ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್
ಮಂಗಳೂರು, ಜು.27: ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು.
ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರಿಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕ ಶಿವಲಿಂಗಯ್ಯ ಎಂ. ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು.
ಸಂಘದ ನಿರ್ದೇಶಕರಾದ ಕೇಶವ ಕುಂದರ್, ಪುಷ್ಪರಾಜ್ ಬಿ.ಎನ್., ಇಬ್ರಾಹಿಂ ಅಡ್ಕಸ್ಥಳ, ಆರಿಫ್ ಪಡುಬಿದ್ರೆ, ಜಿತೇಂದ್ರ ಕುಂದೇಶ್ವರ, ಆತ್ಮಭೂಷಣ್ ಭಟ್, ಸತ್ಯವತಿ, ಕೆ.ವಿಲ್ಫ್ರೆಡ್ ಡಿಸೋಜ, ವಿಜಯ ಕೋಟ್ಯಾನ್ ಪಡು, ಸುಖ್ಪಾಲ್ ಪೊಳಲಿ, ಸುರೇಶ್ ಡಿ. ಪಳ್ಳಿ, ಹರೀಶ್ ಮೋಟುಕಾನ, ಶಿಲ್ಪಾಕುಮಾರಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಭಿಷೇಕ್ ಕೆ. ಉಪಸ್ಥಿತರಿದ್ದರು.
Next Story