ಸಂಜೆಯೊಳಗೆ ಹೈಕಮಾಂಡ್ ಸಂದೇಶ ಬರಲಿದೆ : ಸಿಎಂ ಯಡಿಯೂರಪ್ಪ
ಬೆಳಗಾವಿ : ಮುಖ್ಯಮಂತ್ರಿ ಬದಲಾವಣೆ ವಿಚಾರ, ರಾಜಕೀಯ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳಗಾವಿಗೆ ಭೇಟಿ ನೀಡಿದ್ದು, ಮಳೆ, ಪ್ರವಾಹ ಪರಿಸ್ಥಿತಿ ಅವಲೋಕನ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ್ದು, ಸಂಜೆಯೊಳಗೆ ಹೈಕಮಾಂಡ್ ಸಂದೇಶ ಬರಲಿದೆ, ನಿಮಗೂ ತಿಳಿಯುತ್ತದೆ ಎಂದು ಪ್ರತಿಕ್ರಿಯಿಸಿದರು.
ಸಂಜೆ ಹೊತ್ತಿಗೆ ಹೈಕಮಾಂಡ್ ಸಂದೇಶ ಬರುತ್ತದೆ. ಆ ನಂತರ ನಿಮಗೂ ತಿಳಿಯುತ್ತದೆ ಎಂದರು. ದಲಿತ ಮುಖ್ಯಮಂತ್ರಿ ವಿಚಾರವಾಗಿ ಪ್ರಶ್ನಿಸಿದಾಗ, ಅದನ್ನು ಮಾಡುವವನು ನಾನಲ್ಲ, ಹೈಕಮಾಂಡ್ ಎಂದರು.
ಸ್ವಾಮೀಜಿಗಳು ತಮ್ಮ ಪರವಾಗಿ ಸಮಾವೇಶ ಮಾಡುತ್ತಿರುವ ಕುರಿತು ಪ್ರಶ್ನಿಸಿದಾಗ, ಅದು ಅಗತ್ಯವಿಲ್ಲ ಎಂದರು.
ಅಲ್ಲಿಂದ ಮೊದಲು ಸಂಕೇಶ್ವರಕ್ಕೆ ಭೇಟಿ ನೀಡಲಿದ್ದಾರೆ. ಸಂಕೇಶ್ವರದಲ್ಲಿ ಭಾರಿ ಮಳೆ, ಪ್ರವಾಹದ ಹೊಡೆತಕ್ಕೆ ಇಡೀ ಪಟ್ಟಣವೇ ನಲುಗಿ ಹೋಗಿದ್ದು, ಇಲ್ಲಿ ಮಳೆ ಹಾನಿ ಕುರಿತು ಪರಿಶೀಲನೆ ನಡೆಸಲಿದ್ದಾರೆ.
ಬಳಿಕ ಜಿಲ್ಲೆಯ ನಿಪ್ಪಾಣಿ, ಹುಕ್ಕೇರಿ ಸೇರಿದಂತೆ ಹಲವು ಪ್ರದೇಶಗಳಿಗೆ ಭೆಟಿ ನೀಡಿ ಮಳೆಯಿಂದ ಉಂಟಾದ ಹಾನಿ, ಜನರ ಸಂಕಷ ಆಲುಸಲಿದ್ದಾರೆ.