Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲೆನಾಡಿನ ನೋ ನೆಟ್‌ವರ್ಕ್,ನೋ ವೋಟಿಂಗ್...

ಮಲೆನಾಡಿನ ನೋ ನೆಟ್‌ವರ್ಕ್,ನೋ ವೋಟಿಂಗ್ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ವಾರ್ತಾಭಾರತಿವಾರ್ತಾಭಾರತಿ21 July 2021 11:03 PM IST
share
ಮಲೆನಾಡಿನ ನೋ ನೆಟ್‌ವರ್ಕ್,ನೋ ವೋಟಿಂಗ್ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ,ಜು.21: ಮಲೆನಾಡಿನ ಕರೂರು, ತುಮರಿ, ಬ್ಯಾಕೋಡು ಮುಂತಾದ ಹೋಬಳಿಯ ನೋ ನೆಟ್‌ವರ್ಕ್,ನೋ ವೋಟಿಂಗ್ ಅಭಿಯಾನಕ್ಕೆ ಮಾಜಿ ಶಾಸಕ,ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಬೆಂಬಲ ಸೂಚಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,ನೆಟ್ ವರ್ಕ್ ಸರಿ ಇಲ್ಲದಿರುವುದನ್ನು ವಿರೋಧಿಸಿ ಕೆಲವು ಸ್ಥಳೀಯ ಸಂಘಟನೆಗಳು ನೋ ನೆಟ್‌ವರ್ಕ್,ನೋ ವೋಟಿಂಗ್ ಅಭಿಯಾನ ಹಮ್ಮಿಕೊಂಡಿದ್ದು, ಹೊಸ ಸಂಚಲನ ಸೃಷ್ಟಿಸಿದೆ.ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.

ಡಿಜಿಟಲ್ ಯುಗದಲ್ಲಿ ನೆಟ್‌ವರ್ಕ್ ಸೌಲಭ್ಯ ಕಲ್ಪಿಸದೇ ಇರುವುದು ಬಹುದೊಡ್ಡ ದುರಂತವಾಗಿದೆ. 4 ದೂರ ಸಂಪರ್ಕ ಕಂಪನಿಗಳಿದ್ದರೂ ಕೂಡ ನೆಟ್ ವರ್ಕ್ ಸಿಗುತ್ತಿಲ್ಲ. ಇಂದಿನ ಡಿಜಿಟಲ್ ಯುಗದಲ್ಲೂ ಕೂಡ ಸರ್ಕಾರ ನೆಟ್ ವರ್ಕ್ ನೀಡಲು ಆಗುತ್ತಿಲ್ಲ ಎಂದರೆ ನಾಚಿಕೆಯಾಗಬೇಕು. ಬಹಳ ಅಭಿವೃದ್ಧಿ ಮಾಡುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುವ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಹಾಗೂ ಸಂಸದ ಬಿ.ವೈ. ರಾಘವೇಂದ್ರ ನೆಟ್ ವರ್ಕ್ ಸೌಲಭ್ಯ ಕಲ್ಪಿಸಿಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.

ಸಂಸದ ಬಿ.ವೈ. ರಾಘವೇಂದ್ರ ಅವರು ಎಲ್ಲಿ ಖಾಲಿ ಜಾಗ ಇದೆ ಅಂತ ಹುಡುಕುತ್ತಿದ್ದಾರೆ.ಅವರಿಗೆ  ನೆಟ್ ವರ್ಕ್ ಇಲ್ಲದ ಜಾಗಗಳು ಹೇಗೆ ಸಿಗಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ಸಿಟಿಗಳಿಂದ ಹಳ್ಳಿಗೆ ಬಂದು ವರ್ಕ್ ಫ್ರಂ ಹೋಂ  ಕೆಲಸ ಮಾಡುತ್ತಿರುವ ಉದ್ಯೋಗಿಗಳು ಹಾಗೂ ಆನ್‌ಲೈನ್ ಮೂಲಕ ಮನೆ ಪಾಠ ಕೇಳುತ್ತಿರುವ  ಅನೇಕ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದಕ್ಕೆಲ್ಲ ನೆಟ್ ವರ್ಕ್ ಇಲ್ಲದಿರುವುದೇ ಕಾರಣವಾಗಿದೆ ಎಂದರು.

ಶರಾವತಿ ಹಿನ್ನೀರಿನ ಸಂಘಟನೆಗಳು ನೆಟ್‌ವರ್ಕ್ ನಿರ್ಮಾಣದ ಬೇಡಿಕೆ ಇಟ್ಟುಕೊಂಡು ಪಾದಯಾತ್ರೆ ಮೂಲಕ ಬಹುದೊಡ್ಡ ಹೋರಾಟ ಸಿದ್ಧವಾಗಿದೆ.ಈ ನ್ಯಾಯಯುತ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದರು.

ಜೋಗ ಐಬಿ ಖಾಸಗಿಯವರಿಗೆ ಹುನ್ನಾರ:

ಜೋಗದ ಹಳೆ ಪ್ರವಾಸಿ ಕೇಂದ್ರವನ್ನು ಒಡೆದು ಹಾಕಿ ಅದನ್ನು ತ್ರಿ ಸ್ಟಾರ್ ಹೋಟೆಲ್ ಮಾಡಿ ಖಾಸಗಿಯವರಿಗೆ ಕೊಡುವ ಹುನ್ನಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೈಹಾಕಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಜೋಗ ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳು 165 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಹಳೆ ಪ್ರವಾಸಿ ಮಂದಿರವನ್ನು, ಅದರ ಮೂಲ ಸ್ವರೂಪವನ್ನು ಬದಲಾಯಿಸಬಾರದು. ಬೇಕಾದರೆ ಹೊಸದಾಗಿ ಕಟ್ಟಡ ನಿರ್ಮಿಸಲಿ ಎಂದು ಹೇಳಿದರು.

ಬಿಎಸ್‌ವೈ ಸಿಎಂ ಆಗಿ ಮುಂದುವರೆಯಲಿ:

ಯಡಿಯೂರಪ್ಪನವರೇ ಸಿಎಂ ಆಗಿ ಇರಬೇಕು ಎಂದಿರುವ ಬೇಳೂರು,ಇದು ನನ್ನ ಅಭಿಪ್ರಾಯ.ಯಡಿಯೂರಪ್ಪ ಇದ್ದರೆ ಶಿವಮೊಗ್ಗ ಜಿಲ್ಲೆಗೆ ಹೆಚ್ಚು ಅನುಕೂಲ. ಜಿಲ್ಲೆ ಹೆಚ್ಚು ಅಭಿವೃದ್ಧಿಯಾಗುತ್ತೇ. ಜೊತೆಗೆ  ನೆಟ್ವರ್ಕ್ ಸಮಸ್ಯೆ ಅದ್ರೂ ಬಗೆಹರಿಸುತ್ತಿದ್ದರೇನೋ. ಯಡಿಯೂರಪ್ಪ ಇರಬೇಕು ಎಂಬುದು ನನ್ನ ಅಪೇಕ್ಷೇ. ಇಳಿಸಬೇಕು ಅನ್ನೋರೂ ಬಿಜೆಪಿಯಲ್ಲಿದ್ದಾರೆ. ಅದು ಅವರ ಪಕ್ಷದ ವಿಚಾರ. ಯಾರಾದರೂ ಸಿಎಂ ಆಗಲಿ. ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಹುಲ್ತಿಕೊಪ್ಪ ಶ್ರೀಧರ್, ಜಿ.ಡಿ. ಮಂಜುನಾಥ್, ರಾಜಶೇಖರ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X