Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೂ ವ್ಯಾಜ್ಯ ಪ್ರಕರಣ: ಸುಪ್ರೀಂಕೋರ್ಟ್...

ಭೂ ವ್ಯಾಜ್ಯ ಪ್ರಕರಣ: ಸುಪ್ರೀಂಕೋರ್ಟ್ ವಿಚಾರಣೆಗೆ ಮುನ್ನ ಪ್ರಾಣ ಬಿಟ್ಟ ಶತಾಯುಷಿ

ವಾರ್ತಾಭಾರತಿವಾರ್ತಾಭಾರತಿ22 July 2021 10:10 AM IST
share
ಭೂ ವ್ಯಾಜ್ಯ ಪ್ರಕರಣ: ಸುಪ್ರೀಂಕೋರ್ಟ್ ವಿಚಾರಣೆಗೆ ಮುನ್ನ ಪ್ರಾಣ ಬಿಟ್ಟ ಶತಾಯುಷಿ

ಹೊಸದಿಲ್ಲಿ: ಭೂ ವ್ಯಾಜ್ಯ ಪ್ರಕರಣವೊಂದರಲ್ಲಿ 1968ರಿಂದಲೂ ನ್ಯಾಯಕ್ಕಾಗಿ ಹೋರಾಡುತ್ತಿದ್ದ ವ್ಯಕ್ತಿಯ ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಆಂಗೀಕರಿಸಿದೆ. ಆದರೆ ಇದಕ್ಕೂ ಮುನ್ನವೇ 108ರ ವೃದ್ಧ ಪ್ರಾಣ ಬಿಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

27 ವರ್ಷಗಳ ಕಾಲ ಮುಂಬೈ ಹೈಕೋರ್ಟ್‌ನಲ್ಲಿ ಬಾಕಿ ಇದ್ದ ಪ್ರಕರಣವನ್ನು ವಜಾಗೊಳಿಸಲಾಗಿತ್ತು. ಈ ತೀರ್ಪಿನ ವಿರುದ್ಧ ವಿಳಂಬವಾಗಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಜುಲೈ 12ರಂದು ಆಂಗೀಕರಿಸಿತ್ತು. ಅರ್ಜಿದಾರ ಮಹಾರಾಷ್ಟ್ರದ ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದು, ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮುಂಬೈ ಹೈಕೋರ್ಟ್‌ನ ತೀರ್ಪಿನ ಬಗ್ಗೆ ಕಕ್ಷಿದಾರರಿಗೆ ತೀರಾ ವಿಳಂಬವಾಗಿ ತಿಳಿಯಿತು ಎಂದು ಸೋಪನ್ ನರ್ಸಿಂಗ ಗಾಯಕ್ವಾಡ್ ಅವರ ಪರ ವಕೀಲರು ಮಂಡಿಸಿದ್ದ ವಾದವನ್ನು ಮಾನ್ಯ ಮಾಡಿದ ಸುಪ್ರೀಂಕೋರ್ಟ್, ಮೇಲ್ಮನವಿಯನ್ನು ವಿಚಾರಣೆಗೆ ಆಂಗೀಕರಿಸಿತ್ತು.

"ದುರಾದೃಷ್ಟವಶಾತ್ ವಿಚಾರಣಾ ನ್ಯಾಯಾಲಯದಿಂದ ಸುಪ್ರೀಂಕೋರ್ಟ್‌ವರೆಗೂ ಈ ನ್ಯಾಯದ ಹೋರಾಟ ನಡೆಸುತ್ತಾ ಬಂದ ವ್ಯಕ್ತಿ, ತನ್ನ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಆಂಗೀಕರಿಸಿದೆ ಎಂಬ ಸುದ್ದಿ ತಿಳಿಯಲು ಬದುಕಿ ಉಳಿದಿಲ್ಲ" ಎಂದು ಅರ್ಜಿದಾರರ ವಕೀಲ ವಿರಾಜ್ ಕದಂ ಹೇಳಿದರು.

"ಜುಲೈ 12ರಂದು ಇವರ ಅರ್ಜಿಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳುವ ಮುನ್ನವೇ ಅವರು ಮೃತಪಟ್ಟಿದ್ದಾರೆ. ಆದರೆ ಗ್ರಾಮೀಣ ಪ್ರದೇಶದವರಾದ ಅವರು ಮೃತಪಟ್ಟ ಮಾಹಿತಿ ವಿಚಾರಣೆಯ ಬಳಿಕ ತಿಳಿದುಬಂತು. ಇದೀಗ ಅವರ ಕಾನೂನಾತ್ಮಕ ಉತ್ತರಾಧಿಕಾರಿ ಪ್ರಕರಣ ವನ್ನು ಮುಂದುವರಿಸಲಿದ್ದಾರೆ" ಎಂದು ತಿಳಿಸಿದರು.

ಗಾಯಕ್ವಾಡ್ ಅವರ ಅರ್ಜಿಗಳ ಬಗ್ಗೆ ಮುಂಬೈ ಹೈಕೋರ್ಟ್ 2015ರ ಅಕ್ಟೋಬರ್ 23 ಮತ್ತು 2019ರ ಫೆಬ್ರುವರಿ 13ರಂದು ತೀರ್ಪು ನೀಡಿತ್ತು. ಆದರೆ ಸುಪ್ರೀಂಕೋರ್ಟ್‌ನಲ್ಲಿ ಕ್ರಮವಾಗಿ 1467 ದಿನ ಹಾಗೂ 267 ದಿನ ವಿಳಂಬವಾಗಿ ಅರ್ಜಿ ಸಲ್ಲಿಸಿರುವುದನ್ನು ಮನ್ನಿಸುವಂತೆ ಕೋರಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಹರಿಕೇಶ ರಾಯ್ ಅವರನ್ನೊಳಗೊಂಡ ಪೀಠ ನೋಟಿಸ್ ಜಾರಿ ಮಾಡಿದೆ. ಪ್ರತಿವಾದಿಗಳು ಎಂಟು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X