Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಮಾನ್‌ನಲ್ಲಿ ಇರಾನ್‌ನ ತೈಲ...

ಒಮಾನ್‌ನಲ್ಲಿ ಇರಾನ್‌ನ ತೈಲ ಸಂಗ್ರಹಾಗಾರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 July 2021 11:08 PM IST
share

ಟೆಹ್ರಾನ್, ಜು.22: ಗಲ್ಫ್ ಪ್ರದೇಶದಲ್ಲಿ ಇರಾನ್‌ನ ಪ್ರಪ್ರಥಮ ತೈಲ ಸಂಗ್ರಹಾಗಾರವನ್ನು ಒಮಾನ್‌ನಲ್ಲಿ ಆರಂಭಿಸಲಾಗಿದೆ ಎಂದು ಇರಾನ್‌ನ ನಿರ್ಗಮಿತ ಅಧ್ಯಕ್ಷ ಹಸನ್ ರೂಹಾನಿ ಘೋಷಿಸಿದ್ದಾರೆ. ಇದೊಂದು ವ್ಯೂಹಾತ್ಮಕ ನಡೆಯಾಗಿದ್ದು ದೇಶದ ತೈಲ ರಫ್ತು ಪ್ರಕ್ರಿಯೆಯ ಮುಂದುವರಿಕೆಗೆ ನೆರವಾಗಲಿದೆ ಎಂದವರು ಹೇಳಿದ್ದಾರೆ.

ಇದರಿಂದ ಇರಾನ್ ತನ್ನ ತೈಲ ರಫ್ತು ಪ್ರಕ್ರಿಯೆಗೆ ಹೋರ್ಮಝ್ ಜಲಮಾರ್ಗವನ್ನು ಅವಲಂಬಿಸುವ ಅನಿವಾರ್ಯತೆ ತಪ್ಪಿದಂತಾಗಿದೆ.

 ಇರಾನ್ ದೇಶದ ಇತಿಹಾಸದಲ್ಲಿ ಇವತ್ತು ಚರಿತ್ರಾರ್ಹ ದಿನವಾಗಿದೆ. ಈ ಹಿಂದೆ ಏನಾದರೂ ಸಮಸ್ಯೆಯಾದರೆ ನಮಗೆ ತೈಲ ಸಾಗಿಸುವ ಮಾರ್ಗಕ್ಕೆ ಅಡ್ಡಿಯಾಗುವ ಪರಿಸ್ಥಿತಿಯಿತ್ತು. ಇವತ್ತು 100 ಟನ್ ತೈಲ ಹೊತ್ತ ಪ್ರಥಮ ಹಡಗು ಹೋರ್ಮಝ್ ಜಲಮಾರ್ಗದ ಬದಲು ಬೇರೆ ಮಾರ್ಗದ ಮೂಲಕ ರವಾನೆಯಾಗಿದೆ. ಅಮೆರಿಕದ ನಿರ್ಬಂಧದ ವೈಫಲ್ಯವನ್ನು ಇದು ತೋರಿಸುತ್ತದೆ. ‘ಬಂದರ್-ಎ- ಜಸ್ಕ್’ ಬಂದರಿನ ಮೂಲಕ ಪ್ರತೀ ದಿನ 1 ಮಿಲಿಯನ್ ಬ್ಯಾರೆಲ್ ತೈಲ ರಫ್ತು ಮಾಡುವ ಗುರಿ ಹೊಂದಲಾಗಿದೆ ಎಂದು ಟಿವಿ ವಾಹಿನಿಯ ಮೂಲಕ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ರೂಹಾನಿ ಹೇಳಿದ್ದಾರೆ. ಹೊಸ ಟರ್ಮಿನಲ್‌ಗೆ ಕಚ್ಛಾತೈಲ ಸಾಗಿಸಲು 1,000 ಕಿ.ಮೀ ಉದ್ದದ ಪೈಪ್‌ಲೈನ್ ಕೂಡಾ ಆರಂಭಿಸಲಾಗಿದೆ. ಹೋರ್ಮಝ್ ಜಲಮಾರ್ಗ ಗಲ್ಫ್ ದೇಶಕ್ಕೆ ಸಂಪರ್ಕ ಸಾಧಿಸುವ ಇಕ್ಕಟ್ಟಿನ ಜಲಸಂಧಿಯಾಗಿದ್ದು ಏಶ್ಯಾ, ಯುರೋಪ್, ಉತ್ತರ ಅಮೆರಿಕ ಹಾಗೂ ಅದರಿಂದಾಚೆಗಿನ ದೇಶಗಳಿಗೆ ಮಧ್ಯಪ್ರಾಚ್ಯ ದೇಶಗಳಿಂದ ರಫ್ತಾಗುವ ಒಟ್ಟು ತೈಲಪ್ರಮಾಣದ ಐದನೇ ಒಂದು ಭಾಗದಷ್ಟು ತೈಲೋತ್ಪನ್ನ ಇದರ ಮೂಲಕ ರವಾನೆಯಾಗುತ್ತದೆ.

 ಇಲ್ಲಿಯ ಸಮುದ್ರಭಾಗದಲ್ಲಿ ಇರಾನ್‌ನ ರೆವೊಲ್ಯುಷನರಿ ಗಾರ್ಡ್ ಪಡೆ ಹಾಗೂ ಅಮೆರಿಕದ ಸೇನೆಯ ಮಧ್ಯೆ ಆಗಾಗ ತಿಕ್ಕಾಟ, ಘರ್ಷಣೆ ನಡೆಯುತ್ತಿರುತ್ತದೆ. ಜೊತೆಗೆ, ಬದ್ಧವೈರಿಗಳಾದ ಇಸ್ರೇಲ್-ಇರಾನ್‌ಗಳ ನಡುವೆಯೂ ಇಲ್ಲಿ ಘರ್ಷಣೆ ನಡೆಯುತ್ತಿರುತ್ತದೆ. ಕಳೆದ ಫೆಬ್ರವರಿಯಲ್ಲಿ ಗಲ್ಫ್ ಆಫ್ ಒಮಾನ್‌ನಲ್ಲಿ ಇಸ್ರೇಲ್‌ನ ಹಡಗುಗಳ ಮೇಲೆ ದಾಳಿ ನಡೆದಿದ್ದು ಇದಕ್ಕೆ ಇರಾನ್ ಕಾರಣ ಎಂದು ಇಸ್ರೇಲ್ ದೂರಿದೆ. ಜೂನ್‌ನಲ್ಲಿ ಇರಾನ್‌ನ ಬೃಹತ್ ಯುದ್ಧನೌಕೆ ಬೆಂಕಿಹತ್ತಿಕೊಂಡು ಮುಳುಗಿದ ಘಟನೆಯೂ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X