Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕರ್ನಾಟಕದಲ್ಲಿ ವಿಜ್ಞಾನ ಶಿಕ್ಷಣದ...

‘ಕರ್ನಾಟಕದಲ್ಲಿ ವಿಜ್ಞಾನ ಶಿಕ್ಷಣದ ಪುನರುಜ್ಜೀವನ’-ಕಾರ್ಯನೀತಿ ಪತ್ರ

ವಾರ್ತಾಭಾರತಿವಾರ್ತಾಭಾರತಿ26 July 2021 9:37 PM IST
share

ಬೆಂಗಳೂರು, ಜು.26: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿದ್ದು, ರಾಜ್ಯದಲ್ಲಿ ವಿಜ್ಞಾನ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡುತ್ತಿದೆ ಮತ್ತು ವಿಜ್ಞಾನವನ್ನು ಜನಪ್ರಿಯಗೊಳಿಸುತ್ತಿದೆ.

ಇಂಫಾಲದಲ್ಲಿರುವ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ನಿವೃತ್ತ ಮಹಾನಿರ್ದೇಶಕ ಪ್ರೊ.ಎಸ್.ಅಯ್ಯಪ್ಪನ್ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಕಾಡೆಮಿಯು ವಿವಿಧ ವಿಷಯಗಳಿಗೆ ಸಂಬಂಧಿಸಿದ ಕಾರ್ಯನೀತಿ, ಕಾರ್ಯತಂತ್ರ ಮತ್ತು ವಸ್ತುಸ್ಥಿತಿ ಪತ್ರಗಳನ್ನು ತಜ್ಞರ ಅಭಿಪ್ರಾಯಗಳೊಂದಿಗೆ ಆಗಿಂದಾಗ್ಗೆ ಹೊರತಂದು ಯೋಜಕರಿಗೆ ಮಾಹಿತಿ ಆಧಾರಿತ ನಿರ್ಧಾರವನ್ನು ಕೈಗೊಳ್ಳಲು ಅನುವು ಮಾಡಿಕೊಡುತ್ತಿದೆ.

ಭಾರತದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಅನುಷ್ಠಾನಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ. ಇಪ್ಪತ್ತೊಂದನೇ ಶತಮಾನದ ಸವಾಲುಗಳನ್ನು ಎದುರಿಸಲು ವಿಜ್ಞಾನ ಶಿಕ್ಷಣವನ್ನು ಪುನರುಜ್ಜೀವನಗೊಳಿಸಲು ಮತ್ತು ಪರಿಷ್ಕರಿಸಲು ಇದು ಸಕಾಲವಾಗಿದೆ.
ಈ ಉದ್ದೇಶದೊಂದಿಗೆ ಉನ್ನತ ಶಿಕ್ಷಣದ ಯೋಜಕರಿಗೆ ಸಹಕಾರಿಯಾಗಲು ಶಿಕ್ಷಣ ತಜ್ಞರು ಮತ್ತು ಅಕಾಡೆಮಿ ಸದಸ್ಯರು ಆದ ಧಾರವಾಡದ ಕರ್ನಾಟಕ ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್.ಕೆ.ಸೈದಾಪುರ್ ಅಧ್ಯಕ್ಷತೆಯಲ್ಲಿ ರಚಿಸಲಾದ ತಜ್ಞ ಸಮಿತಿಯು “ಕರ್ನಾಟಕದಲ್ಲಿ ವಿಜ್ಞಾನ ಶಿಕ್ಷಣದ ಪುನರುಜ್ಜೀವನ” (Revamping Science Education in Karnataka) ಎಂಬ ಕಾರ್ಯನೀತಿ ಪತ್ರವನ್ನು ಹೊರತಂದಿದೆ.

ಈ ಪತ್ರವು ಭಾರತದಲ್ಲಿ ವಿಜ್ಞಾನ ಶಿಕ್ಷಣದ ಇತಿಹಾಸದ ಜಾಡು, ಡಿಜಿಟಲ್ ಕ್ರಾಂತಿಯ ಸವಾಲುಗಳು (ಅಂತರ್ಜಾಲದ ಮೂರನೇ ಅಲೆ– ಎಲ್ಲದರಲ್ಲೂ ಅಂತರ್ಜಾಲ: the third wave of internet -internet of everything ಹಾಗೂ ಅದರಿಂದ ಉದ್ಯೋಗಕ್ಕೆ ಉಂಟಾಗುತ್ತಿರುವ ಹಲವು ಸಮಸ್ಯೆಗಳನ್ನು ಗುರುತಿಸಿದೆ ಹಾಗೂ ವಿಜ್ಞಾನ ಶಿಕ್ಷಣವನ್ನು ಪುನರುಜ್ಜೀವನಗೊಳಿಸುವ ಅಗತ್ಯತೆಗಳನ್ನು ಸ್ಪಷ್ಟವಾಗಿ ತಿಳಿಸಿದೆ. ಇದು ನಿಜಕ್ಕೂ ಕರ್ನಾಟಕದಲ್ಲಿ ವಿಜ್ಞಾನ ಶಿಕ್ಷಣವನ್ನು ಅರ್ಥಪೂರ್ಣವಾಗಿ ಪುನರುಜ್ಜೀವನಗೊಳಿಸಲು/ ಪರಿಷ್ಕರಿಸಲು ಒಂದು ಕ್ರಿಯಾತ್ಮಕ ದಾಖಲೆಯಾಗಿದೆ.

ಪದವಿ ಮತ್ತು ಸ್ನಾತಕೋತ್ತರ ಪದವಿ ಮಟ್ಟಗಳಲ್ಲಿ ವಿಜ್ಞಾನ ಶಿಕ್ಷಣವನ್ನು ಜಾಗತಿಕ ಮಾನದಂಡ ಗಳಿಗನುಸಾರವಾಗಿ ಆಧುನೀಕರಿಸುವ ನಿಟ್ಟಿನಲ್ಲಿ “ಮೂಲ ಸೌಕರ್ಯದ ಅಗತ್ಯತೆಗಳು, ಬೋಧಕ ವರ್ಗದ ಸಬಲೀಕರಣ, ಪಠ್ಯಕ್ರಮದ ಅಭಿವೃದ್ಧಿ, ಬೋಧನಾ ಮತ್ತು ಕಲಿಕಾ ಪ್ರಕ್ರಿಯೆಗಳು ಮತ್ತು ಮೌಲ್ಯಮಾಪನಾ, ಸಂಶೋಧನೆ ಮತ್ತು ನಾವೀನ್ಯತೆಗೆ ಉತ್ತೇಜನ, ವಿಜ್ಞಾನ ಸಂವಹನ ಹಾಗೂ ನೈತಿಕತೆಯ ಅಭ್ಯಾಸ” ಕುರಿತು ಈ ವರದಿಯು ಹಲವಾರು ನಿರ್ದಿಷ್ಟ ಶಿಫಾರಸ್ಸುಗಳನ್ನು ಮಾಡಿದೆ.

ಜಾಗತಿಕ ಸವಾಲುಗಳನ್ನು ಎದುರಿಸಲು ಹಾಗೂ ಜಾಗತಿಕ ಸ್ಥಾನಮಾನವನ್ನು ಗಳಿಸಲು ಭಾರತಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನದ ಭದ್ರ ಬುನಾದಿಯು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸದರಿ ಕಾರ್ಯನೀತಿ ಪತ್ರವು ಕರ್ನಾಟಕವಲ್ಲದೇ, ಇಡೀ ದೇಶದಲ್ಲೇ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಒಂದು ಉತ್ತಮ ಹೆಜ್ಜೆಯಾಗಲಿದೆ. ಒಂದು ರೀತಿಯಲ್ಲಿ ಈ ಪತ್ರವು ವಿಜ್ಞಾನ ಶಿಕ್ಷಣದ ನಿರ್ವಹಣೆಗೆ ಆಕರ ಗ್ರಂಥವಾಗಲಿದೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ–2020ಕ್ಕೆ ಒಂದು ಪೂರಕ ದಾಖಲೆಯಾಗಲಿದೆ.

ವಿಜ್ಞಾನ ಮತ್ತು ತಂತ್ರಜ್ಞಾನದ ತಾಣವಾಗಿರುವ ಕರ್ನಾಟಕವು ಮೊದಲಿಗೆ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನೆಗೆ ಅಗತ್ಯವಿರುವ ತಿದ್ದುಪಡಿಯನ್ನು ಮಾಡಿ, ಇತರ ರಾಜ್ಯಗಳಿಗೆ ಮಾದರಿಯಾಗಬೇಕು. ಈ ಕಾರ್ಯನೀತಿ ಪತ್ರದ ಪ್ರತಿಗಳು ಆಸಕ್ತ ವಿಭಾಗಗಳು, ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಿಗೆ ದೊರಕಿಸಿಕೊಡಲಾಗುವುದು ಹಾಗೂ ಅದರ ವಿದ್ಯುನ್ಮಾನ ಪ್ರತಿಯು ಅಕಾಡೆಮಿಯ ವೆಬ್ ತಾಣ  https://kstacademy.in/ ನಲ್ಲಿ ಲಭ್ಯವಿದೆ  ಎಂದು ಅಧಿಕೃತ ಪ್ರಕಟನೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X