Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಧನಾ ಸಮಾವೇಶದಲ್ಲೆ ಬಿ.ಎಸ್.ಯಡಿಯೂರಪ್ಪ...

ಸಾಧನಾ ಸಮಾವೇಶದಲ್ಲೆ ಬಿ.ಎಸ್.ಯಡಿಯೂರಪ್ಪ ಕಣ್ಣೀರಿನ ವಿದಾಯ

"ವಸಂತ ಬಂಗೇರಾ ಪಕ್ಷ ಬಿಟ್ಟು ಹೋದಾಗಲೂ ನಾನು ಒಬ್ಬಂಟಿಯಾಗಿ ಹೋರಾಟ ಮಾಡಿದ್ದೇನೆ"

ವಾರ್ತಾಭಾರತಿವಾರ್ತಾಭಾರತಿ26 July 2021 8:09 PM IST
share
ಸಾಧನಾ ಸಮಾವೇಶದಲ್ಲೆ ಬಿ.ಎಸ್.ಯಡಿಯೂರಪ್ಪ ಕಣ್ಣೀರಿನ ವಿದಾಯ

ಬೆಂಗಳೂರು, ಜು. 26: ರಾಜ್ಯದಲ್ಲಿ ಬಿಜೆಪಿಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ `ಸಾಧನಾ ಸಮಾವೇಶ'ದಲ್ಲೇ  ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜೀನಾಮೆ ಘೋಷಣೆ ಮಾಡುವ ಮೂಲಕ ಕಣ್ಣೀರಿನ ವಿದಾಯ ಭಾಷಣ ಮಾಡಿದರು.

ಸೋಮವಾರ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‍ನಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಯಡಿಯೂರಪ್ಪ, `ಬಿಜೆಪಿ ನೇತೃತ್ವದ ಸರಕಾರದ ಸಾಧನೆಗಳ ಬದಲಿಗೆ ತಮ್ಮ ರಾಜಕೀಯ ಏಳು-ಬೀಳುಗಳನ್ನು ನೆನಪು ಮಾಡಿಕೊಳ್ಳುತ್ತಲೇ ಎಂತಹ ಸಂಕಷ್ಟದ ಸ್ಥಿತಿಗಳನ್ನು ಎದುರಿಸಿದೆ ಎಂದು ಬಿಚ್ಚಿಟ್ಟಿರು. ಅಲ್ಲದೆ, ಸಂತೋಷದಿಂದಲೇ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ನೀಡುತ್ತಿದ್ದೇನೆ' ಎಂದು ಉಮ್ಮಳಿಸಿ ಬಂದ ದುಃಖವನ್ನು ತೋರ್ಪಡಿಸದೆ ಗದ್ಗದಿತರಾದರು.

`ನನಗೆ ಎಪ್ಪತ್ತೈದು ವರ್ಷಗಳು ದಾಟಿದ್ದರೂ ಮುಖ್ಯಮಂತ್ರಿಯಾಗಿ ಮುಂದುವರಿಯಲು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರು ಅವಕಾಶ ನೀಡಿದ್ದು, ಅವರಿಗೆ ಶಬ್ದಗಳ ಮೂಲಕ ಅಭಿನಂದನೆ ಸಲ್ಲಿಸಲು ಸಾಧ್ಯವಿಲ್ಲ. ಅವರಿಗೆ ನಾನು ಸದಾ ಋಣಿ' ಎಂದ ಯಡಿಯೂರಪ್ಪ, `ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು' ಎಂದು ಪ್ರತಿಪಾದಿಸಿದರು.

`ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರೊಂದಿಗೆ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪಕ್ಷ ರಾಜ್ಯದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಅವಧಿಯಲ್ಲಿ ಪಕ್ಷವನ್ನು ಕಟ್ಟಿದ್ದೇನೆ' ಎಂದು ಬಾವುಕರಾದ ಯಡಿಯೂರಪ್ಪ, `ದೆಹಲಿಗೆ ಬರುವಂತೆ ವರಿಷ್ಟರೂ ಸೂಚನೆ ನೀಡಿದ ಸಂದರ್ಭದಲ್ಲಿಯೂ ನಾನು ರಾಜ್ಯದಲ್ಲಿ ಪಕ್ಷವನ್ನು ಕಟ್ಟುತ್ತೇನೆ ಎಂದು ಅವರಿಗೆ ಸ್ಪಷ್ಟವಾಗಿಯೇ ತಿಳಿಸಿದ್ದೆ' ಎಂದು ನೆನಪು ಮಾಡಿಕೊಂಡರು.

`ವಿಧಾನಸಭೆಯಲ್ಲಿ ವಸಂತ ಬಂಗೇರಾ ಹಾಗೂ ನಾನು ಇಬ್ಬರೇ ಇದ್ದ ಸಂದರ್ಭದಲ್ಲಿಯೂ ಎದೆಗುಂದಲಿಲ್ಲ. ಅವರ ಬಿಟ್ಟು ಹೋದರು. ಆಗಲೂ ನಾನು ಒಬ್ಬಂಟಿಯಾಗಿ ಹೋರಾಟ ಮಾಡಬೇಕಾಯಿತು. ಯಾವುದೇ ಸಂದರ್ಭದಲ್ಲಿಯೂ ನಾನು ಹಿಂದೆ ತಿರುಗಿ ನೋಡಲಿಲ್ಲ. ನನ್ನ ಕರ್ತವ್ಯವನ್ನು ರಾಜ್ಯದ ಜನತೆ ಮೆಚ್ಚುವಂತೆ ಮಾಡಿದ್ದೇನೆ. ಹಲವಾರು ಸಂಕಷ್ಟದ ಸ್ಥಿತಿಗಳನ್ನು ನಾನು ಎದುರಿಸಿದೆ. ನನ್ನ ಬದುಕು ರಾಜ್ಯದ ಜನತೆ ಮೀಸಲು ಎಂದು ಶಪತ ಮಾಡಿದ್ದೆ. ಅದೇ ರೀತಿಯಲ್ಲಿ ಕಾರ್ಯ ನಿರ್ವಹಿಸಿದ್ದೇನೆ' ಎಂದು ಯಡಿಯೂರಪ್ಪ ಸ್ಮರಿಸಿದರು.

`ನನ್ನ ಬಳಿ ಒಂದು ಕಾರು ಇಲ್ಲದ ದಿನಗಳಲ್ಲಿ ಸೈಕಲ್, ಬೈಕ್‍ನಲ್ಲಿ ಸುತ್ತಾಡಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ. ಇಂದು ಆ ದಿನಗಳನ್ನು ನೆನಪು ಮಾಡಿಕೊಂಡರೆ ಆಶ್ಚರ್ಯವಾಗುತ್ತದೆ. ಅಂದಿನ ನಮ್ಮ ಶ್ರಮದಿಂದಲೇ ಇಂದು ಪಕ್ಷ ಅಧಿಕಾರಕ್ಕೆ ಬರುವ ರೀತಿಯಲ್ಲಿ ಆಗಿದೆ. ಕಾರ್ಯಕರ್ತರ ಶ್ರಮ, ಎಲ್ಲರ ಒಗ್ಗಟ್ಟಿನಿಂದಾಗಿ ಪಕ್ಷ ಇಂದು ಅಧಿಕಾರ ಹಿಡಿಲು ಸಾಧ್ಯವಾಗಿದೆ' ಎಂದು ಯಡಿಯೂರಪ್ಪ ತಮ್ಮ ಹೋರಾಟದ ಬದುಕನ್ನು ನೆನಪು ಮಾಡಿಕೊಂಡರು.

`ರಾಜ್ಯದಲ್ಲಿನ ದಲಿತರು, ಹಿಂದುಳಿದವರು, ಮಹಿಳೆಯರು ಹಾಗೂ ರೈತರ ಪರವಾಗಿ ಸದಾ ಚಳವಳಿ ಮಾಡಿಕೊಂಡು ಬಂದಿದ್ದು, ರಾಜ್ಯದಲ್ಲಿ ಅನ್ನದಾತ ಸ್ವಾಭಿಮಾನದಿಂದ ಬದುಕಬೇಕು ಎಂದು ಹೋರಾಟ ಮಾಡಿದ್ದೇನೆ. ಜೊತೆಗೆ ಅಧಿಕಾರಕ್ಕೆ ಬಂದಾಗಲೂ ಪ್ರತ್ಯೇಕ ರೈತ ಬಜೆಟ್ ಮಂಡನೆ ಮಾಡಿದ್ದು, ಶೂನ್ಯ ಬಡ್ಡಿ ದರದಲ್ಲಿ ಅವರಿಗೆ ಸಾಲಸೌಲಭ್ಯ ಕಲ್ಪಿಸಲು ಶ್ರಮಿಸಿದ್ದೇನೆ. ಯಾವುದೇ ತಾರತಮ್ಯವಿಲ್ಲದೆ ಎಲ್ಲ ವರ್ಗದ ಏಳ್ಗೆಗಾಗಿ ಕೆಲಸ ಮಾಡಿದ್ದೇನೆ' ಎಂದು ಯಡಿಯೂರಪ್ಪ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X