Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯ ರೋಹಿಂಗ್ಯ ಶಿಬಿರದಲ್ಲಿದ್ದ...

ದಿಲ್ಲಿಯ ರೋಹಿಂಗ್ಯ ಶಿಬಿರದಲ್ಲಿದ್ದ ಮಸೀದಿಯನ್ನು ನೆಲಸಮಗೈದ ಪೊಲೀಸರು, ಸ್ಥಳೀಯಾಡಳಿತ: ಆರೋಪ

ವಾರ್ತಾಭಾರತಿವಾರ್ತಾಭಾರತಿ23 July 2021 4:57 PM IST
share
ದಿಲ್ಲಿಯ ರೋಹಿಂಗ್ಯ ಶಿಬಿರದಲ್ಲಿದ್ದ ಮಸೀದಿಯನ್ನು ನೆಲಸಮಗೈದ ಪೊಲೀಸರು, ಸ್ಥಳೀಯಾಡಳಿತ: ಆರೋಪ

ಹೊಸದಿಲ್ಲಿ: ರಾಜಧಾನಿ ದಿಲ್ಲಿಯ ಮದನಪುರ್ ಖಾದರ್ ಪ್ರದೇಶದಲ್ಲಿರುವ ನಿರಾಶ್ರಿತ ರೋಹಿಂಗ್ಯನ್ನರ ಶಿಬಿರದಲ್ಲಿದ್ದ ತಾತ್ಕಾಲಿಕ ಮಸೀದಿಯನ್ನು ಪೊಲೀಸರು ಮತ್ತು ಸ್ಥಳೀಯಾಡಳಿತದ ಸಿಬ್ಬಂದಿ ಗುರುವಾರ ಬೆಳಿಗ್ಗೆ ನೆಲಸಮಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಶಿಬಿರದಲ್ಲಿ ಕೆಲ ವಾರಗಳ ಹಿಂದೆ ಅಗ್ನಿ ಅನಾಹುತ ಸಂಭವಿಸಿತ್ತು ಎಂದು aljazeera.com ವರದಿ ಮಾಡಿದೆ.

ಮಸೀದಿಯನ್ನು ಟಾರ್ಪಲಿನ್ ಶೀಟುಗಳು ಹಾಗೂ ಬಿದಿರಿನ ಕೋಲುಗಳ ಸಹಾಯದಿಂದ ನಿರ್ಮಿಸಲಾಗಿತ್ತು.  ಮ್ಯಾನ್ಮಾರ್ ನಲ್ಲಿ ದಬ್ಬಾಳಿಕೆ ಸಹಿಸಲಾರದೆ ಅಲ್ಲಿಂದ ಪಲಾಯನಗೈದು ಇಲ್ಲಿ ನೆಲೆಸಿರುವ ಸುಮಾರು 300 ರೋಹಿಂಗ್ಯನ್ನರ ಸತತ ಅಪೀಲುಗಳ ಹೊರತಾಗಿಯೂ ಮಸೀದಿ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಮಸೀದಿಯಲ್ಲಿ ಗುರುವಾರ ಫಜ್ರ್ ಪ್ರಾರ್ಥನೆಗಳು ನಡೆದ ಒಂದು ಗಂಟೆ ತರುವಾಯ ನೆಲಸಮ ಕಾರ್ಯಾಚರಣೆ ನಡೆಯಿತೆಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ. "ಅವರು ಮೊದಲು ಶೌಚಾಲಯ, ವಾಶ್ ರೂಂಗಳನ್ನು ಧ್ವಂಸಗೈದರು. ನಂತರ ಕೈಪಂಪ್ ಒಂದನ್ನು ಕೂಡ ಹಾನಿಗೈದು ಕೊನೆಗೆ ಮಸೀದಿಯನ್ನು ನೆಲಸಮಗೊಳಿಸಿದರು. ಎಲ್ಲವೂ 10 ನಿಮಿಷಗಳಲ್ಲಿ ಮುಗಿದು ಹೋಯಿತು,'' ಎಂದು ಅವರು ಹೇಳಿದ್ದಾರೆ.

ನಿವಾಸಿಗಳು ಪ್ರತಿಭಟಿಸಲು ಯತ್ನಿಸಿದಾಗ "ನೀವು ಅಕ್ರಮ ವಲಸಿಗರು, ಇಲ್ಲಿ ಜಮೀನು ಅತಿಕ್ರಮಿಸಿ ವಾಸಿಸುತ್ತಿದ್ದೀರಿ.'' ಎಂದು ಅಧಿಕಾರಿಗಳು ತಿಳಿಸಿದ್ದರೆಂದು ನಿವಾಸಿಯೊಬ್ಬರು ಹೇಳಿದ್ದಾರೆ ಎಂದು aljazeera.com ವರದಿ ಮಾಡಿದೆ.

ಈ ವಿಚಾರ ಕುರಿತು ಪ್ರತಿಕ್ರಿಯಿಸಿದ ಸ್ಥಳೀಯ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಪ್ರವೀರ್ ಸಿಂಗ್,  ತಮಗೆ ನೆಲಸಮದ ಕುರಿತು ತಿಳಿದಿಲ್ಲ ಹಾಗೂ ಈ ಕುರಿತು ತಮಗೆ ಅಧಿಕೃತ ಹೇಳಿಕೆ ನೀಡುವ ಅಧಿಕಾರವಿಲ್ಲ ಎಂದಿದ್ದಾರೆ.

ಐವತ್ತಕ್ಕೂ ಹೆಚ್ಚು ನಿರಾಶ್ರಿತ ಕುಟುಂಬಗಳು ವಾಸಿಸುವ ಈ ಶಿಬಿರದಲ್ಲಿ ಜೂನ್ 13ರಂದು ಕಾಣಿಸಿಕೊಂಡ ಬೆಂಕಿ ವ್ಯಾಪಕ ಹಾನಿಯೆಸಗಿತ್ತು. 2018ರಿಂದೀಚೆಗೆ ಇಲ್ಲಿ ಸಂಭವಿಸಿದ ಎರಡನೇ ಅಗ್ನಿ ಅನಾಹುತ ಇದಾಗಿದೆ. ಬೆಂಕಿ ಅವಘಡದ ಸಂದರ್ಭ ಶಿಬಿರದ ಪ್ರವೇಶದ್ವಾರದ ಸಮೀಪವಿರುವ ಈ ಮಸೀದಿಯ ಒಂದು ಸಣ್ಣ ಭಾಗಕ್ಕೆ ಹಾನಿಯಾಗಿತ್ತು. ಸ್ಥಳೀಯ ಕಾರ್ಯಕರ್ತರು ಹಾಗೂ ಕೆಲ ಸಂಘಟನೆಗಳು ಒದಗಿಸಿದ ಟೆಂಟುಗಳಲ್ಲಿ ನಿರಾಶ್ರಿತ ಕುಟುಂಬಗಳು ವಾಸಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X