Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಲಸಿಕೆಯ ಗುರಿ ತಲುಪಲು ಅಸಾಧ್ಯ:...

ಕೋವಿಡ್ ಲಸಿಕೆಯ ಗುರಿ ತಲುಪಲು ಅಸಾಧ್ಯ: ಮಾಧ್ಯಮ ವರದಿ ನಿರಾಕರಿಸಿದ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ27 July 2021 10:45 PM IST
share
ಕೋವಿಡ್ ಲಸಿಕೆಯ ಗುರಿ ತಲುಪಲು ಅಸಾಧ್ಯ: ಮಾಧ್ಯಮ ವರದಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ, ಜು. 27: ಜುಲೈ ಅಂತ್ಯದ ಒಳಗೆ ಕೋವಿಡ್ ಲಸಿಕೆಯ 50 ಕೋಟಿ ಡೋಸ್ ಗಳನ್ನು ಜನರಿಗೆ ನೀಡುವ ಗುರಿಯನ್ನು ಭಾರತಕ್ಕೆ ತಲುಪಲು ಸಾಧ್ಯವಾಗಲಾರದು ಎಂದು ಪ್ರತಿಪಾದಿಸಿದ ಮಾದ್ಯಮ ವರದಿಗಳನ್ನು ಕೇಂದ್ರ ಸರಕಾರ ಮಂಗಳವಾರ ನಿರಾಕರಿಸಿದೆ. 

ಈ ವರದಿ ತಪ್ಪು ಮಾಹಿತಿ ಹಾಗೂ ತಪ್ಪು ನಿರೂಪಣೆಯಿಂದ ಕೂಡಿದೆ ಎಂದು ಹೇಳಿದ ಕೇಂದ್ರ ಸರಕಾರ, ಜನವರಿಯಿಂದ ಜುಲೈ 31ರ ವರೆಗೆ ಕೋವಿಡ್ ಲಸಿಕೆಯ 51.60 ಕೋಟಿಗೂ ಅಧಿಕ ಡೋಸ್ ಗಳನ್ನು ಪೂರೈಕೆ ಮಾಡಲಿದೆ ಎಂದು ಹೇಳಿದೆ. ಜುಲೈ ಅಂತ್ಯದ ಒಳಗೆ ಕೋವಿಡ್ ಲಸಿಕೆಯ 50 ಕೋಟಿ ಡೋಸ್ ಗಳನ್ನು ನೀಡುವ ಗುರಿಯನ್ನು ಭಾರತ ತಲುಪಲು ಸಾಧ್ಯವಿಲ್ಲ ಎಂದು ಆರೋಪಿಸಿದ ಮಾದ್ಯಮಗಳ ಇತ್ತೀಚೆಗಿನ ವರದಿಗಳನ್ನು ಉಲ್ಲೇಖಿಸಿ ಆರೋಗ್ಯ ಸಚಿವಾಲಯ ಈ ಹೇಳಿಕೆ ಬಿಡುಗಡೆ ಮಾಡಿದೆ. 

ಅಲ್ಲದೆ ತಿಂಗಳ ಅಂತ್ಯದೊಳಗೆ ಕೋವಿಡ್ ಲಸಿಕೆಯ 51.60 ಕೋಟಿ ಡೋಸ್ ಗಳು ಲಭ್ಯವಿರುವ ಬಗ್ಗೆ ಕೇಂದ್ರ ಸರಕಾರ ಮೇಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಅದು ಗಮನ ಸೆಳೆದಿದೆ. 2021 ಜನವರಿಯಿಂದ 2021 ಜುಲೈ 31ರ ವರೆಗೆ ಕೋವಿಡ್ ಲಸಿಕೆಯ 51.60 ಕೋಟಿಗೂ ಅಧಿಕ ಡೋಸ್ ಗಳನ್ನು ಪೂರೈಸುವುದು ಸತ್ಯ. ಮುಂಗಡ ಹಂಚಿಕೆ ಯೋಜನೆಗೆ ಅನುಗುಣವಾಗಿ ರಾಜ್ಯಗಳಿಗೆ ಲಸಿಕೆಯ ಡೋಸ್ ಗಳನ್ನು ಪೂರೈಕೆ ಮಾಡಲಾಗುತ್ತದೆ. ಅಲ್ಲದೆ, ಅವರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಈ ಲಸಿಕೆಗಳನ್ನು ರಾಜ್ಯಾದ್ಯಂತ ವಿವಿಧ ವೇಳಾಪಟ್ಟಿಗಳಲ್ಲಿ ತಿಂಗಳು ಪೂರ್ತಿ ಪೂರೈಕೆ ಮಾಡಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. 

ಆದರೆ, ನಿರ್ದಿಷ್ಟ ತಿಂಗಳ ಅಂತ್ಯದವರೆಗೆ ಕೋವಿಡ್ ಲಸಿಕೆಯ 50.60 ಕೋಟಿ ಡೋಸ್ ಗಳು ಲಭ್ಯವಿದೆ ಎಂದರೆ, ತಿಂಗಳ ಅಂತ್ಯದವರೆಗೆ ಪೂರೈಸಲಾದ ಪ್ರತಿ ಡೋಸ್ ಅನ್ನು ಕೂಡ ಜನರಿಗೆ ನೀಡಲಾಗುತ್ತದೆ ಎಂದು ಅರ್ಥವಲ್ಲ ಎಂದು ಅದು ಹೇಳಿದೆ. ಜನವರಿಯಿಂದ ಇಂದಿನ ದಿನಾಂಕದ ವರೆಗೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಯ ಒಟ್ಟು 45.7 ಕೋಟಿ ಡೋಸ್ ಗಳನ್ನು ಪೂರೈಕೆ ಮಾಡಲಾಗಿದೆ. ಹೆಚ್ಚುವರಿ 6.03 ಕೋಟಿ ಡೋಸ್ ಗಳನ್ನು ಜುಲೈ 31ರ ಒಳಗೆ ಪೂರೈಕೆ ಮಾಡುವ ನಿರೀಕ್ಷೆ ಇದೆ. ಇದರೊಂದಿಗೆ ಜನವರಿಯಿಂದ ಜುಲೈ 31ರ ವರೆಗೆ ಕೋವಿಡ್ ಲಸಿಕೆಯ ಒಟ್ಟು 51.73 ಕೋಟಿ ಡೋಸ್ ಗಳು ಪೂರೈಕೆಯಾಗಲಿವೆ ಎಂದು ಸಚಿವಾಲಯ ತಿಳಿಸಿದೆ. 

ಭಾರತ ಕೋವಿಡ್ ಲಸಿಕೆಯ 44.19 ಕೋಟಿ ಡೋಸ್ ಗಳನ್ನು ನೀಡಿದೆ. ಆದುದರಿಂದ ಅದನ್ನು ಶ್ಲಾಘಿಸಬೇಕು. ಇದರಲ್ಲಿ 9.6 ಕೋಟಿ ಜನರಿಗೆ ಎರಡೂ ಡೋಸ್ ಗಳನ್ನು ನೀಡಲಾಗಿದೆ. ಜೂನ್ ನಲ್ಲಿ ಕೋವಿಡ್ ಲಸಿಕೆಯ ಒಟ್ಟು 11.97 ಕೋಟಿ ಡೋಸ್ ಗಳನ್ನು ನೀಡಲಾಗಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X