ಟೈಲರ್ಸ್ಗಳಿಗೆ ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ ವಿತರಣೆ
ಉಡುಪಿ, ಜು.26: ಕಾರ್ಮಿಕ ಇಲಾಖೆ ವತಿಯಿಂದ ಕೋವಿಡ್ 19ರ ಸಂಕಷ್ಟದಲ್ಲಿರುವ ಟೈಲರ್ಸ್ ವೃತ್ತಿ ಬಾಂಧವರಿಗೆ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಣಾ ಕಾರ್ಯಕ್ರಮ ರವಿವಾರ ಉಡುಪಿ ಜಗನ್ನಾಥ ಸಭಾಭವನದಲ್ಲಿ ಜರಗಿತು.
ಕಾರ್ಯಕ್ರಮವನ್ನು ಉಡುಪಿ ಸಹಕಾರಿ ಸಂಘಗಳ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು. ಟೈಲರ್ಸ್ ಅಸೋಸಿಯೇಶನ್ ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದಯಾನಂದ ಕೋಟ್ಯಾನ್ ಕೊರಂಗ್ರಪಾಡಿ ಅಧ್ಯಕ್ಷತೆಯಲ್ಲಿ ವಹಿಸಿದ್ದರು.
ಹಿರಿಯ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್., ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ಹಿರಿಯ ಉದ್ಯಮಿ ಹಿರೇಬೆಟ್ಟು ಪ್ರವೀಣ್ ಪೂಜಾರಿ, ಗೀತಾಂಜಲಿ ಸಿಲ್ಕ್ಸ್ನ ಮಾಲಕರು ಹಾಗೂ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಉಡುಪಿಯ ಮಾಜಿ ಅಧ್ಯಕ್ಷ ರಾಮಕೃಷ್ಣ ನಾಯಕ್, ಜಿಲ್ಲಾ ಸಮಿತಿಯ ಮಾಜಿ ಅಧ್ಯಕ್ಷ ಎಸ್.ಬಿ.ಸೋನ್ಸ್, ರಾಜ್ಯ ಸಮಿಯ ಕೋಶಾಧಿಕಾರಿ ಅಬ್ದುಲ್ ಖಾದರ್, ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ರಾಮ ಚಂದ್ರ, ಕ್ಷೇತ್ರ ಸಮಿತಿ ಉಪಾಧ್ಯಕ್ಷೆ ಮೀನಾಕ್ಷಿ ಆಚಾರ್ಯ ಉಪಸ್ಥಿತರಿದ್ದರು.
ಉಡುಪಿ ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ದಯಾನಂದ ಪ್ರಭು ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.