Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಳಿ ತ್ಯಾಜ್ಯದಿಂದ ಬಯೋ ಡೀಸೆಲ್ ಗೆ...

ಕೋಳಿ ತ್ಯಾಜ್ಯದಿಂದ ಬಯೋ ಡೀಸೆಲ್ ಗೆ ಪೇಟೆಂಟ್ ಪಡೆದ ಕೇರಳದ ಪಶುವೈದ್ಯ

ವಾರ್ತಾಭಾರತಿವಾರ್ತಾಭಾರತಿ25 July 2021 10:08 PM IST
share
ಕೋಳಿ ತ್ಯಾಜ್ಯದಿಂದ ಬಯೋ ಡೀಸೆಲ್ ಗೆ ಪೇಟೆಂಟ್ ಪಡೆದ ಕೇರಳದ ಪಶುವೈದ್ಯ

ವಯನಾಡ್,ಜು.25: ಏಳೂವರೆ ವರ್ಷಗಳ ಕಾಯುವಿಕೆಯ ಬಳಿಕ ಕೊನೆಗೂ ಪಶುವೈದ್ಯ-ಸಂಶೋಧಕ ಜಾನ್ ಅಬ್ರಹಾಂ ಅವರು ಹತ್ಯೆಯಾದ ಕೋಳಿಗಳ ತ್ಯಾಜ್ಯದಿಂದ ಬಯೊಡೀಸೆಲ್ ತಯಾರಿಕೆಯ ತನ್ನ ತಂತ್ರಜ್ಞಾನಕ್ಕೆ ಪೇಟೆಂಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಿ ಲೀ.ಗೆ 38 ಕಿ.ಮೀ.ಮೈಲೇಜ್ ನೀಡುವ ಈ ಇಂಧನವು ಡೀಸೆಲ್ ನ ಈಗಿನ ದರದ ಶೇ.40ರಷ್ಟು ಬೆಲೆಯಲ್ಲಿ ಲಭ್ಯವಾಗುವ ಜೊತೆಗೆ ವಾಯುಮಾಲಿನ್ಯವನ್ನು ಅರ್ಧದಷ್ಟು ಕಡಿಮೆ ಮಾಡುತ್ತದೆ. ಅವರು ಬಳಸುವ ಕೋಳಿತ್ಯಾಜ್ಯವು ಸ್ಥಳೀಯವಾಗಿ ಪ್ರತಿ ಕೆಜಿಗೆ ಏಳು ರೂ.ದರದಲ್ಲಿ ಲಭ್ಯವಿದೆ.

 ಕೇರಳ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ವಿವಿ ಅಧೀನದ ಇಲ್ಲಿಯ ಪಶುವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರೊಫೆಸರ್ ಆಗಿರುವ ಅಬ್ರಹಾಂ ಅವರ ಸಂಶೋಧನೆಗೆ ಭಾರತೀಯ ಪೇಟೆಂಟ್ ಕಚೇರಿಯು 2021,ಜು.7ರಂದು ಪೇಟೆಂಟ್ ನೀಡಿದೆ. ಅವರ ಈ ಆವಿಷ್ಕಾರವು ತಮಿಳುನಾಡು ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನಗಳ ವಿವಿ ಅಧೀನದ ನಾಮಕ್ಕಲ್ ಪಶುವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ್ದ ಡಾಕ್ಟರಲ್ ಸಂಶೋಧನೆಯ ಫಲಶ್ರುತಿಯಾಗಿದೆ.
ಸ್ಥಳೀಯವಾಗಿ ಲಭ್ಯ ಜೈವಿಕ ವಸ್ತು ತನ್ನ ಆವಿಷ್ಕಾರದ ಮುಖ್ಯ ಕಚ್ಚಾ ವಸ್ತುವಾಗಿದ್ದರಿಂದ ರಾಷ್ಟ್ರಿಯ ಜೀವವೈವಿಧ್ಯ ಪ್ರಾಧಿಕಾರದ ಅನುಮತಿ ಅಗತ್ಯವಾಗಿದ್ದು ಪೇಟೆಂಟ್ ನೀಡಿಕೆಗೆ ವಿಳಂಬವನ್ನುಂಟು ಮಾಡಿತ್ತು ಎಂದು ಅಬ್ರಹಾಂ ತಿಳಿಸಿದರು.

 2009-12ರ ಅವಧಿಯಲ್ಲಿ ದಿ.ಪ್ರೊ.ರಮೇಶ್ ಶರವಣಕುಮಾರ್ ಅವರ ಮಾರ್ಗದರ್ಶನದಲ್ಲಿ ಅಬ್ರಹಾಂ ವಧೆ ಮಾಡಲಾದ ಬ್ರಾಯ್ಲರ್ ಕೋಳಿಗಳ ತ್ಯಾಜ್ಯ ಮತ್ತು ಪೌಲ್ಟ್ರಿಗಳಲ್ಲಿ ಸತ್ತ ಕೋಳಿಗಳನ್ನು ಕಚ್ಚಾವಸ್ತುವನ್ನಾಗಿಸಿಕೊಂಡು ಬಯೊಡೀಸೆಲ್ ಉತ್ಪಾದನೆಯ ಕುರಿತು ಸಂಶೋಧನೆಯನ್ನು ನಡೆಸಿದ್ದರು. ತಮಿಳುನಾಡು ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ವಿವಿಯ ಪರವಾಗಿ ಪೇಟೆಂಟ್ಗಳಿಗೆ ಅರ್ಜಿ ಸಲ್ಲಿಸಿದ್ದ ಶರವಣಕುಮಾರ್ ಪೇಟೆಂಟ್ ಗಾಗಿ ಕಾಯುತ್ತಲೇ 2020,ನವೆಂಬರ್ ನಲ್ಲಿ ನಿಧನರಾಗಿದ್ದರು.

ಸಂಶೋಧನೆಯ ಬಳಿಕ ವಯನಾಡ್ ಸಮೀಪದ ಕಲ್ಪಟ್ಟಾದ ಪೂಕೊಡೆ ಪಶುವೈದ್ಯಕೀಯ ಕಾಲೇಜನ್ನು ಸೇರಿದ್ದ ಅಬ್ರಹಾಂ 2014ರಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಅನುದಾನದೊಂದಿಗೆ ಕಾಲೇಜಿನ ಆವರಣದಲ್ಲಿ 18 ಲಕ್ಷ ರೂ.ವೆಚ್ಚದಲ್ಲಿ ಪ್ರಾಯೋಗಿಕ ಸ್ಥಾವರವನ್ನು ಸ್ಥಾಪಿಸಿದ್ದರು. 2015 ಎಪ್ರಿಲ್‌ನಲ್ಲಿ ಭಾರತ್ ಪೆಟ್ರೋಲಿಯಮ್ ನ ಕೊಚ್ಚಿ ರಿಫೈನರಿಯು ಆವಿಷ್ಕರಿಸಿದ್ದ ಬಯೋ ಡೀಸೆಲ್ ಗೆ ಗುಣಮಟ್ಟ ಪ್ರಮಾಣಪತ್ರವನ್ನು ನೀಡಿತ್ತು ಮತ್ತು ಆಗಿನಿಂದ ಕಾಲೇಜು ವಾಹನವು ಇದೇ ಇಂಧನವನ್ನು ಬಳಸಿ ಸಂಚರಿಸುತ್ತಿದೆ.

  ಚಿಕನ್ ತ್ಯಾಜ್ಯವನ್ನೇ ಆಯ್ಕೆ ಮಾಡಿಕೊಂಡಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅಬ್ರಹಾಂ,ಪಕ್ಷಿಗಳು ಮತ್ತು ಹಂದಿಗಳು ಒಂದೇ ಜಠರವನ್ನು ಹೊಂದಿದ್ದು,ಅದು ಅಧಿಕ ಪ್ರಮಾಣದಲ್ಲಿ ಪರ್ಯಾಪ್ತ ಕೊಬ್ಬನ್ನು ಒಳಗೊಂಡಿರುತ್ತದೆ. ಇದರಿಂದಾಗಿ ಬಯೊಡೀಸೆಲ್ ತಯಾರಿಕೆಗೆ ಅಗತ್ಯವಾದ ಕೋಳಿ ಎಣ್ಣೆಯನ್ನು ಕೋಣೆಯ ತಾಪಮಾನದಲ್ಲಿ ಪಡೆಯಲು ಸುಲಭವಾಗುತ್ತದೆ ಎಂದು ತಿಳಿಸಿದರು.

ಅಬ್ರಹಾಂ ಈಗ ತನ್ನ ಮೂವರು ವಿದ್ಯಾರ್ಥಿಗಳೊಂದಿಗೆ ಹಂದಿಯ ತ್ಯಾಜ್ಯದಿಂದ ಬಯೋ ಡೀಸೆಲ್ ನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ವಾಣಿಜ್ಯ ಉತ್ಪಾದನೆ ಕುರಿತಂತೆ ಅಬ್ರಹಾಂ,ಹಿಂದುಸ್ಥಾನ ಪೆಟ್ರೋಲಿಯಮ್ ನ ತಂಡವೊಂದು ಕಳೆದ ಶುಕ್ರವಾರ ತನ್ನನ್ನು ಭೇಟಿಯಾಗಿತ್ತು. ಪೇಟೆಂಟ್ ತಮಿಳುನಾಡು ಪಶುವೈದ್ಯಕೀಯ ವಿವಿಗೆ ಲಭಿಸಿರುವುದರಿಂದ ವಾಣಿಜ್ಯ ಉತ್ಪಾದನೆಯ ಬಗ್ಗೆ ಚರ್ಚಿಸಲು ಕೋವಿಡ್ ಲಾಕ್ಡೌನ್ ಬಳಿಕ ತಾನು ತಂಡದೊಂದಿಗೆ ವಿವಿಗೆ ಭೇಟಿ ನೀಡುವುದಾಗಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X