Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಕ್ಕೆ...

ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಕ್ಕೆ 'ಶಿವಪ್ಪ ನಾಯಕ ಕೃಷಿ ವಿವಿ' ಎಂದು ನಾಮಕರಣ: ಸಿಎಂ ಯಡಿಯೂರಪ್ಪ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ24 July 2021 2:46 PM IST
share
ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಕ್ಕೆ ಶಿವಪ್ಪ ನಾಯಕ ಕೃಷಿ ವಿವಿ ಎಂದು ನಾಮಕರಣ: ಸಿಎಂ ಯಡಿಯೂರಪ್ಪ ಘೋಷಣೆ

ಶಿವಮೊಗ್ಗ: ಜಿಲ್ಲೆಯ ಸಾಗರ  ತಾಲೂಕಿನ ಇರುವಕ್ಕಿಯಲ್ಲಿ ಲೋಕಾರ್ಪಣೆ ಮಾಡಲಾದ ಕೃಷಿ   ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಅವರು ಶನಿವಾರ ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಗೃಹ ಕಚೇರಿ ಕೃಷ್ಟಾದಲ್ಲಿ ಆನ್ ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕಳೆದ ಎರಡು ವರ್ಷಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಗರಿಷ್ಟ ಪ್ರಯತ್ನ ಮಾಡಿದ ತೃಪ್ತಿ ನನಗಿದೆ. ನನಗೆ ರಾಜಕೀಯ ಜನ್ಮ ನೀಡಿದ ಶಿವಮೊಗ್ಗ ಜಿಲ್ಲೆಯ ಅದರಲ್ಲೂ ಶಿಕಾರಿಪುರ ತಾಲೂಕಿನ ಜನತೆಯ ಋಣವನ್ನು ತೀರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದೇನೆ ಎಂದು ಅವರು ಹೇಳಿದರು. 

ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ನೀರುಣಿಸುವ ನೀರಾವರಿ ಯೋಜನೆಗಳನ್ನು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಯುದ್ದೋಪಾಧಿಯಲ್ಲಿ ಅನುಷ್ಟಾನಗೊಳಿಸಲಾಗಿದೆ. ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನವನ್ನು ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ ಎಂದರು.

ಶಿವಮೊಗ್ಗ ತಾಲೂಕಿನ ಸೋಗಾನೆಯಲ್ಲಿ ಏರ್‍ಬಸ್ ಮಾದರಿಯ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದೆ. ಮುಂದಿನ ಎಪ್ರಿಲ್ ವೇಳೆಗೆ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ವಿಮಾನ ನಿಲ್ದಾಣ ಆರಂಭದಿಂದ ಶಿವಮೊಗ್ಗ ಮಾತ್ರವಲ್ಲ ಸುತ್ತಲಿನ ಜಿಲ್ಲೆಗಳ ಆರ್ಥಿಕ ಪರಿಸ್ಥಿತಿಗೆ ಅನುಕೂಲವಾಗುವ ನಿರೀಕ್ಷೆಯಿದೆ. 

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಅವಕಾಶಗಳ ಸದುಪಯೋಗಕ್ಕೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗಿದೆ. ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಯನ್ನು ಸ್ಮರಣೀಯವಾಗಿಸಲು 185 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರವಾಸಿಗರನ್ನು ವರ್ಷವಿಡೀ ಆಕರ್ಷಿಸಲು ಕೆ.ಪಿ.ಟಿ.ಸಿ.ಎಲ್. ಸಹಕಾರದೊಂದಿಗೆ ಶನಿವಾರ ಹಾಗೂ ಭಾನುವಾರ ಧುಮ್ಮಿಕ್ಕುವ ಸರ್ವ ಋತು ಜೋಗ ರೂಪಿಸಲಾಗುತ್ತಿದೆ.

ಮಲೆನಾಡು, ಕರಾವಳಿ, ಬಯಲುಸೀಮೆಯ ಏಳು ಜಿಲ್ಲೆಗಳ ವ್ಯಾಪ್ತಿಗೆ ಸೀಮಿತಗೊಂಡು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಕೆಲಸ ಮಾಡುತ್ತಿದ್ದು ಇದು ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ವಿಜ್ಞಾನ ಹೊಂದಿರುವ ರಾಜ್ಯದ ಏಕೈಕ ಸಮಗ್ರ ಹಾಗೂ ವಿಶಿಷ್ಟ ವಿಶ್ವವಿದ್ಯಾಲಯವಾಗಿದೆ. ಇದೀಗ 155 ಕೋಟಿ ರೂ. ಇದೀಗ ನೂತನ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ ವಿಶ್ವವಿದ್ಯಾಲಯಕ್ಕೆ 787 ಎಕರೆ ವಿಶಾಲವಾದ ಜಮೀನು ಮಂಜೂರು ಮಾಡಲಾಗಿದೆ ಎಂದರು.

ಇದೀಗ ಮತ್ತೆ  ರಾಜ್ಯದ ಕೆಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ನಿನ್ನೆಯಷ್ಟೆ ಶಿವಮೊಗ್ಗ ಸೇರಿ 8 ಜಿಲ್ಲೆಗಳ ಜಿಲ್ಲಾಧಿಕಾರಿ ಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಜನರ ರಕ್ಷಣೆ, ಪರಿಹಾರ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದೇನೆ. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ನಾಳೆ ಬೆಳಗಾವಿಗೆ ತೆರಳಲಿದ್ದೇನೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಅವರು ಸುಮಾರು 1074 ಕೋಟಿ ರೂ. ವೆಚ್ಚದ ವಿವಿಧ ಯೋಜನೆ ಕಾಮಗಾರಿಗಳ ಉದ್ಘಾಟನೆ ಮತ್ತು 560 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. 

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಬಿ.ಸಿ.ಪಾಟೀಲ್, ಭೈರತಿ ಬಸವರಾಜ್, ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಹಿರಿಯ ಅಧಿಕಾರಿಗಳಾದ ರಾಜಕುಮಾರ್ ಖತ್ರಿ, ಕಪಿಲ್ ಮೋಹನ್, ಸೆಲ್ವಕುಮಾರ್, ಪಂಕಜ್ ಕುಮಾರ್ ಪಾಂಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X