿ ಅವರ ಪೀಠವು ಪ್ರಕರಣದಲ್ಲಿ ಕೇರಳ ಸರಕಾರದ ನಿರ್ಧಾರವನ್ನೂ ಕೈಗೆತ್ತಿಕೊಂಡಿತು. ಅರ್ಜಿಗೆ ಸಂಜೆಯೊಳಗೆ ಉತ್ತರಿಸುವಂತೆ ಕೇರಳ ಸರಕಾರಕ್ಕೆ ನಿರ್ದೇಶ ನೀಡಿದ ಪೀಠವು,ಈ ವಿಷಯವನ್ನು ಮಂಗಳವಾರ ಮೊದಲ ವಿಚಾರಣೆಗಾಗಿ ಪಟ್ಟಿ ಮಾಡುವಂತೆ ರಿಜಿಸ್ಟ್ರಿಗೆ ಸೂಚಿಸಿತು.
 
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರವಿವಾರ ಕೋವಿಡ್ ನಿರ್ಬಂಧಗಳಿಂದ ಮೂರು ದಿನಗಳ ಅವಧಿಗೆ ಸಡಿಲಿಕೆಯನ್ನು ಪ್ರಕಟಿಸಿದ್ದರು. ಬಟ್ಟೆ,ಪಾದರಕ್ಷೆ,ಚಿನ್ನಾಭರಣಗಳು,ಉಡುಗೊರೆ ವಸ್ತುಗಳು ಗೃಹೋಪಕರಣಗಳು, ಇಲೆಕ್ಟ್ರಾನಿಕ್ಸ್ ಮತ್ತು ರಿಪೇರಿ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದರು.

ಕೇರಳ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿಯನ್ನು ಸಲ್ಲಿಸಿರುವ ದಿಲ್ಲಿ ನಿವಾಸಿ ಪಿಕೆಡಿ ನಂಬಿಯಾರ್,ವೈದ್ಯಕೀಯ ತುರ್ತು ಸ್ಥಿತಿಯ ಸಂದರ್ಭದಲ್ಲಿ ಸರಕಾರವು ಇಂತಹ ಕ್ರಮಗಳ ಮೂಲಕ ಜನರ ಜೀವಗಳ ಜೊತೆಗೆ ಚೆಲ್ಲಾಟವಾಡುತ್ತಿರುವುದು ಆಘಾತಕಾರಿಯಾಗಿದೆ. ಈ ಗಂಭೀರ ಪರಿಸ್ಥಿತಿಯಲ್ಲಿ ಅಮಾಯಕ ಪ್ರಜೆಗಳ ಆರೋಗ್ಯ ಮತ್ತು ಜೀವಗಳ ಬಲಿ ನೀಡಲು ಕೇರಳ ಸರಕಾರವು ಸಿದ್ಧವಾಗಿದೆ ಎಂದು ಆಪಾದಿಸಿದ್ದಾರೆ.

ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಎಚ್ಚರಿಕೆ ನೀಡಿದ ಮರುದಿನವೇ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಬೆಟ್ಟು ಮಾಡಿರುವ ಅರ್ಜಿಯು,ಕನ್ವರ್ ಯಾತ್ರೆಗೆ ಅವಕಾಶ ನೀಡಿರುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಆಕ್ಷೇಪ ವ್ಯಕ್ತಪಡಿಸಿದ್ದನ್ನೂ ಉಲ್ಲೇಖಿಸಿದೆ.


ಕೇರಳ ಸರಕಾರವು ವೈದ್ಯಕೀಯ ಇಲಾಖೆಯೊಂದಿಗೆ ಸಮಾಲೋಚಿಸಿಲ್ಲ. ವಿಜಯನ್ ಮತ್ತು ಕೇರಳ ವ್ಯಾಪಾರಿ ವ್ಯವಸಾಯ ವಿಕೋಪನಾ ಸಮಿತಿಯ ನಡುವೆ ಚರ್ಚೆಯ ಬಳಿಕ ನಿರ್ಬಂಧಗಳನ್ನ ಸಡಿಲಿಸಿ ಸರಕಾರವು ಆದೇಶಿಸಿದೆ ಎಂದು ಆರೋಪಿಸಿರುವ ಅರ್ಜಿಯು, ರಾಜಕೀಯ ಹಿತಾಸಕ್ತಿಗಳು ಮತ್ತು ಕಾರಣಗಳು ದೇಶದ ಪ್ರಜೆಗಳ ಮೂಲಭೂತ ಹಕ್ಕುಗಳನ್ನು ಮೀರುವಂತಿಲ್ಲ. ಕೇರಳ ಸರಕಾರದ ಈ ಕ್ರಮವು ರಾಜಕೀಯ ಪ್ರೇರಿತವಷ್ಟೇ ಅಲ್ಲ,ದೇಶದಲ್ಲಿಯ ದಯನೀಯ ಸ್ಥಿತಿಯ ಬಗ್ಗೆ ಈ ನ್ಯಾಯಾಲಯವು ವ್ಯಕ್ತಪಡಿಸಿರುವ ಅಭಿಪ್ರಾಯಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X