Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಪೊಲೀಸ್ ಶ್ವಾನ 'ಸುಧಾ'ಗೆ...

ಮಂಗಳೂರು : ಪೊಲೀಸ್ ಶ್ವಾನ 'ಸುಧಾ'ಗೆ ಭಾವಪೂರ್ಣ ಅಂತಿಮ ನಮನ

ವಾರ್ತಾಭಾರತಿವಾರ್ತಾಭಾರತಿ24 July 2021 4:43 PM IST
share
ಮಂಗಳೂರು : ಪೊಲೀಸ್ ಶ್ವಾನ ಸುಧಾಗೆ ಭಾವಪೂರ್ಣ ಅಂತಿಮ ನಮನ

ಮಂಗಳೂರು, ಜು. 24: ಪೊಲೀಸ್ ಕಮಿಷನರೇಟ್ ಹಾಗೂ ದ.ಕ. ಜಿಲ್ಲೆಯಾದ್ಯಂತ ಹಲವಾರು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿರುವ ಪೊಲೀಸ್ ಶ್ವಾನ 'ಸುಧಾ' ಇಂದು ಮುಂಜಾನೆ ಕೊನೆಯುಸಿರೆಳೆದಿದೆ. ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಸುಧಾಗೆ ಭಾವಪೂರ್ಣ ಅಂತಿಮ ನಮನವನ್ನು ಸಲ್ಲಿಸಲಾಯಿತು.

ಬಿಳಿ ವಸ್ತ್ರದಲ್ಲಿ ಶ್ವಾನ ಸುಧಾಳ ಮೃತದೇಹವನ್ನು ಸುತ್ತಿ, ಹೂವಿನಿಂದ ಅಲಂಕರಿಸಿ ಪೊಲೀಸ್ ವಾದ್ಯ, ತೋಪು ಹಾರಿಸುವಿಕೆ ಯೊಂದಿಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್ ಹಾಗೂ ಇತರ ಹಿರಿಯ ಅಧಿಕಾರಿಗಳು, ಸಿಬ್ಬಂದಿಯ ಉಪಸ್ಥಿತಿಯಲ್ಲಿ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಬಳಿಕ ಮೃತದೇಹವನ್ನು ಪೊಲೀಸ್ ಮೈದಾನದ ಅಂಚಿನಲ್ಲಿ ಹೂಳುವ ಮೂಲಕ ಅಂತ್ಯ ಸಂಸ್ಕಾರವನ್ನು ನೆರವೇರಿಸಿ, ತುಳಸಿ ಗಿಡವನ್ನು ನೆಟ್ಟು ನೀರೆರೆಯಲಾಯಿತು.

ಡಾಬರ್‌ಮೆನ್ ಪಿಂಚರ್ ಜಾತಿಗೆ ಸೇರಿದ ಸುಧಾ 2011ರ ಮಾರ್ಚ್ 15ರಂದು ಜನಿಸಿತ್ತು. ಅಪರಾಧ ಪತ್ತೆ ಶ್ವಾನವಾಗಿ ಪೊಲೀಸ್ ಇಲಾಖೆಯನ್ನು ಇದು 2012ರ ಎಪ್ರಿಲ್ 2ರಿಂದ ಕರ್ತವ್ಯವನ್ನು ಆರಂಭಿಸಿತ್ತು. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ವಾನಗಳಲ್ಲಿ ಅತ್ಯಂತ ಸೂಕ್ಷ್ಮಮತಿ ಹಾಗೂ ಚುರುಕಿನ ಶ್ವಾನವಾಗಿ ಗುರುತಿಸಿಕೊಂಡಿದ್ದ ಸುಧಾ ಕೆಲ ಸಮಯದ ಹಿಂದೆ ಕ್ಯಾನ್ಸರ್‌ಗೆ ಒಳಗಾಗಿ ಶಸ್ತ್ರ ಚಿಕಿತ್ಸೆಯನ್ನೂ ನಡೆಸಲಾಗಿತ್ತು.

ಸುಧಾ ಹೆಸರು ಸಂದೀಪ್ ಬೈಕ್ ಗೆ 

3 ತಿಂಗಳ ಹಸಿಗೂಸಿನಿಂದ ಸುಧಾಳನ್ನು ಸಾಕಿ ಸಲಹಿ ಯೋಗಕ್ಷೇಮವನ್ನು ನೋಡಿಕೊಳ್ಳುತ್ತಿದ್ದ ಸಂದೀಪ್ ಇಂದು ಅಕ್ಷರಶ: ಭಾವುಕರಾಗಿದ್ದರು. ಕಣ್ಣೀರಿಡುತ್ತಲೇ ಸಂದೀಪ್ ಸುಧಾ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು. ಸಂದೀಪ್‌ಗೆ ಸುಧಾ ಜತೆಗಿನ ನಂಟು ಅದೆಷ್ಟು ಗಾಢವಾಗಿತ್ತೆಂದರೆ ಕೆಲ ಸಮಯದ ಹಿಂದೆ ತಾವು ಖರೀದಿಸಿದ್ದ ಹೊಸ ಬೈಕ್‌ಗೂ ಅವರು ಸುಧಾಳ ಹೆಸರನ್ನಿಟ್ಟಿದ್ದಾರೆ.

‘‘ಮೂರು ತಿಂಗಳ ಮರಿಯಿಂದ ನಾನು ಆಕೆಯನ್ನು ಸಾಕಿದ್ದೇನೆ. ಅತ್ಯಂತ ಚುರುಕಿನ ಶ್ವಾನ ಆಕೆ ಮಾತ್ರವಲ್ಲದೆ, ನಾನು ಅರ್ಧ ತಾಸು ಎಲ್ಲಿಯಾದರೂ ಹೊರ ಹೋಗುವುದಾದರೂ ನಾನೆಲ್ಲಿ ಕುಳ್ಳಿರಿಸಿ ಹೋಗುತ್ತೇನೋ ಅಲ್ಲೇ ನನಗಾಗಿ ಕಾಯುತ್ತಿದ್ದಳು. ಅತ್ಯಂತ ಸೂಕ್ಷ್ಮಮತಿಯವಳಾಗಿದ್ದ ಸುಧಾ ಹಲವಾರು ಅಪರಾಧ ಪ್ರಕರಣಗಳಲ್ಲಿ ಮುಂಚೂಣಿಯಲ್ಲಿದ್ದು ಪ್ರಕರಣ ಬೇಧಿಸಲು ಸಹಕರಿಸಿದ್ದಾಳೆ’’ ಎಂದು ಸಂದೀಪ್ ಪ್ರತಿಕ್ರಿಯಿಸಿದರು.

‘‘ಕಳೆದ ಐದು ತಿಂಗಳಿನಿಂದೀಚೆಗೆ ಎದೆಭಾಗದಲ್ಲಿ ಟ್ಯೂಮರ್ ಕಾಣಿಸಿಕೊಂಡಿದ್ದು, ಚಿಕಿತ್ಸೆ ಒದಗಿಸಲಾಗಿತ್ತು. ಆ ಬಳಿಕ ಚೆನ್ನಾಗಿಯೇ ಇದ್ದ ಸುಧಾ ಆರೋಗ್ಯ ಕಳೆದ ಒಂದು ವಾರದಿಂದ ತೀರಾ ಹದಗೆಟ್ಟಿತ್ತು. ಎರಡು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದು, ಇಂದು ಬೆಳಗ್ಗೆ 10.20ರ ವೇಳೆಗೆ ಕೊನೆಯುಸಿರೆಳಿದಿದೆ. ಎರಡು ಕೊಲೆ ಪ್ರಕರಣಗಳು ಸೇರಿದಂತೆ ಮಂಗಳೂರು ಮಾತ್ರವಲ್ಲದೆ ದ.ಕ. ಜಿಲ್ಲೆಯಾದ್ಯಂತ ಹಲವಾರು ಪ್ರಕರಣಗಳನ್ನು ಬೇಧಿಸುವಲ್ಲಿ ಸುಧಾ ಪೊಲೀಸರಿಗೆ ಸಹಕಾರ ನೀಡಿದೆ. ಶ್ವಾನ ದಳದ ಚುರುಕಾದ ಶ್ವಾನ ಇದಾಗಿತ್ತು. ನಗರ ಶ್ವಾನ ದಳದಲ್ಲಿ ಪ್ರಸಕ್ತ ಐದು ಶ್ವಾನಗಳಿದ್ದು, ಎರಡು ಶ್ವಾನಗಳು ತರಬೇತಿ ಪಡೆಯುತ್ತಿವೆ. ಸುಧಾ ಕೊನೆಯುಸಿರೆಳಿದಿದ್ದು, ಇನ್ನೆರಡು ಶ್ವಾನಗಳು ಸದ್ಯ ಕರ್ತವ್ಯದಲ್ಲಿವೆ. ತರಬೇತಿಯಲ್ಲಿರುವ ಶ್ವಾನಗಳು ಶೀಘ್ರವೇ ತರಬೇತಿ ಮುಗಿಸಿ ಕರ್ತವ್ಯಕ್ಕೆ ಸೇರ್ಪಡೆಯಾಗಲಿವೆ ’’

- ಎನ್. ಶಶಿಕುಮಾರ್, ಪೊಲೀಸ್ ಆಯುಕ್ತರು, ಮಂಗಳೂರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X