Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಾರ್ಮಾಡಿ ಘಾಟಿ ಕುಸಿತ ಪ್ರದೇಶದಲ್ಲಿ...

ಚಾರ್ಮಾಡಿ ಘಾಟಿ ಕುಸಿತ ಪ್ರದೇಶದಲ್ಲಿ ತಾತ್ಕಾಲಿಕ ದುರಸ್ತಿ ಆರಂಭ

ವಾರ್ತಾಭಾರತಿವಾರ್ತಾಭಾರತಿ24 July 2021 5:12 PM IST
share
ಚಾರ್ಮಾಡಿ ಘಾಟಿ ಕುಸಿತ ಪ್ರದೇಶದಲ್ಲಿ ತಾತ್ಕಾಲಿಕ ದುರಸ್ತಿ ಆರಂಭ

ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾರ್ಮಾಡಿ ಘಾಟಿಯ 6ನೇ ತಿರುವಿನ ಬಳಿ ಉಂಟಾಗಿರುವ ಗುಡ್ಡ ಕುಸಿತ ಪ್ರದೇಶದಲ್ಲಿ ತಾತ್ಕಾಲಿಕ ದುರಸ್ತಿ ಕಾಮಗಾರಿ ಶನಿವಾರ ಆರಂಭಿಸಲಾಗಿದೆ.

ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆ ನೀರು ರಸ್ತೆ ಮೂಲಕ ಹರಿದು ತಡೆಗೋಡೆ ಭಾಗದಿಂದ ಇಳಿದ ಕಾರಣ ರಸ್ತೆಯ ತಳಭಾಗದ ಮಣ್ಣು ಕುಸಿದು ಅಪಾಯದ ಸ್ಥಿತಿ ನಿರ್ಮಾಣವಾಗಿತ್ತು. ಇದು ಇನ್ನಷ್ಟು ಕುಸಿದರೆ ಚಾರ್ಮಾಡಿ ಮೂಲಕ ವಾಹನ ಸಂಚಾರಕ್ಕೆ ಸಂಚಕಾರ ಉಂಟಾಗುವ ಸಾಧ್ಯತೆ ಎದುರಾಗಿತ್ತು.

ಶುಕ್ರವಾರ ಘಟನಾ ಸ್ಥಳಕ್ಕೆ ತೆರಳಿದ ಬೆಳ್ತಂಗಡಿ ತಹಶೀಲ್ದಾರ್ ಜೆ. ಮಹೇಶ್, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಇಇ ಕೃಷ್ಣಕುಮಾರ್, ಕೇಶವಮೂರ್ತಿ, ಕೀರ್ತಿ ಅಮೀನ್  ಮೊದಲಾದ ಅಧಿಕಾರಿಗಳು ಹೆಚ್ಚಿನ ಅಪಾಯ ಉಂಟಾಗದಂತೆ ಕುಸಿತ ಪ್ರದೇಶದಲ್ಲಿ ಏಕಮುಖ ರಸ್ತೆ ಸಂಚಾರ ವ್ಯವಸ್ಥೆ,  ಬ್ಯಾರಿಕೇಡ್, ತಡೆಬೇಲಿ ಅಳವಡಿಕೆ, ಚರಂಡಿಗಳಲ್ಲಿ ತುಂಬಿದ ಮಣ್ಣು ತೆರವು ಇತ್ಯಾದಿ ಮುನ್ನೆಚ್ಚರಿಕೆ ಕೈಗೊಂಡಿದ್ದರು.

ಕುಸಿತಗೊಂಡಿರುವ ಪ್ರದೇಶದಲ್ಲಿ ಇನ್ನಷ್ಟು ಕುಸಿತ ಸಂಭವಿಸುವುದನ್ನು ತಡೆಯಲು ಶನಿವಾರದಿಂದ ಮರಳಿನ ಚೀಲಗಳ ತಡೆಗೋಡೆ ಅಳವಡಿಸುವ ಕಾಮಗಾರಿ ಆರಂಭವಾಗಿದೆ. ಜೆಸಿಬಿ ಮೂಲಕ ಅಗತ್ಯವಿರುವಲ್ಲಿ ಚರಂಡಿಗಳನ್ನು ನಿರ್ಮಿಸಲಾಗುತ್ತಿದೆ. ಮಳೆ ಇರುವ ಕಾರಣ ಇಲ್ಲಿ ಪೂರ್ಣಪ್ರಮಾಣದ ಕಾಮಗಾರಿ ನಡೆಸಲು ಸಾಧ್ಯವಿಲ್ಲದಿರುವುದರಿಂದ ಈಗ ತಾತ್ಕಾಲಿಕವಾಗಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾತ್ರಿ ಸಂಚಾರ ನಿಷೇಧ ಮುಂದುವರಿಕೆ

ಅತಿ ಹೆಚ್ಚು ವಾಹನ ಸಂಚಾರವಿರುವ ಚಾರ್ಮಾಡಿ ಘಾಟಿಯಲ್ಲಿ ಬೆಳಿಗ್ಗೆ 6ರಿಂದ ಸಂಜೆ 7ರ ತನಕ ನಿಗದಿತ ವಾಹನಗಳ ಸಂಚಾರಕ್ಕೆ ದ.ಕ. ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಮುಂದಿನ ಆದೇಶದ ತನಕ ರಾತ್ರಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

"ಕುಸಿತ ಪ್ರದೇಶದಲ್ಲಿ ಪ್ರಕೃತಿ ವಿಕೋಪ, ಮಳೆಹಾನಿಯಡಿ ಕಾಮಗಾರಿ ನಿರ್ವಹಿಸಲು ಅಂದಾಜು ಪಟ್ಟಿ ತಯಾರಿಸಿ ಪ್ರಸ್ತಾವನೆ ಸಲ್ಲಿಸಲಾಗುವುದು. ಸದ್ಯಕ್ಕೆ ತಾತ್ಕಾಲಿಕ ರಕ್ಷಣಾ ಕಾಮಗಾರಿ ನಡೆದಿದೆ"

- ಕೃಷ್ಣಕುಮಾರ್, ಎಇಇ, ರಾಷ್ಟ್ರೀಯ ಹೆದ್ದಾರಿ ಇಲಾಖೆ ದ.ಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X