Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರಾಣಿ ಶುಗರ್ಸ್ ಕ್ರಮ ವಿರೋಧಿಸಿ...

ನಿರಾಣಿ ಶುಗರ್ಸ್ ಕ್ರಮ ವಿರೋಧಿಸಿ ಕಾರ್ಖಾನೆಯ ಚಿಮಣಿ ಏರಿ ಕಾರ್ಮಿಕರ ಪ್ರತಿಭಟನೆ

ಕೆಲಸ ನೀಡುವ ಪ್ರಕಟನೆ ಹೊರಡಿಸಿದ ಬಳಿಕ ಕೆಳಗಿಳಿದ ಕಾರ್ಮಿಕರು

ವಾರ್ತಾಭಾರತಿವಾರ್ತಾಭಾರತಿ19 July 2021 10:49 PM IST
share
ನಿರಾಣಿ ಶುಗರ್ಸ್ ಕ್ರಮ ವಿರೋಧಿಸಿ ಕಾರ್ಖಾನೆಯ ಚಿಮಣಿ ಏರಿ ಕಾರ್ಮಿಕರ ಪ್ರತಿಭಟನೆ

ಪಾಂಡವಪುರ, ಜು.19: 21 ಜನ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿರಿವ ನಿರಾಣಿ ಶುಗರ್ಸ್ ಕ್ರಮ ವಿರೋಧಿಸಿ ಇಬ್ಬರು ಪಿಎಸ್‍ಎಸ್‍ಕೆ ನೌಕರರು 200 ಅಡಿ ಎತ್ತರದ ಚಿಮಣಿ ಏರಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ಪಿಎಸ್‍ಎಸ್‍ಕೆ ಆವರಣದಲ್ಲಿ ನಡೆದಿದ್ದು, ಆತಂಕಕ್ಕೆ ಕಾರಣವಾಯಿತು. 

ರಾಮಕೃಷ್ಣ ಮತ್ತು ಮನು ಎಂಬ ಇಬ್ಬರು ಕಾರ್ಮಿಕರು ಸೋಮವಾರ ಬೆಳಗ್ಗೆ ಸುಮಾರು 11:30 ಗಂಟೆಗೆ 200 ಅಡಿ ಎತ್ತರದ ಸಕ್ಕರೆ ಕಾರ್ಖಾನೆಯ ಬೃಹತ್ ಚಿಮಣಿ ಏರಿ ಪ್ರತಿಭಟನೆ ನಡೆಸಿದ್ದು, ಉಳಿದ ಕಾರ್ಮಿಕರೂ ಚಿಮಣಿ ಏರಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದು ಸಂಭವಿಸಬಹುದಾದ ಅನಾಹುತವನ್ನು ತಡೆದರು.

ರಾಮಕೃಷ್ಣ ಹಾಗೂ ಮನು ಸೇರಿದಂತೆ 21 ಜನ ಕಾರ್ಮಿಕರು ಪಿಎಸ್‍ಎಸ್‍ಕೆ ಕಾರ್ಖಾನೆಯ ನೌಕರರಾಗಿದ್ದು, ಕಾರ್ಖಾನೆಯನ್ನು ಸರಕಾರ 40 ವರ್ಷಗಳ ಅವಧಿಗೆ ನಿರಾಣಿ ಶುಗರ್ಸ್ ಕಂಪನಿಗೆ ಗುತ್ತಿಗೆಗೆ ನೀಡುವಾಗ 21 ಜನ  ಕಾರ್ಮಿಕರನ್ನೂ ನಿರಾಣಿ ಶುಗರ್ಸ್ ಸುಪರ್ಧಿಗೆ ಒಪ್ಪಿಸಿತ್ತು.

ಕಳೆದ ಹಂಗಾಮಿನಲ್ಲಿ ಮೇಲ್ಕಂಡ 21 ಜನ ಕಾರ್ಮಿಕರೂ ನಿರಾಣಿ ಶುಗರ್ಸ್ ಕಂಪನಿಯಲ್ಲಿ ಕೆಲಸ ಮಾಡಿದ್ದು, ಮಾ.29 ರಂದು ಏಕಾಏಕಿ ಯಾವುದೇ ಕಾರಣ ನೀಡದೆ ನಿರಾಣಿ ಶುಗರ್ಸ್ ಸಿಜೆಎಂ ಅವರು 21 ಜನ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದ್ದರು. ಇದನ್ನು ಪಿಎಸ್‍ಎಸ್‍ಕೆ ಎಂಡಿ ಅನುಮೋದಿಸಿದ್ದರು.

ಇದನ್ನು ಖಂಡಿಸಿ 21 ಜನ ಕಾರ್ಮಿಕರು ಹೈಕೋರ್ಟ್ ಮೆಟ್ಟಿಲೇರಿ ಆದೇಶಕ್ಕೆ ತಡೆಯಾಜ್ಞೆಯನ್ನು ತಂದಿದ್ದರೂ ಕೋರ್ಟ್ ಆದೇಶಕ್ಕೆ ಕ್ಯಾರೆ ಎನ್ನದ ನಿರಾಣಿ ಶುಗರ್ಸ್ ಅಧಿಕಾರಿಗಳು ಒಂದು ತಿಂಗಳಿಂದ 21 ಜನ ಕಾರ್ಮಿಕರಿಗೆ ಕೆಲಸ ನೀಡದೆ ಸತಾಯಿಸುತ್ತಿದ್ದರು. ಇದರಿಂದ ಬೇಸತ್ತ ಕಾರ್ಮಿಕರು ಸೋಮವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಕಾರ್ಖಾನೆಯ ಬೃಹತ್ ಚಿಮಣಿ ಏರಿ ಪ್ರತಿಭಟನೆ ನಡೆಸಿದರು.

ವಿಷಯ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ತಂಡ ಪಿಎಸ್‍ಎಸ್‍ಕೆ ಕಾರ್ಖಾನೆಗೆ ಆಗಮಿಸಿ ಇಬ್ಬರು ಕಾರ್ಮಿಕರ ರಕ್ಷಣೆಗೆ ಮುಂದಾದರು. ಈ ವೇಳೆ ತಹಸಿಲ್ದಾರ್ ಪ್ರಮೋದ್ ಎಲ್.ಪಾಟೀಲ್, ಪಿಎಸ್‍ಎಸ್‍ಕೆ ಎಂಪ್ಲಾಯಿಸ್ ಯೂನಿಯನ್ ಅಸೋಸಿಯೇಷನ್ ಅಧ್ಯಕ್ಷ ಚಿಕ್ಕಯ್ಯ ನಿರಾಣಿ ಶುಗರ್ಸ್ ಸಿಜೆಎಂ ಶಿವಾನಂದ ಸಲಗಾರ ಅವರ ಜತೆ ಮಾತುಕತೆ ನಡೆಸಿದ ಪರಿಣಾಮ 21 ಜನ ಕಾರ್ಮಿಕರಿಗೆ ಕೆಲಸ ನೀಡುವುದಾಗಿ ಕಾರ್ಖಾನೆ ನೊಟೀಸ್ ಬೋರ್ಡ್‍ನಲ್ಲಿ ಪ್ರಕಟನೆ ಹೊರಡಿಸಿದ ಬಳಿಕ ಚಿಮಣಿ ಏರಿದ್ದ ಇಬ್ಬರು ಕಾರ್ಮಿಕರು ಕೆಳಗಿಳಿದಾಗ ಆವರಣದಲ್ಲಿ ನೆರೆದಿದ್ದ ನೂರಾರು ಕಾರ್ಮಿಕರು ನಿಟ್ಟುಸಿರು ಬಿಟ್ಟರು.

ಬಳಿಕ ಚಿಮಣಿ ಏರಿ ಅಸ್ವಸ್ಥಗೊಂಡಿದ್ದ ರಾಮಕೃಷ್ಣ ಹಾಗೂ ಮನು ಅವರನ್ನು ಪಾಂಡವಪುರ ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತು. ಸರ್ಕಲ್ ಇನ್ಸ್‍ಪೆಕ್ಟರ್ ಪ್ರಭಾಕರ್, ಪಿಎಸ್‍ಐ ಪೂಜಾ ಕುಂಟೋಜಿ ಸ್ಥಳದಲ್ಲಿ ಹಾಜರಿದ್ದು ಪರಿಸ್ಥಿತಿ ನಿಭಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X