Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನದಲ್ಲಿ ಮುಂದುವರಿದ ಮಳೆಯ ಆರ್ಭಟ:...

ಹಾಸನದಲ್ಲಿ ಮುಂದುವರಿದ ಮಳೆಯ ಆರ್ಭಟ: ಯಗಜಿ ಜಲಾಶಯ ಭರ್ತಿ

ವಾರ್ತಾಭಾರತಿವಾರ್ತಾಭಾರತಿ23 July 2021 5:53 PM IST
share
ಹಾಸನದಲ್ಲಿ ಮುಂದುವರಿದ ಮಳೆಯ ಆರ್ಭಟ: ಯಗಜಿ ಜಲಾಶಯ ಭರ್ತಿ

ಹಾಸನ,ಜು.23: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅರಸೀಕೆರೆ, ಆಲೂರು, ಬೇಲೂರು, ಕೊಣನೂರಿನಲ್ಲಿ ಉತ್ತಮ ಮಳೆಯಾಗಿದೆ.

ಸತತ ನಾಲ್ಕು ದಿನಗಳಿಂದ ಮುಂಗಾರು ಬಿರುಸುಗೊಂಡಿರುವುದರಿಂದ ಅನ್ನದಾತರ ಮೊಗದಲ್ಲಿ ಸಂತಸ ಮೂಡಿದೆ. ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇನ್ನೊಂದು ಕಡೆ ಕಾಫಿ ಗಿಡಗಳಲ್ಲಿ ಈಗಾಗಲೇ ಕಾಯಿ ಕಟ್ಟಿದ್ದು ಹೆಚ್ಚು ಮಳೆಯಾದರೆ ಕೊಳೆ ರೋಗ ಕಾಣಿಸಿಕೊಳ್ಳುವ ಭೀತಿಯೂ ಎದುರಾಗಿದೆ.

ಹಾನಬಾಳ್‌ ಹೋಬಳಿಯ ಪಶ್ಚಿಮಘಟ್ಟದಂಚಿನ ಗ್ರಾಮವಾದ ಅಚ್ಚನಹಳ್ಳಿ, ಹೆತ್ತೂರು ಹೋಬಳಿ ಬೊಮ್ಮನಕೆರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೂರು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು ಈ ಬಾರಿ ದಾಖಲೆ ಪ್ರಮಾಣದಲ್ಲಿ ಮಳೆ ಬಿದ್ದಿದೆ.

ಗೊರೂರು ಜಲಾಶಯ ಭರ್ತಿಗೆ 12 ಅಡಿ ಬಾಕಿ

ಜಲಾನಯನ ಪ್ರದೇಶಗಳಾದ ಸಕಲೇಶಪುರ ಮತ್ತು ಮೂಡಿಗೆರೆ ಭಾಗದಲ್ಲಿ ಮಳೆ ಆಗುತ್ತಿರುವುದರಿಂದ ಹೇಮಾವತಿ ಜಲಾಶಯದ ಒಳ ಹರಿವು ಹೆಚ್ಚಾಗಿದೆ. 2,922 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಬುಧವಾರ 2910.35 ಅಡಿ ನೀರು ಸಂಗಹ್ರವಾಗಿದ್ದು, ಒಳ ಹರಿವು 20 ಸಾವಿರ ಕ್ಯುಸೆಕ್‌ ದಾಟಿದೆ . ಹೊರ ಹರಿವು 410 ಕ್ಯುಸೆಕ್ ಇದೆ.‌ ಜಲಾಶಯದಲ್ಲಿ 72 ಟಿಎಂಸಿ ನೀರು ಸಂಗ್ರಹವಾಗಿದೆ.

ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿರುವುದರಿಂದ ಯಾವುದೇ ಕ್ಷಣದಲ್ಲಿ ನೀರು ನದಿಗೆ ಹರಿ ಬಿಡುವ ಸಾಧ್ಯತೆಯಿದೆ. ಆದ ಕಾರಣ ಅಚ್ಚುಕಟ್ಟು ಪ್ರದೇಶದ ಜನರು ಎಚ್ಚರಿಕೆಯಿಂದ ಇರಲು, ನದಿಗೆ ಇಳಿಯದಂತೆ ಜಲಾಶಯದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ನಾಲೆಗೆ ನೀರುಬಿಡಲು ಒತ್ತಾಯ

ಯಗಚಿ ಜಲಾಶಯ ಕಳೆದ ವಾರದಿಂದಲೇ ಭರ್ತಿಯಾಗಿದ್ದು, ಎಲ್ಲಾ ಕ್ರಸ್ಟ್ ಗೇಟ್ ಗಳ ಮೂಲಕ ನೀರನ್ನು ನದಿಗೆ ಹರಿಬಿಡಲಾಗುತ್ತದೆ ಆದರೆ ನದಿಗೆ ಹರಿ ಬಿಡುವ ಬದಲು ನಾಲೆಗಳಿಗೆ ನೀರು ಹರಿಸುವಂತೆ ಜೆಡಿಎಸ್ ಮುಖಂಡ ಚನ್ನಂಗಿಹಳ್ಳಿ ಶ್ರೀಕಾಂತ್ ಒತ್ತಾಯಿಸಿದ್ದಾರೆ.

ಹಾಸನ ತಾಲೂಕಿನಲ್ಲಿ ಕಟ್ಟಾಯ ಹೋಬಳಿ ಶಾಂತಿಗ್ರಾಮ ಹೋಬಳಿ ಕಸಬಾ ಹೋಬಳಿ ಹಳೇಬೀಡು ಹೋಬಳಿ ಹಾಗೂ ಮಾದಿಹಳ್ಳಿ ಸುತ್ತಮುತ್ತ ಕೆರೆಕಟ್ಟೆಗಳು ತುಂಬದೇ ಬರಿದಾಗಿವೆ ಆದ್ದರಿಂದ ಅಣೆಕಟ್ಟೆ ನೀರನ್ನು ನದಿಗೆ ಬಿಡದೆ ಬರಗಾಲದಿಂದ ತತ್ತರಿಸಿ ಹೋಗಿರುವ ಹೋಬಳಿಯ ಗ್ರಾಮಗಳಿಗೆ ನೀರು ಹರಿಸಿದರೆ ಕೆರೆ ಕಟ್ಟೆ ತುಂಬಲು ಅಂತರ್ಜಾಲ ವೃದ್ಧಿಗೆ ಅನುಕೂಲಕರವಾಗುತ್ತದೆ. ಈಗಾಗಲೇ ದನಕರುಗಳಿಗೆ ರೈತರ ಜಮೀನುಗಳಿಗೆ ನೀರಾವರಿ ಮೂಲ ಅವಶ್ಯಕತೆಯಾಗಿದೆ. ಯಗಚಿ ಡ್ಯಾಮ್ ತುಂಬಿದ್ದರೂ ನಾಲೆಗಳಿಗೆ ನೀರು ಹರಿಸದೇ ತೊಂದರೆ ಯಾಗಿರುವುದರಿಂದ ಯಗಚಿ ನದಿಯ ನಾಲೆಗಳಿಗೆ ನೀರು ಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ‌ ಮಾಡಿಕೊಂಡಿದ್ದಾರೆ.

ಸದ್ಯ ಯಗಚಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ವಾಟೇಹೊಳೆ ಜಲಾಶಯವು ಭಾಗಶಃ ಭರ್ತಿಯಾಗಿದ್ದು 6.10 ಕ್ಯೂಸೆಕ್ಸ್ ನೀರು ನದಿಗೆ ಹರಿಬಿಡಲಾಗುತ್ತಿದೆ.

ಆಲೂರು ತಾಲೂಕಿನಲ್ಲಿರುವ ವಾಟೆಹೊಳೆ ಜಲಾಶಯ, ಬೇಲೂರು ತಾಲ್ಲೂಕಿನ ಯಗಚಿ ಜಲಾಶಯ ಎರಡೂ ಭರ್ತಿಯಾಗಿದ್ದು ಈ ಭಾಗದ ಜನರೂ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X