Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಡವರ ಮನೆಬಾಡಿಗೆ ಪಾವತಿ : ಕೇಜ್ರಿವಾಲ್...

ಬಡವರ ಮನೆಬಾಡಿಗೆ ಪಾವತಿ : ಕೇಜ್ರಿವಾಲ್ ಭರವಸೆಯ ಬಗ್ಗೆ ನಿರ್ಧರಿಸುವಂತೆ ದಿಲ್ಲಿ ಸರಕಾರಕ್ಕೆ ಹೈಕೋರ್ಟ್ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ22 July 2021 10:29 PM IST
share
ಬಡವರ ಮನೆಬಾಡಿಗೆ ಪಾವತಿ : ಕೇಜ್ರಿವಾಲ್ ಭರವಸೆಯ ಬಗ್ಗೆ ನಿರ್ಧರಿಸುವಂತೆ ದಿಲ್ಲಿ ಸರಕಾರಕ್ಕೆ ಹೈಕೋರ್ಟ್ ನಿರ್ದೇಶ

ಹೊಸದಿಲ್ಲಿ,ಜು.22: ಮುಖ್ಯಮಂತ್ರಿಯೋರ್ವರ ಘೋಷಣೆಯು ಸ್ಪಷ್ಟವಾಗಿ ಜಾರಿಗೊಳಿಸಬಹುದಾದ ಭರವಸೆಯಾಗಿರುತ್ತದೆ ಮತ್ತು ಇದರ ಜಾರಿಯ ಬಗ್ಗೆ ಸರಕಾರವು ಪರಿಗಣಿಸಬೇಕಾಗುತ್ತದೆ ಎಂದು ಗುರುವಾರ ಎತ್ತಿ ಹಿಡಿದ ದಿಲ್ಲಿ ಉಚ್ಚ ನ್ಯಾಯಾಲಯವು, ಬಾಡಿಗೆ ಮನೆಯಲ್ಲಿ ವಾಸವಾಗಿರುವ ಯಾವುದೇ ವ್ಯಕ್ತಿಗೆ ಬಾಡಿಗೆಯನ್ನು ನೀಡಲು ಅಸಾಧ್ಯವಾದರೆ ಅದನ್ನು ಸರಕಾರವೇ ಪಾವತಿಸುತ್ತದೆ ಎಂದು ಕಳೆದ ವರ್ಷ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನೀಡಿದ್ದ ಭರವಸೆಯ ಬಗ್ಗೆ ನಿರ್ಧರಿಸುವಂತೆ ದಿಲ್ಲಿ ಸರಕಾರಕ್ಕೆ ನಿರ್ದೇಶ ನೀಡಿದೆ.

  ಆಳುವವರು ಜನರಿಗೆ ನೀಡಿರುವ ಭರವಸೆಗಳು ಮಾನ್ಯವಾದ ಮತ್ತು ಸಮರ್ಥನೀಯ ಕಾರಣಗಳಿಲ್ಲದೆ ಮುರಿದು ಬೀಳದಂತೆ ನೋಡಿಕೊಳ್ಳುವುದು ಉತ್ತಮ ಆಡಳಿತದ ಅಗತ್ಯವಾಗಿದೆ ಎಂದು ಹೇಳಿದ ನ್ಯಾ.ಪ್ರತಿಭಾ ಎಂ.ಸಿಂಗ್ ಅವರು,ಸಾಮಾಜಿಕ ಸನ್ನಿವೇಶಗಳಲ್ಲಿ ‘ಭರವಸೆಗಳಿರುವುದೇ ಮುರಿಯಲಿಕ್ಕೆ ’ಎಂಬ ಮಾತು ಪ್ರಚಲಿತವಿದೆ. ಆದರೂ ಸರಕಾರ,ಅದರ ಅಧಿಕಾರಿಗಳು ಮತ್ತು ಇತರ ಪ್ರಾಧಿಕಾರಗಳು ನೀಡಿರುವ ಭರವಸೆಗಳು ಹುಸಿಯಾಗದಂತೆ ನೋಡಿಕೊಳ್ಳಲು ಕಾನೂನುಬದ್ಧ ನಿರೀಕ್ಷೆಗಳು ಮತ್ತು ನಿಬಂಧನೆಗಳ ಸಿದ್ಧಾಂತವನ್ನು ಕಾನೂನು ವಿಕಸನಗೊಳಿಸಿದೆ ಮತ್ತು ವಾಸ್ತವದಲ್ಲಿ ಕೆಲವು ಷರತ್ತುಗಳಿಗೊಳಪಟ್ಟು ಈ ಭರವಸೆಗಳನ್ನು ನ್ಯಾಯಾಂಗದ ಮೂಲಕ ಜಾರಿಗೊಳಿಸಬಹುದು ಎಂದರು.

ಕಳೆದ ವರ್ಷ ಮಾ.29ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕೇಜ್ರಿವಾಲ್ ಬಡ ಬಾಡಿಗೆದಾರರಿಂದ ಬಾಡಿಗೆ ವಸೂಲಿಯನ್ನು ಮುಂದೂಡುವಂತೆ ಎಲ್ಲ ಮನೆಮಾಲಿಕರನ್ನು ಕೋರಿಕೊಂಡಿದ್ದರು ಮತ್ತು ಯಾವುದೇ ಬಾಡಿಗೆದಾರನಿಗೆ ಬಡತನದಿಂದಾಗಿ ಬಾಡಿಗೆ ಪಾವತಿಸಲು ಅಸಾಧ್ಯವಾದರೆ ಸರಕಾರವೇ ಅದನ್ನು ಭರಿಸುವುದು ಎಂಬ ಭರವಸೆಯನ್ನು ನೀಡಿದ್ದರು ಎಂದು ಐವರು ದಿನಗೂಲಿ ಕಾರ್ಮಿಕರು ಮತ್ತು ಓರ್ವ ಮನೆಮಾಲಿಕ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.

ಮುಖ್ಯಮಂತ್ರಿ ನೀಡಿದ್ದ ಭರವಸೆಯ ಬಗ್ಗೆ ಆರು ವಾರಗಳಲ್ಲಿ ನಿರ್ಧರಿಸುವಂತೆ ದಿಲ್ಲಿ ಸರಕಾರಕ್ಕೆ ನಿರ್ದೇಶ ನೀಡಿರುವ ನ್ಯಾಯಾಲಯವು,ಕೇಜ್ರಿವಾಲ್‌ರ ಹೇಳಿಕೆಯಲ್ಲಿನ ಉದ್ದೇಶಿತ ಫಲಾನುಭವಿಗಳ ಹಿತಾಸಕ್ತಿಗಳನ್ನು ಗಮನದಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಿದೆ.

ಮುಖ್ಯಮಂತ್ರಿಗಳು ವಿಧ್ಯುಕ್ತ ಭರವಸೆಯನ್ನು ನೀಡಿದಾಗ ಅದನ್ನು ಜಾರಿಗೊಳಿಸಬೇಕೇ ಬೇಡವೇ ಎನ್ನುವುದರ ಬಗ್ಗೆ ಖಚಿತ ನಿಲುವು ತಳೆಯುವುದು ಸರಕಾರದ ಕರ್ತವ್ಯವಾಗುತ್ತದೆ ಮತ್ತು ಬೇಡವೆಂದಿದ್ದರೆ ಅದಕ್ಕೆ ಸಮರ್ಥನೀಯ ಕಾರಣಗಳನ್ನು ತಿಳಿಸಬೇಕಾಗುತ್ತದೆ ಎಂದೂ ನ್ಯಾಯಾಲಯವು ತಿಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X