Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಪ್ರತಿಭಟನೆ ಸಂದರ್ಭ ಪಂಜಾಬ್ ನಲ್ಲಿ...

ರೈತರ ಪ್ರತಿಭಟನೆ ಸಂದರ್ಭ ಪಂಜಾಬ್ ನಲ್ಲಿ 220 ರೈತರ ಮೃತ್ಯು: ರಾಜ್ಯ ಸರಕಾರದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ24 July 2021 10:30 PM IST
share
ರೈತರ ಪ್ರತಿಭಟನೆ ಸಂದರ್ಭ ಪಂಜಾಬ್ ನಲ್ಲಿ 220 ರೈತರ ಮೃತ್ಯು: ರಾಜ್ಯ ಸರಕಾರದ ಮಾಹಿತಿ

ಅಮೃತಸರ, ಜು.24: ಕೇಂದ್ರ ಸರಕಾರದ 3 ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಸಂದರ್ಭ 220 ರೈತರು ಹಾಗೂ ಕೃಷಿ ಕಾರ್ಮಿಕರು ಮೃತರಾಗಿದ್ದು ಮೃತರ ಕುಟುಂಬದವರು ಹಾಗೂ ಬಂಧುಗಳಿಗೆ 10.86 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಪಂಜಾಬ್ ಸರಕಾರ ಶನಿವಾರ ಹೇಳಿದೆ.

ರೈತರ ಪ್ರತಿಭಟನೆ ಸಂದರ್ಭ ಮೃತರಾದವರ ಬಗ್ಗೆ ಯಾವುದೇ ದಾಖಲೆಯಿಲ್ಲ ಎಂದು ಕೇಂದ್ರ ಕೃಷಿಸಚಿವ ನರೇಂದ್ರ ಥೋಮರ್ ಶುಕ್ರವಾರ ಹೇಳಿಕೆ ನೀಡಿದ್ದರು.

ಜುಲೈ 20ರವರೆಗಿನ ಮಾಹಿತಿಯಂತೆ, ಮೃತಪಟ್ಟ 220 ರೈತರು/ಕೃಷಿ ಕಾರ್ಮಿಕರ ಮಾಹಿತಿಯನ್ನು ಪರಿಶೀಲಿಸಲಾಗಿದ್ದು ಮೃತರಲ್ಲಿ ಸುಮಾರು 92% ಮಂದಿ (203 ಮಂದಿ) ಪಂಜಾಬ್ನ ಮಾಲ್ವಾ ಪ್ರದೇಶದವರು, 11 ಮಂದಿ ಮಾಜ್ಹಾ ಪ್ರದೇಶದವರು ಹಾಗೂ 6 ದೊವಾಬಾ ನಿವಾಸಿಗಳು ಎಂದು ಸರಕಾರದ ವರದಿಯನ್ನು ಉಲ್ಲೇಖಿಸಿ ‘ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.

ಕಳೆದ 8 ತಿಂಗಳಿನಲ್ಲಿ ರೈತರ ಪ್ರತಿಭಟನೆಗೆ ಸಂಬಂಧಿಸಿ ಸಂಗ್ರೂರ್ ಜಿಲ್ಲೆಯಲ್ಲಿ ಅತ್ಯಧಿಕ, 43 ಸಾವು ಸಂಭವಿಸಿದ್ದು ಮೃತಪಟ್ಟವರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರಕಾರ ನೀಡಿದೆ. ಭಟಿಂಡಾ ಜಿಲ್ಲೆಯಲ್ಲಿ 33 ಸಾವು ಸಂಭವಿಸಿದ್ದು ಮೃತರ ಕುಟುಂಬದವರಿಗೆ ಒಟ್ಟು 1.65 ಕೋಟಿ ರೂ. ಪರಿಹಾರ ಒದಗಿಸಲಾಗಿದೆ. ಮೋಗಾದಲ್ಲಿ 27, ಪಟಿಯಾಲದಲ್ಲಿ 25, ಬರ್ನಾಲದಲ್ಲಿ 17, ಮಾನ್ಸದಲ್ಲಿ 15, ಮುಕತ್ಸರ್ ಸಾಹಿಬ್ನಲ್ಲಿ 14, ಲುಧಿಯಾನದಲ್ಲಿ 13, ಅಮೃತಸರದಲ್ಲಿ 4, ಮೊಹಾಲಿ, ತರಣ್ ರಣ್ ನಲ್ಲಿ ಕ್ರಮವಾಗಿ 3 ಮತ್ತು 2 ಸಾವಿನ ಪ್ರಕರಣ ಸಂಭವಿಸಿದೆ.

ಇದರ ಜೊತೆಗೆ , ಹಲವು ಜಿಲ್ಲೆಗಳಲ್ಲಿ ಸುಮಾರು 24ಕ್ಕೂ ಅಧಿಕ ರೈತರು ಮೃತಪಟ್ಟ ಪ್ರಕರಣಗಳ ಪರಿಶೀಲನೆ ನಡೆಯುತ್ತಿದ್ದು ಇದರಲ್ಲಿ ಹೆಚ್ಚಿನವರು ರೈತರ ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣದ ಸಂತ್ರಸ್ತರಾಗಿರುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ಈ ಮಧ್ಯೆ ಹೇಳಿಕೆ ನೀಡಿರುವ ರೈತರ ಸಂಘಟನೆಗಳು, ತಾವು ಸಂಗ್ರಹಿಸಿದ ಮಾಹಿತಿಯಂತೆ ದಿಲ್ಲಿಯಲ್ಲಿ ನಡೆದ ರೈತರ ಪ್ರತಿಭಟನೆಗೆ ಸಂಬಂಧಿಸಿ ಇದುವರೆಗೆ 500ಕ್ಕೂ ಅಧಿಕ ರೈತರು, ಕೃಷಿ ಕಾರ್ಮಿಕರು ಮೃತರಾಗಿದ್ದು ಇವರಲ್ಲಿ ಸುಮಾರು 85%ದಷ್ಟು ಮಂದಿ ಪಂಜಾಬ್ ನವರು. ಪಂಜಾಬ್ ನಲ್ಲಿ ಕೃಷಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ಮೃತಪಟ್ಟವರ ಸಂಖ್ಯೆಯೂ ಇದರಲ್ಲಿ ಸೇರಿದೆ ಎಂದಿವೆ.

ಈ ಪ್ರತಿಭಟನೆಯಲ್ಲಿ ಹಲವು ರಾಜ್ಯದ ರೈತರು ಮೃತರಾಗಿದ್ದಾರೆ. ಆದರೆ ಪಂಜಾಬ್ ನ ರೈತರ ಸಂಘಟನೆಗಳು ಅತ್ಯುತ್ಸಾಹದಿಂದ ಮಾಹಿತಿ ಸಂಗ್ರಹಿಸಿವೆ ಎಂದು ಸಂಯುಕ್ತ ಕಿಸಾನ್ ಮೋರ್ಛ ಪ್ರತಿಕ್ರಿಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X