Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಜ್ರಿವಾಲ್ ಮಾಜಿ ಪಿಎ, ಜಾರಿ...

ಕೇಜ್ರಿವಾಲ್ ಮಾಜಿ ಪಿಎ, ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಯ ದೂರವಾಣಿ ಸಂಖ್ಯೆ ಪೆಗಾಸಸ್ ಪಟ್ಟಿಯಲ್ಲಿ

ವಾರ್ತಾಭಾರತಿವಾರ್ತಾಭಾರತಿ26 July 2021 2:41 PM IST
share
ಕೇಜ್ರಿವಾಲ್ ಮಾಜಿ ಪಿಎ, ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಯ ದೂರವಾಣಿ ಸಂಖ್ಯೆ ಪೆಗಾಸಸ್ ಪಟ್ಟಿಯಲ್ಲಿ

ಹೊಸದಿಲ್ಲಿ,ಜು.26: ಇಸ್ರೇಲಿನ ಎನ್ಎಸ್ಒ ಗ್ರೂಪ್  ಪೆಗಾಸಸ್ ಸ್ಪೈ ವೇರ್ ನ ಸೋರಿಕೆಯಾಗಿರುವ ಡಾಟಾಬೇಸ್ ನಲ್ಲಿ ದಿಲ್ಲಿ ಮುಖ್ಯಮಂತ್ರಿಅರವಿಂದ ಕೇಜ್ರಿವಾಲ್ ಅವರ ಮಾಜಿ ಆಪ್ತ ಸಹಾಯಕ ಮತ್ತು ಹಲವಾರು ಉನ್ನತ ತನಿಖೆಗಳಲ್ಲಿ ಭಾಗಿಯಾಗಿರುವ ಜಾರಿ ನಿರ್ದೇಶನಾಲಯ (ಈ.ಡಿ)ದ ಅಧಿಕಾರಿಯೋರ್ವರು ಸಂಭಾವ್ಯ ಗುರಿಗಳಾಗಿದ್ದು ಬೆಳಕಿಗೆ ಬಂದಿದೆ ಎಂದು ಬೇಹುಗಾರಿಕೆ ಹಗರಣ ಕುರಿತು ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸಿರುವ ಸುದ್ದಿಜಾಲತಾಣ ‘ದಿ ವೈರ್’ ತಿಳಿಸಿದೆ.

  ಹಿರಿಯ ಈ.ಡಿ.ಅಧಿಕಾರಿ ರಾಜೇಶ್ವರ ಸಿಂಗ್ ಅವರ ಎರಡು ದೂರವಾಣಿ ಸಂಖ್ಯೆಗಳು ಮತ್ತು ಅವರ ಕುಟುಂಬದ ಮೂವರು ಮಹಿಳೆಯರ ನಾಲ್ಕು ದೂರವಾಣಿ ಸಂಖ್ಯೆಗಳು ಸೋರಿಕೆಯಾಗಿರುವ ಪಟ್ಟಿಯಲ್ಲಿವೆ. ಕೇಜ್ರಿವಾಲ್ ಅವರ ಆಪ್ತ ಸಹಾಯಕನಾಗಿ ಕರ್ತವ್ಯ ನಿರ್ವಹಿಸಿದ್ದ ಮಾಜಿ ಐಎಎಸ್ ಅಧಿಕಾರಿ ವಿ.ಕೆ.ಜೈನ್ ಅವರನ್ನೂ ‘ಆಸಕ್ತಿಯ ವ್ಯಕ್ತಿ ’ಎಂದು ಪಟ್ಟಿಯಲ್ಲಿ ಗುರುತಿಸಲಾಗಿದೆ. 

ಸೋರಿಕೆಯಾಗಿರುವ ದಾಖಲೆಗಳಲ್ಲಿ ಪ್ರಧಾನಿ ಕಚೇರಿ ಮತ್ತು ನೀತಿ ಆಯೋಗದ ತಲಾ ಕನಿಷ್ಠ ಓರ್ವ ಅಧಿಕಾರಿಯ ದೂರವಾಣಿ ಸಂಖ್ಯೆಗಳೂ ಸೇರಿವೆ. ಪ್ರಧಾನಿ ಕಚೇರಿಯ ಅಧಿಕಾರಿ 2017ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರವಾಸ ಕಾರ್ಯಕ್ರಮಗಳ ಉಸ್ತುವಾರಿಯಾಗಿದ್ದಾಗ ಎನ್ಎಸ್ಒ ಕಂಪನಿಯ ಭಾರತೀಯ ಗ್ರಾಹಕ ಅವರಲ್ಲಿ ಆಸಕ್ತಿಯನ್ನು ತೋರಿಸಿದ್ದಾಗಿ ಸುದ್ದಿಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.

ಉತ್ತರ ಪ್ರದೇಶದ ಅಧಿಕಾರಿಯಾಗಿರುವ ರಾಜೇಶ್ವರ ಸಿಂಗ್ 2009ರಿಂದಲೂ ಈ.ಡಿ.ಯಲ್ಲಿ ಸೇವೆ ಸಲ್ಲಿಸುತ್ತಿದ್ದು,2ಜಿ ಸ್ಪೆಕ್ಟ್ರಂ ಮತ್ತು ಏರ್ಸೆಲ್- ಮ್ಯಾಕ್ಸಿಸ್ನಂತಹ ಹಲವಾರು ಪ್ರಮುಖ ಪ್ರಕರಣಗಳ ತನಿಖೆಗಳಲ್ಲಿ ಭಾಗಿಯಾಗಿದ್ದರು. ಅವರನ್ನು ಪಟ್ಟಿಯಲ್ಲಿ 2017-2019ರ ಅವಧಿಗೆ ಗುರಿಯನ್ನಾಗಿ ಹೆಸರಿಸಲಾಗಿದೆ.
ಸೋರಿಕೆಯಾಗಿರುವ ದಾಖಲೆಗಳಲ್ಲಿಯ ಒಂದು ದೂರವಾಣಿ ಸಂಖ್ಯೆ ಸಿಂಗ್ ಸೋದರಿ ಆಭಾ ಸಿಂಗ್ ಅವರದಾಗಿದೆ. ಮುಂಬೈನಲ್ಲಿ ನೆಲೆಸಿರುವ ಆಭಾ ಐಎಎಸ್ ಅಧಿಕಾರಿಯಾಗಿದ್ದು,ನಂತರ ವಕೀಲಿ ವೃತ್ತಿಯಲ್ಲಿ ತೊಡಗಿಕೊಂಡಿದ್ದಾರೆ. 

ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಹಲವಾರು ಪ್ರತಿಷ್ಠಿತ ಪ್ರಕರಣಗಳನ್ನು ನಿರ್ವಹಿಸಿರುವ ಆಭಾ ತನ್ನ ಮೊಬೈಲ್ ಫೋನ್ ನ್ನು ವಿಧಿವಿಜ್ಞಾನ ವಿಶ್ಲೇಷಣೆಗೊಳಪಡಿಸಲು ಒಪ್ಪಿಕೊಂಡಿದ್ದು,ಅದು ಅಪೂರ್ಣವಾಗಿದೆ ಎಂದು ದಿ ವೈರ್ ತಿಳಿಸಿದೆ. ಅವರು ಫೋನ್ ನ್ನು 2018-2019ರ ನಡುವೆ ಬಳಸಿದ್ದು,ಬಳಿಕ ತಮ್ಮ ಪುತ್ರನಿಗೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X